ಮತದಾನದ ಅವಕಾಶವನ್ನು ಯಾರೂ ಕಳೆದುಕೊಳ್ಳಬೇಡಿ: ಮಂಡ್ಯದಲ್ಲಿ ಮಂಗಳಮುಖಿಯರಿಂದ ಮನವಿ
ಮಂಡ್ಯ, ಮೇ, 10: ರಾಜ್ಯದೆಲ್ಲೆಡೆ ವಿಧಾನಸಭೆ ಚುನಾನವಣೆಯ ಮತದಾನ ಬಿರುಸಿನಿಂದ ನಡೆಯುತ್ತಿದೆ. ಹಾಗೆಯೆ ಮಂಡ್ಯದ ಶ್ರೀ ಲಕ್ಷ್ಮೀಜನಾರ್ಧನ ಶಾಲೆಯ ಮತಗಟ್ಟೆಯಲ್ಲಿ ಮಂಗಳಮುಖಿಯರು ಮತದಾನ ಮಾಡುವ ಮೂಲಕ ಗಮನಸೆಳೆದರು.
ಬೆಳಗ್ಗೆ 11 ಗಂಟೆಗೆ ಆಗಮಿಸಿದ ಮೂವರು ಮಂಗಳಮುಖಿಯರಾದ ಪ್ರಿಯಾಮಣಿ, ನೇತ್ರಾವತಿ, ಅನ್ವಿತಾ ಅವರು ತಮ್ಮ ಹಕ್ಕುನ್ನು ಚಲಾಯಿಸಿದರು. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ, ನಮಗೆ ಇಷ್ಟವಾದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಕಳುಹಿಸುವಂತಹ ವ್ಯವಸ್ಥೆ ನಮ್ಮಲ್ಲಿದೆ. ಇಂತಹ ಅವಕಾಶವನ್ನು ಯಾರೂ ಕಳೆದುಕೊಳ್ಳಬಾರದು. ಪ್ರತಿಯೊಬ್ಬರೂ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕನ್ನು ಚಲಾಯಿಸಬೇಕು. ಐದು ವರ್ಷಕ್ಕೊಮ್ಮೆ ಸಿಗುವ ಈ ಅವಕಾಶವನ್ನು ಯಾವುದೇ ಕಾರಣಕ್ಕೂ ಮಿಸ್ ಮಾಡಿಕೊಳ್ಳಬೇಡಿ ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ ಸುಮಾರು 145 ಮಂದಿ ಮಂಗಳಮುಖಿಯರಿದ್ದು, ಇದರಲ್ಲಿ 130ಕ್ಕೂ ಹೆಚ್ಚು ಮಂದಿ ತೃತೀಯಲಿಂಗಿಗಳಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾನದ ಹಕ್ಕುಳ್ಳವರು ತಪ್ಪದೇ ಮತ ಕೇಂದ್ರಕ್ಕೆ ಆಗಮಿಸಿ ಮತದಾನ ಮಾಡಬೇಕು ಎಂದು ಅವರು ಮನವಿ ಮಾಡಿದರು. ಬೆಳಗ್ಗೆ ಪ್ರಾರಂಭವಾದ ಮತದಾನ ಪ್ರಕ್ರಿಯೆ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಮತದಾನ ಶಾಂತಿಯತವಾಗಿ ನಡೆಯಿತು.
ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯವರೆಗೆ ಮಂದಗತಿಯಲ್ಲಿ ಸಾಗಿದ ಮತದಾನ 10 ಗಂಟೆಯ ನಂತರ ಸ್ವಲ್ಪ ಪ್ರಮಾಣದಲ್ಲಿ ಚುರುಕು ಪಡೆದುಕೊಂಡಿತು. ಮಧ್ಯಾಹ್ನ ಸುಡು ಬಿಸಿಲಿನಲ್ಲಿ ಸ್ವಲ್ಪ ಪ್ರಮಾಣದಲ್ಲಿಯೂ ಕಡಿಮೆಯಾದಂತೆ ಕಂಡುಬಂದಂತಹ ಮತದಾನ, ಮಧ್ಯಾಹ್ನದ ವೇಳೆಗೆ ಮತ್ತಷ್ಟು ಚುರುಕು ಪಡೆದುಕೊಂಡಿತು.
ಇನ್ನು ನಗರದ ಹಾಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತ ಕೇಂದ್ರದಲ್ಲಿ 95 ವರ್ಷದ ವೃದ್ಧೆಯೊಬ್ಬರು ವೀಲ್ ಚೇರ್ನಲ್ಲಿ ತೆರಳಿ ಮತದಾನ ಮಾಡಿದರೆ, ವಯೋವೃದ್ಧ ರಾಮಚಂದ್ರ ಎನ್ನುವವರು ಮೊಮ್ಮಕ್ಕಳ ಸಹಾಯದೊಂದಿಗೆ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು. ಅಂಗವಿಕಲ ಮಹಿಳೆಯೊಬ್ಬರು ಮೂರು ಚಕ್ರದ ವಾಹನದಲ್ಲಿ ತಮ್ಮ ಸಂಬಂಧಿಕರೊಂದಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು.
ಹಾಗೆಯೆ ಶ್ರೀರಂಗಪಟ್ಟಣ ತಾಲೂಕು ಮಂಡ್ಯದ ಕೊಪ್ಪಲು ಗ್ರಾಮದ 102 ವರ್ಷದ ದೇವೀರಮ್ಮ ಅವರು ತಮ್ಮ ಸಂಬಂಧಿಕರ ಸಹಾಯದಿಂದ ಮತಗಟ್ಟೆ 106ರಲ್ಲಿ ಮತ ಚಲಾಯಿಸಿದರು.












Click it and Unblock the Notifications