Get Updates
Get notified of breaking news, exclusive insights, and must-see stories!

ಕೆರಗೋಡು ಧ್ವಜ ವಿವಾದ: ಮಂಡ್ಯ ಬಂದ್‌ಗೆ ಸಹಕರಿಸುವಂತೆ ಗುಲಾಬಿ ಹೂ ನೀಡಿ ಮನವಿ

ಮಂಡ್ಯ: ವಿಶ್ವ ಹಿಂದೂ ಪರಿಷತ್, ಬಜರಂಗದಳ, ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ನಗರದ ವರ್ತಕರು ಮತ್ತು ಅಂಗಡಿ ವ್ಯಾಪರಸ್ಥರಿಗೆ ಗುಲಾಬಿ ಹೂ ನೀಡಿ ಸ್ವಯಂ ಪ್ರೇರಿತ ಮಂಡ್ಯ ನಗರ ಬಂದ್‌ಗೆ ಮನವಿ ಮಾಡಿದರು. ಶುಕ್ರವಾರ ಮಂಡ್ಯ ಬಂದ್‌ಗೆ ಕರೆ ನೀಡಲಾಗಿದೆ.

ಬೇಕರಿ ಮಾಲೀಕರ ಸಂಘದ ಅಧ್ಯಕ್ಷ ಎಚ್.ಆರ್. ಅರವಿಂದ್ ಮಾತನಾಡಿ, ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಮಾಡಿರುವ ಬಗ್ಗೆ, ಕೆರಗೋಡು ಗ್ರಾಮಸ್ಥರು ಎಷ್ಟೇ ಮನವಿ ಮಾಡಿದರು ಬೆಲೆ ಕೊಡದ ಜಿಲ್ಲಾಡಳಿತ ಹಾಗು ಕಾಂಗ್ರೆಸ್ ಸರ್ಕಾರ ಹಿಂದೂಗಳ ದಮನಕಾರಿ ನೀತಿ ಅನುಸರಿಸುತ್ತಿದೆ, ಪಂಚಾಯಿತಿ ಸದಸ್ಯರ ನಿರ್ಣಯ ಹನುಮ ಧ್ವಜದ ಪರವಾಗಿದ್ದರೂ ಬೇಕೆಂದೇ ಗೊಂದಲ ಮೂಡಿಸುವ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದರು.

Keragodu Hanumadhwaja Row: Hindu activists distribute roses, call for Mandya bandh

ಜನವರಿ 26 ರಂದು ರಾಷ್ಟ್ರೀಯ ಧ್ವಜ ಹಾರಿಸಿ ಗೌರವ ಸೂಚಿಸಲಾಯಿತು, ದೇಶ ಭಕ್ತಿಯ ಬಗ್ಗೆ ಮಂಡ್ಯದ ಜನರಿಗೆ ಕಾಂಗ್ರೆಸ್ ಪಾಠ ಮಾಡಬೇಕಿಲ್ಲ, ಭಾರತವನ್ನು ತುಂಡರಿಸುವ, ಕರ್ನಾಟಕವನ್ನು ಪ್ರತ್ಯೇಕ ರಾಷ್ಟ್ರ ಮಾಡುವ ಮಾತನಾಡಿರುವ ಕಾಂಗ್ರೆಸ್ ಪಕ್ಷದಿಂದ ರಾಷ್ಟ್ರಭಕ್ತಿಯ, ಭಾರತ ಅಖಂಡತೆಯ ಬಗ್ಗೆ ಮಾತುಗಳು ಹಾಸ್ಯಾಸ್ಪದ, ರಾಮ ಭಕ್ತಿ-ರಾಷ್ಟ್ರ ಶಕ್ತಿ, ನಾವು ಹನುಮನ ನಾಡಿನವರು ಎಂದರು.

ಧ್ವಜ ಹಾರಿಸುವವರೆಗೂ ಹೋರಾಟ ನಿಲ್ಲಲ್ಲ

ಹನುಮ ಧ್ವಜವನ್ನು ಹಾರಿಸುವವರಗೂ ನಮ್ಮ ಹೋರಾಟ ನಿರಂತವಾಗಿರುತ್ತದೆ. ಹಾಗಾಗಿ ಮಂಡ್ಯನಗರ ಬಂದ್‌ಗೆ ಸಾರ್ವಜನಿಕರು, ವರ್ತಕರು, ರಸ್ತೆ ಬದಿ ವ್ಯಾಪಾರಿಗಳು, ಹೋಟೆಲ್ ಮಾಲೀಕರು, ಬೇಕರಿ ಮಾಲೀಕರು, ಆಟೋ ಚಾಲಕರು ಸೇರಿದಂತೆ ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿ ಸ್ವಯಂ ಪ್ರೇರಿತ ಬಂದ್‌ಗೆ ಸಹಕರಿಸಿ ಎಂದರು.

ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಸಹಕಾರ ನೀಡಿ, ಬಲವಂತ ಮಾಡುವುದಿಲ್ಲ, ಸಾವಿರಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಮಂಡ್ಯ ನಗರದಲ್ಲಿ ಬೈಕ್ ಮೂಲಕ ತೆರಳಿ ಮನವಿ ಮಾಡಲಿದ್ದಾರೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+