ಮಂಡ್ಯ: ರೈತಸಂಘದ ಕಾರ್ಯಕರ್ತನ ಮನೆಯಿಂದ ಅಕ್ರಮ ಮದ್ಯ ವಶ
ಮಂಡ್ಯ, ಮೇ 05: ರೈತಸಂಘದ ಕಾರ್ಯಕರ್ತನೊಬ್ಬನ ಮನೆಯಲ್ಲಿ ಅಕ್ರಮ ಮದ್ಯ ಪತ್ತೆಯಾಗಿದೆ. ಮಂಡ್ಯ ಜಿಲ್ಲೆಯ ಪಾಂಡವರಪುರ ಪಟ್ಟಣದ ಕೃಷ್ಣನಗರದ ರೈತಸಂಘದ ಕಾರ್ಯಕರ್ತ ಚಿಟ್ಟನಹಳ್ಳಿ ಮಹೇಶ ಎಂಬುವರ ಮನೆಯ ಮೇಲೆ ಅಬಕಾರಿ ಉಪ ಆಯುಕ್ತರು ದಾಳಿ ನಡೆಸಿದ್ದು ಈ ವೇಳೆ 16 ಲೀಟರ್ ಅಕ್ರಮ ಮದ್ಯ ಪತ್ತೆಯಾಗಿದ್ದು, ದಾಳಿ ವೇಳೆ ಮಹೇಶ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.
ಪಟ್ಟಣದ ಕೃಷ್ಣನಗರದಲ್ಲಿ ನಿವೃತ್ತ ಉಪ ಪ್ರಾಂಶುಪಾಲ ಎಸ್.ನಾರಾಯಣಗೌಡ ಎಂಬುವರಿಗೆ ಸೇರಿದ ಮನೆಯ ಮೊದಲನೆ ಮಹಡಿಯಲ್ಲಿ ರೈತ ಸಂಘದ ಕಾರ್ಯಕರ್ತ ಮತ್ತು ಗುತ್ತಿಗೆದಾರ ಚಿಟ್ಟನಹಳ್ಳಿ ಮಹೇಶ ಬಾಡಿಗೆಗೆ ಇದ್ದರು ಎನ್ನಲಾಗಿದೆ. ತಮ್ಮ ಮನೆಯಲ್ಲಿ ಮದ್ಯವನ್ನು ಸಂಗ್ರಹಿಸಿಟ್ಟಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅಬಕಾರಿ ಉಪ ಆಯುಕ್ತ ಮಾದೇಶ್ ತಮ್ಮ ಸಿಬ್ಬಂದಿಯೊಡನೆ ದಾಳಿ ನಡೆಸಿದಾಗ ಅಕ್ರಮ ಮದ್ಯ ಪತ್ತೆಯಾಗಿದೆ.

ದಾಳಿ ನಡೆಯುತ್ತಿದ್ದಂತೆ ಸಾರ್ವಜನಿಕರಿಗೆ ವಿಷಯ ತಿಳಿದು ಮಹೇಶನ ಮನೆ ಮುಂದೆ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು ಕಂಡು ಬಂದಿತು. ವಶಪಡಿಸಿಕೊಂಡ ಅಕ್ರಮ ಮದ್ಯವನ್ನು ಅಬಕಾರಿ ಅಧಿಕಾರಿಗಳು ಚೀಲದಲ್ಲಿ ತುಂಬಿಸಿ ಕೊಂಡೊಯ್ದಿದ್ದಾರೆ. ಈ ತನಿಖೆ ನಡೆಯುತ್ತಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications