Government Employee: ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಕೆಎಎಸ್ ಅಧಿಕಾರಿ
ಮಂಡ್ಯ, ಡಿಸೆಂಬರ್ 02: ಕೆಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಎಂಬ ಸುದ್ದಿಗಳು ಹಬ್ಬಿದೆ. ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆಯುವ ಅಧಿಕಾರಿ ಸ್ವಾಮೀಜಿಯಾಗಿ ಮುಂದಿನ ಜೀವನವನ್ನು ಕಳೆಯಲಿದ್ದಾರೆ. ಡಾ. ಹೆಚ್. ಎಲ್. ನಾಗರಾಜು ಹೆಸರಿನ ಅಧಿಕಾರಿ ಹಾಲಿ ಮಂಡ್ಯ ಅಪರ ಜಿಲ್ಲಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಯನ್ನು ನೋಡಿಕೊಳ್ಳುತ್ತಿದ್ದಾರೆ.
ಮಂಡ್ಯ ಅಪರ ಜಿಲ್ಲಾಧಿಕಾರಿ ಹೆಚ್. ಎಲ್. ನಾಗರಾಜು ಕೆಲವೇ ದಿನಗಳಲ್ಲಿ ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡಿ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ ಎಂದು ಟಿವಿ 9 ವರದಿ ಮಾಡಿದೆ. ಆಧ್ಯಾತ್ಮದ ಕಡೆ ಹೆಚ್ಚಿನ ಒಲವು ಹೊಂದಿರುವ ಹೆಚ್. ಎಲ್. ನಾಗರಾಜು ಈ ತೀರ್ಮಾನ ಅಚ್ಚರಿಗೆ ಕಾರಣವಾಗಿದೆ.

ಈ ಹಿಂದೆ ಸಹ ಹೆಚ್. ಎಲ್. ನಾಗರಾಜು 2011ರಲ್ಲಿ ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದಿದ್ದರು. ಆಗ ಅವರು ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ತಮ್ಮ ಹೆಸರನ್ನು ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಬದಲಾವಣೆ ಮಾಡಿಕೊಂಡಿದ್ದರು.
ಒತ್ತಡಕ್ಕೆ ಮಣಿದಿದ್ದರು: ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಹೆಚ್. ಎಲ್. ನಾಗರಾಜು ಆದಿಚುಂಚನಗಿರಿ ಮಠದಲ್ಲಿ ಸನ್ಯಾಸ ದೀಕ್ಷೆ ಪಡೆದು ತಮ್ಮ ಹೆಸರನ್ನು ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಬದಲಾವಣೆ ಮಾಡಿಕೊಂಡಿದ್ದರು. ಆದರೆ ಸಾರ್ವಜನಿಕರು, ಕುಟುಂಬದವರ ವಿರೋಧ ಮಣಿದಿದ್ದರು. ಸರ್ಕಾರಿ ಉದ್ಯೋಗಕ್ಕೆ ವಾಪಸ್ ಆಗಿದ್ದರು. ಈಗ ಮತ್ತೊಮ್ಮೆ ಸನ್ಯಾಸ ದೀಕ್ಷೆ ಪಡೆಯಲಿದ್ದಾರೆ.
ಸುಮಾರು 2 ವರ್ಷಗಳಿಂದ ಮಂಡ್ಯ ಅಪರ ಜಿಲ್ಲಾಧಿಕಾರಿಗಳಾದಿ ಡಾ. ಹೆಚ್. ಎಲ್ ನಾಗರಾಜು ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಸದ್ಯ ಅವರು ಡಿಸೆಂಬರ್ 20ರಿಂದ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಸಮ್ಮೇಳನ ಮುಗಿಯುತ್ತಿದ್ದಂತೆಯೇ ಅವರು ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿ ಹೇಳಿದೆ.
ಡಾ. ಹೆಚ್. ಎಲ್ ನಾಗರಾಜು ಅವರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಸದ್ಯಕ್ಕೆ ಈ ಕುರಿತು ಡಾ. ಹೆಚ್. ಎಲ್ ನಾಗರಾಜು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸನ್ಯಾಸ ದೀಕ್ಷೆ ಸ್ವೀಕಾರ: 16 ಜುಲೈ 2011ರಂದು ಡಾ. ಹೆಚ್. ಎಲ್ ನಾಗರಾಜು ದಿಢೀರ್ ಬೆಳವಣಿಗೆಯಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಿದ್ದರು. ಗುರು ಪೂರ್ಣಿಮಾ ದಿನವಾದ ಶುಕ್ರವಾರ ಅವರು ಸನ್ಯಾಸ ದೀಕ್ಷೆ ಪಡೆದುಕೊಂಡಿದ್ದರು. ಆಗ ಅವರು ಕೆ. ಆರ್. ಪೇಟೆಯ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
ಸನ್ಯಾಸ ದೀಕ್ಷೆ ಪಡೆದ ಬಳಿಕ ಅವರ ಹೆಸರು ನಿಶ್ಚಲಾನಂದನಾಥ ಸ್ವಾಮೀಜಿ ಎಂದು ಬದಲಾಗಿತ್ತು. ಈ ಕುರಿತು ಮಾತನಾಡಿದ್ದ ಅವರು, "ಈ ಹಂತದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ದೊಡ್ಡ ಸ್ವಾಮೀಜಿಗಳು ಮಾತನಾಡಲು ಸಮ್ಮತಿಸಿದರೆ ಪ್ರತಿಕ್ರಿಯೆ ನೀಡುತ್ತೇನೆ" ಎಂದು ಹೇಳಿದ್ದರು.
ತುಮಕೂರು ಜಿಲ್ಲೆಯ ಕುಣಿಗಲ್ ಮೂಲದ ಡಾ. ಹೆಚ್. ಎಲ್. ನಾಗರಾಜು, ಹೊನ್ನೆನಹಳ್ಳಿ ಗ್ರಾಮದ ಲಿಂಗಯ್ಯ, ಹೊನ್ನಮ್ಮ ದಂಪತಿಗಳ ಪುತ್ರ. 2005ನೇ ಬ್ಯಾಚ್ನ ಕೆಎಎಸ್ ಅಧಿಕಾರಿ. ಸನ್ಯಾಸ ದೀಕ್ಷೆ ಪಡೆಯುವಾಗ ಅವರು ಸರ್ಕಾರಿ ಉದ್ಯೋಗಕ್ಕೆ ರಾಜೀನಾಮೆ ನೀಡಿರಲಿಲ್ಲ. ಸದ್ಯ ಅವರು ರಜೆ ಮೇಲೆ ಇದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದರು.
ಆದರೆ ಜುಲೈ 31ರಂದು ದಿಢೀರ್ ಬೆಳವಣಿಗೆಯಲ್ಲಿ ಡಾ. ಹೆಚ್. ಎಲ್ ನಾಗರಾಜು ಸನ್ಯಾಸ ದೀಕ್ಷೆ ತೊರೆದು ಸರ್ಕಾರಿ ಸೇವೆಗೆ ಮರಳಲು ಬಯಸಿದ್ದರು. 15 ದಿನಗಳ ರಜೆಯ ಬಳಿಕ ಸನ್ಯಾಸ ದೀಕ್ಷೆ ತೊರೆದು ಕರ್ತವ್ಯಕ್ಕೆ ಮರಳುತ್ತೇನೆ ಎಂದು ಅವರು ಘೋಷಣೆ ಮಾಡಿದ್ದರು.
-
Karnataka Budget 2026: 4.5 ಲಕ್ಷ ಕೋಟಿಯ ರಾಜ್ಯ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಗುವುದೇ ಭರ್ಜರಿ ಕೊಡುಗೆ? -
5,00,00,000 ರೂಪಾಯಿ, ಕನ್ನಡ ನಾಡಿನ ಭಕ್ತರಿಗೆ ಭರ್ಜರಿ ಉಡುಗೊರೆ... Karnataka Budget 2026 -
ರಾಜ್ಯ ಬಜೆಟ್ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: 56,432 ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ












Click it and Unblock the Notifications