ಮಹಾರಾಷ್ಟ್ರಕ್ಕೆ ಜೈ ಅಂದ ಕರ್ನಾಟಕದ ಮಂತ್ರಿ: ಭಾರೀ ವಿರೋಧ
ಮಂಡ್ಯ, ಫೆಬ್ರವರಿ 27: ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರಕ್ಕೆ ಜೈಕಾರ ಕೂಗುವ ಮೂಲಕ ತೋಟಗಾರಿಕಾ ಸಚಿವ ಕೆ.ಸಿ.ನಾರಾಯಣಗೌಡ ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ.
Recommended Video
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಫೆಬ್ರವರಿ 20ರಂದು ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರು ಮಹಾರಾಷ್ಟ್ರಕ್ಕೆ ಜೈಕಾರ ಹಾಕಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಕಲಾತಂಡದ ಕುರಿತು ಮಾತನಾಡುವ ವೇಳೆ ಮಹಾರಾಷ್ಟ್ರಕ್ಕೆ ಜೈ ಎಂದಿದ್ದಾರೆ.
ಸಭೆಯಲ್ಲಿ ಮಾತನಾಡುತ್ತಾ ಅವರು, "ಈಗ ನಾನು ಏನೇ ಆಗಿದ್ದರೂ ಅದು ಮಹಾರಾಷ್ಟ್ರದಿಂದ. 25 ವರ್ಷಗಳ ಹಿಂದೆ ಮುಂಬೈಗೆ ಹೋಗಿ ಹೋಟೇಲ್ ಉದ್ಯಮಿಯಾಗಿ, ಬಿಲ್ಡರ್ ಆಗಿ, ಆದಾದ ಮೇಲೆ ಇಲ್ಲಿಗೆ ಬಂದು ರಾಜಕಾರಣಿಯಾದೆ'' ಎಂದಿದ್ದಾರೆ.

"ನನ್ನನ್ನು ಉದ್ಯಮಿಯನ್ನಾಗಿ ಮಾಡಿದ್ದೇ ಮಹಾರಾಷ್ಟ್ರ. ಜೈ ಮಹಾರಾಷ್ಟ್ರ ಮತ್ತು ಜೈ ಶಿವಾಜಿ ಮಹಾರಾಜ್ ಎಂದು ಹೇಳಲು ಬಯಸುತ್ತೇನೆ. ಇಂದು ನನ್ನ ದೇಹದಲ್ಲಿ ಶಕ್ತಿ, ತಾಕತ್ತು ಇದೆ ಎಂದರೆ ಅದು ಮಹಾರಾಷ್ಟ್ರದ್ದು, ಜೈ ಮಹಾರಾಷ್ಟ್ರ'' ಎಂದು ಘೋಷಣೆ ಕೂಗಿದ್ದಾರೆ.
ಭಾಷಣವನ್ನು ಪೂರ್ತಿಯಾಗಿ ಮರಾಠಿಯಲ್ಲೇ ಮಾಡಿರುವ ನಾರಾಯಣಗೌಡ, ಮಹಾರಾಷ್ಟ್ರದ ಪರ ಜೈಕಾರ ಕೂಗಿ ಇದೀಗ ಟೀಕೆಗೆ ಒಳಗಾಗಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ. ಕರ್ನಾಟಕದಲ್ಲಿದ್ದುಕೊಂಡು ಬೇರೆ ರಾಜ್ಯವನ್ನು ಹೊಗಳಿ, ಜೈಕಾರ ಹಾಕಿದ್ದಕ್ಕೆ ಟೀಕೆಗಳೂ ಕೇಳಿಬರುತ್ತಿವೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications