ಅಕ್ಟೋಬರ್ 5ರಂದು ಯಾವೆಲ್ಲಾ ಕಾರ್ಯಕ್ರಮಗಳಿರಲಿವೆ?-ಇಲ್ಲಿದೆ ಸಂಪೂರ್ಣ ಮಾಹಿತಿ
ಮಂಡ್ಯ, ಅಕ್ಟೋಬರ್, 04: ಮೈಸೂರು ದಸರಾದ ಆದಿ ಸ್ಥಳವಾದ ಶ್ರೀರಂಗಪಟ್ಟಣದಲ್ಲಿ ದಸರಾಗೆ ಶುಕ್ರವಾರ (ಅಕ್ಟೋಬರ್ 04) ವಿದ್ಯುಕ್ತ ಚಾಲನೆ ದೊರೆತಿದೆ. ಅಕ್ಟೋಬರ್ 7ರ ವರೆಗೆ ದಸರಾ ಕಾರ್ಯಕ್ರಮಗಳು ಅದ್ಧೂರಿಯಾಗಿ ನೆರವೇರಲಿದ್ದು, ಪ್ರತಿ ದಿನವೂ ಧಾರ್ಮಿಕ & ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಹಾಗಾದ್ರೆ, ಶನಿವಾರ(ಅ.5) ಏನೇನು ಕಾರ್ಯಕ್ರಮಗಳು ನಡೆಯಲಿವೆ ಎಂದು ಇಲ್ಲಿ ತಿಳಿಯಿರಿ.
ಅಕ್ಟೋಬರ್ 5ರಂದು ಬೆಳಗ್ಗೆ 6:30ಕ್ಕೆ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಬೆಳಗ್ಗೆ 7 ಗಂಟೆಗೆ ಕರಿಘಟ್ಟ ದೇವಸ್ಥಾನದ ಪಾದದಿಂದ ದೇವಸ್ಥಾನದ ಮೇಲ್ಭಾಗದವರೆಗೆ ಬೆಟ್ಟ ಹತ್ತುವ ಸ್ಪರ್ಧೆ ನಡೆಯಲಿದೆ. 29 ವರ್ಷ ಒಳಗಿನ ಯುವಕ-ಯುವತಿಯರು ಹಾಗೂ 30 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಗೆ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಬೆಳಗ್ಗೆ 10 ಗಂಟೆಯಿಂದ 12:30ರ ವರೆಗೆ ಮಕ್ಕಳ ಚಲನಚಿತ್ರಗಳ ಸಿನಿಮೋತ್ಸವ ನಡೆಯಲಿದೆ. ಗಂಜಾಂನ ಶ್ರೀದೇವಿ ಚಿತ್ರಮಂದಿರದಲ್ಲಿ 'ಅನ್ನ', ಬಾಬುರಾಯನ ಕೊಪ್ಪಲುನ ಭಾರತಿ ಚಿತ್ರಮಂದಿರದಲ್ಲಿ 'ನಾನು ಸಚಿನ್ ತೆಂಡೂಲ್ಕರ್ ಅಲ್ಲ' ಹಾಗೂ ಅರಕೆರೆ ಮಂಜುನಾಥ್ ಚಿತ್ರಮಂದಿರದಲ್ಲಿ 'ಜೀರ್ಜಿಂಬೆ' ಮಕ್ಕಳ ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.
ಮಹಿಳೆಯರಿಗೆ ವಿವಿಧ ಕಾರ್ಯಕ್ರಮಗಳು: ಇನ್ನೊಂದೆಡೆ ಬೆಳಗ್ಗೆ 10 ಗಂಟೆಗೆ ಶ್ರೀ ರಂಗನಾಥಸ್ವಾಮಿ ದೇವಾಲಯದ ಶ್ರೀರಂಗ ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಹಿಳಾ ದಸರಾ ನಡೆಯಲಿದೆ. ರಂಗೋಲಿ ಸ್ಪರ್ಧೆ, ಮೆಹಂದಿ ಸ್ಪರ್ಧೆ, ಬಾಲ್ಯ ವಿವಾಹ ನಿಷೇಧ ಕುರಿತು ಗೀತೆ, ಮಕ್ಕಳ ಕಳ್ಳ ಸಾಗಾಣಿಕೆ ತಡೆಗಟ್ಟುವ ಕುರಿತು ನಾಟಕ, ಜಾನಪದ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 1 ಗಂಟೆಯಿಂದ 2:30ರ ವರೆಗೆ ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಶ್ರೀ ರಂಗವೇದಿಕೆಯಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ ವತಿಯಿಂದ ಕವಿಗೋಷ್ಠಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯ ನಡೆಯಲಿದೆ. ಮಧ್ಯಾಹ್ನ 3ಗಂಟೆಗೆ ಶ್ರೀರಂಗ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮದ್ಯಾಹ್ನ 3 ರಿಂದ 3.10 ವರಗೆ ಜಾನಪದ ಸಂಗೀತ, 3.15 ರಿಂದ 3.25 ರವರೆಗೆ ನೃತ್ಯ ಕಲಾ ಪ್ರದರ್ಶನ, 3.30 ರಿಂದ 3.40 ರವರೆಗೆ ಜನಪದ ಮಹಾಕಾವ್ಯ 3.45 ರಿಂದ ಸಂಜೆ 4.55 ರವರೆಗೆ ಮೈಸೂರು ರಾಜರ ಲಾವಣಿಗಳನ್ನು ಹಾಡಲಾಗುವುದು.
ವಿಜಯ್ ಪ್ರಕಾಶ್ ತಂಡದಿದ ಸಂಗೀತ ಸಂಜೆ: ಇದಾದ ಬಳಿಕ ಸಂಜೆ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಶ್ರೀರಂಗನಾಥಸ್ವಾಮಿ ದೇವಾಲಯದ ಶ್ರೀರಂಗ ವೇದಿಕೆಯಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 5ರಿಂದ 5:10ರ ವರೆಗೆ ಜಾನಪದ ಗೀತೆ, 5:15ರಿಂದ 5.25ರ ವರೆಗೆ ಸೋಬಾನೆ ಪದ, 5:30ರಿಂದ 5:40ರ ವರೆಗೆ ಮೂಡಲಪಾಯ ಯಕ್ಷಗಾನ ನಡೆಯಲಿದೆ.
5:45ರಿಂದ 5:55ರ ವರೆಗೆ ಜಾನಪದ ಗೀತೆ, 6 ಗಂಟೆಯಿಂದ 6:10 ವರೆಗೆ ಕರ್ನಾಟಕ ಶಾಸ್ತ್ರೀಯ ಸಂಗೀತ, 6.15 ರಿಂದ 6:25ರ ವರೆಗೆ ರಂಗಗೀತೆ, 6.30ರಿಂದ 6:40ರ ವರೆಗೆ ಜಾನಪದ ಗೀತೆ, 6:45ರಿಂದ 7ರ ವರೆಗೆ ಮಾತನಾಡುವ ಗೊಂಬೆ, ಜಾದೂ ಕಲಾವಿದೆ ಕಾರ್ಯಕ್ರಮಗಳು ನಡೆಯಲಿವೆ. ಸಂಜೆ 7 ಗಂಟೆಗೆ ಖ್ಯಾತ ಹಿನ್ನೆಲೆ ಗಾಯಕರಾದ ವಿಜಯ್ ಪ್ರಕಾಶ್ ಮತ್ತು ತಂಡದಿದ ಸಂಗೀತ ರಸ ಸಂಜೆ ಕಾರ್ಯಕ್ರಮ ನಡೆಯಲಿದೆ.
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications