Mandya: ಕೆರಗೋಡು ಹನುಮ ಧ್ವಜ ವಿವಾದದ ಬಳಿಕ ಧ್ವಜಸ್ತಂಭವನ್ನೇ ತೆರವು ಮಾಡಲು ಆದೇಶ
ಮಂಡ್ಯ : ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಿರ್ಮಿಸಲಾಗಿದ್ದ ವಿವಾದಿತ ಧ್ವಜಸ್ತಂಭವನ್ನೇ ತೆರವುಗೊಳಿಸುವಂತೆ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಆದೇಶ ನೀಡಿದ್ದಾರೆ. ಈ ಮೂಲಕ ಮತ್ತೊಂದು ವಿವಾದ ಆರಂಭವಾಗುವ ಸಾಧ್ಯತೆ ಇದೆ.
ಗ್ರಾಮದ ವಿವಾದಿತ ಸ್ಥಳದಲ್ಲಿರುವ ಧ್ವಜಸ್ತಂಭವನ್ನು ತೆರವುಗೊಳಿಸಿ ಗ್ರಾಮ ಪಂಚಾಯಿತಿ ಆಸ್ತಿಯನ್ನು ಸುಪರ್ದಿಗೆ ಪಡೆದು ಯತಾಸ್ಥಿತಿ ಕಾಪಾಡಲು ಕ್ರಮ ವಹಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಂ. ಬಾಬು ಅವರು ಸೂಚನೆ ನೀಡಿ ಆದೇಶ ಹೊರಡಿಸಿದ್ದಾರೆ.

ಧ್ವಜಸ್ತಂಭದಲ್ಲಿ ರಾಷ್ಟ್ರಧ್ವಜ ಹಾಗೂ ಕರ್ನಾಟಕದ ಕನ್ನಡ ಬಾವುಟವನ್ನು ಹಾರಿಸುವುದಕ್ಕೆ ಮಾತ್ರ ಅವಕಾಶವಿದ್ದು, ಬೇರೆ ಯಾವುದೇ ಧಾರ್ಮಿಕ/ರಾಜಕೀಯ ಪಕ್ಷದ ಭಾವುಟವನ್ನು ಹಾರಿಸುವಂತಿಲ್ಲ. ಧ್ವಜಾರೋಹಣ ಮಾಡುವ ಸಮಯ ಬೆಳಗ್ಗೆ 7 ರಿಂದ 8 ರಿಂದ ಬಳಿಕ ಸಂಜೆ 5.30 ರಿಂದ 5.45ರೊಳಗೆ ಇಳಿಸಬೇಕು ಎಂದು ಷರತ್ತು ವಿಧಿಸಲಾಗಿತ್ತು.
ಕೇಸರಿ ಧ್ವಜ ಹಾರಿಸಿದ ಬಳಿಕ ವಿವಾದ
ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾರ್ಪಾಡು ಮಾಡುವ ಸುತ್ತೋಲೆಗಳಿಗೆ ಬದ್ಧರಾಗತಕ್ಕದ್ದು. ಯಾವುದೇ ಗಲಭೆಗಳಿಗೆ ಅವಕಾಶ ಕೊಡಬಾರದು. ಧ್ವಜಾರೋಹಣ ಮಾಡುವ 6 ರಿಂದ 7 ದಿನಗಳ ಮುಂಚಿತವಾಗಿ ಗ್ರಾಮ ಪಂಚಾಯಿತಿ ಹಾಗೂ ಕೆರಗೋಡು ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಸೂಚನೆ ನೀಡಲಾಗಿತ್ತು. ಆದರೆ ಗೌರಿಶಂಕರ ಸೇವಾಟ್ರಸ್ಟ್ನವರು ಷರತ್ತುಗಳನ್ನು ಉಲ್ಲಂಘಿಸಿ ಧ್ವಜಸ್ತಂಭದಲ್ಲಿ ಕೇಸರಿ ಧ್ವಜವನ್ನು ಹಾರಿಸಿರುವುದು ನಿಯಮಬಾಹಿರವಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಷರತ್ತುಗಳನ್ನು ಉಲ್ಲಂಘಿಸಿರುವ ಬಗ್ಗೆ ಸಂಬಂಧಿಸಿದವರನ್ನು ಕರೆಯಿಸಿ ತಿಳುವಳಿಕೆ ಹೇಳಿದರೂ ಸಹ ಕೇಸರಿ ಧ್ವಜವನ್ನು ಯತಾಸ್ಥಿತಿಯಲ್ಲಿ ಹಾರಿಸಲಾಗಿದೆ ಎಂಬ ಅಂಶವನ್ನು ತಿಳಿಸಲಾಗಿತ್ತು. ಆದರೆ ಅವರು ಪಂಚಾಯತ್ ರಾಜ್ ಅಧಿನಿಯಮ 1993ರ ನಿಯಮಗಳನ್ನು ಉಲ್ಲಂಘಿಸಿರುವುದರಿಂದ ಅಧಿನಿಯಮ 57ರ ಪ್ರಕರಣ 237ನೇ ಪ್ರಕರಣದ ಅಡಿಯಲ್ಲಿ ಕ್ರಮ ತೆಗೆದುಕೊಳ್ಳುವುದಕ್ಕಾಗಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಯಾದ ನನಗೆ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಶಿಫಾರಸ್ಸು ಮಾಡಿದ್ದರ ಜೊತಗೆ ಸಂಬಂಧಿಸಿದ ಗ್ರಾ.ಪಂ. ಪಿಡಿಓಗೂ ಸಹ ಧ್ವಜಸ್ತಂಭ ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ತಾ.ಪಂ. ಆಡಳಿತಾಧಿಕಾರಿ ಎಂ. ಬಾಬು ಆದೇಶದಲ್ಲಿ ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications