ಕರ್ನಾಟಕ: ಮಳೆ ಅನಾಹುತ ನಿರಂತರ, ಸುನಾಮಿ ಬಗ್ಗೆ ಕೋಡಿಶ್ರೀ ಹೇಳಿದ ಕರಾಳ ಭವಿಷ್ಯ!
ಮಂಡ್ಯ, ಸೆಪ್ಟಂಬರ್ 09: ಕರ್ನಾಟಕದಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ, ಅನಾಹುತಗಳು ಮುಂದುವರಿಯಲಿವೆ. ಮುಂದೆ ಭಾರತದಲ್ಲಿ ಸುನಾಮಿ ಬರುವ ನಿರೀಕ್ಷೆ ಎಂದು ಕೋಡಿ ಮಠದ ಶ್ರೀಗಳು ಕರಾಳ ಭವಿಷ್ಯದ ಬಗ್ಗೆ ಮುನ್ಸೂಚನೆ ನೀಡಿದ್ದಾರೆ. ಕೊರೊನಾ ವಿಚಾರದಲ್ಲಿ ಶ್ರೀಗಳು ಇದೇ ರೀತಿ ಭವಿಷ್ಯ ನುಡಿದಿದ್ದರು.
ಹಾಸನ ಜಿಲ್ಲೆ ಅರಸೀಕೆರೆಯ ಕೋಡಿಮಠದ ಶ್ರೀಗಳು ಶುಕ್ರವಾರದಂದು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆಯಲ್ಲಿ ರಾಜ್ಯದ ಕುರಿತು ಈ ರೀತಿಯ ಭವಿಷ್ಯ ಹೇಳಿದ್ದಾರೆ.
ಕರ್ನಾಟಕ ಮತ್ತು ದೇಶದ ಕುರಿತು ಕೋಡಿಮಠದ ಶ್ರೀಗಳು ನುಡಿದ ಭವಿಷ್ಯ ಜನರನ್ನು ಅಚ್ಚರಿಗೆ ದೂಡಿದೆ. ಏಕೆಂದರೆ ಕೊರೊನಾ ಬಗ್ಗೆ ಶ್ರೀಗಳು ನುಡಿದದ್ದ ಭವಿಷ್ಯ ನಿಜವಾಗಿದೆ ಎಂದು ಅನೇಕರು ನಂಬುತ್ತಾರೆ. ಇದೀಗ ಕರ್ನಾಟಕ ರಾಜ್ಯದಲ್ಲಿ ಮಳೆ ಅನಾಹುತಗಳು ಮುಂದುವರಿಯಲಿವೆ. ಭೂಮಿಯಿಂದ ಹೊಸ ವಿಷ ಜಂತುಗಳು ಹುಟ್ಟಿಬರಲಿವೆ. ಜನರು ಓಡಾಡುವಾಗ ಕೈಯಲ್ಲಿ ಬಡಿಗೆ ಹಿಡಿದು ಓಡಾಡುವ ಕಾಲ ಬರಲಿದೆ. ದೇಶದಲ್ಲಿ ಸುನಾಮಿ ಎದುರಾಗುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿ ಎಚ್ಚರಿಸಿದ್ದಾರೆ.

ಈ ಹಿಂದೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಹೇಳಿದ್ದೆ. ಕೊರೊನಾ ಭವಿಷ್ಯ ನಿಜವಾಗಿದೆ ಎನ್ನುವ ಮೂಲಕ ಈಗಿನ ಭವಿಷ್ಯ ಕುರಿತು ಶ್ರೀಗಳು ಸಮರ್ಥನೆ ನೀಡಿದರು.
ಹೆಚ್ಚು ಕಷ್ಟ ಎದುರಾಗಲಿದೆ, ಯೋಗ್ಯ ಸಾಧುಗಳಿದ್ದಾರೆ
ಈಗಿನ ಗಿಂತಲೂ ಮುಂದೆ ಹೆಚ್ಚಿನ ಕಷ್ಟ ಕಾಲ ಎದುರಾಗುವ ಸಂಭವವಿದೆ. ಇದಕ್ಕೆಲ್ಲಾ ದೇವರನ್ನು ಪೂಜಿಸುವುದು ಒಂದೇ ಪರಿಹಾರವಾಗಿದೆ. ಪೂಜೆ ಎಂಬುದು ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಆಡಂಬರವಾಗಿಬಿಟ್ಟಿದೆ. ಅದು ಸರಿಯಲ್ಲ. ಸಮಾಜದಲ್ಲಿ ಯೋಗ್ಯ ಸಾಧುಗಳಿದ್ದಾರೆ. ಎಲ್ಲರೂ ಸೇರಿ ಪ್ರಾರ್ಥಿಸಿದರೆ ಜಗತ್ತು ಉಳಿಯುತ್ತದೆ, ನಾಡಿಗೆ ಒಳಿತಾಗುತ್ತದೆ ಎಂದು ಶರಣರು, ಮಠದ ವಿರುದ್ಧ ಆರೋಪಗಳ ಕುರಿತು ಪ್ರಶ್ನೆಗೆ ಅವರು ಕೋಡಿ ಮಠದ ಶ್ರೀಗಳು ಮಾರ್ಮಿಕ ಹೇಳಿದರು.

ನೀಚಂಗೆ ದೊರೆತನವು, ಹೇಡಿಂಗೆ ಹಿರಿತನವು, ಮೂಢಂಗೆ ಗುರುತನವೂ ಸಿಕ್ಕಿರುವುದರಿಂದ ನಾಡಿನಲ್ಲಿ ಇಂತಹ ಸಂಭವಿಸಿದೆ. ಆರೋಪಗಳು ಭವಿಷ್ಯದಲ್ಲಿ ಹೆಚ್ಚಾಗಲಿವೆ ಎಂದರು. ಆದರೆ ರಾಜಕೀಯ ಬೆಳವಣಿಗೆ ಬಗ್ಗೆ ಅವರು ಭವಿಷ್ಯ ಹೇಳುವ ಮನಸ್ಸು ಮಾಡಲಿಲ್ಲ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
IMD Weather Forecast: ದೇಶದ ಈ ಭಾಗಗಳಲ್ಲಿ ಮಾರ್ಚ್ ಅಂತ್ಯದಲ್ಲಿ ಭಾರೀ ಮಳೆ ಮುನ್ಸೂಚನೆ: ಐಎಂಡಿ ಎಚ್ಚರಿಕೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
Bengaluru Airport: ಮಳೆ ಅಬ್ಬರಕ್ಕೆ 30 ವಿಮಾನಗಳ ಮಾರ್ಗ ಬದಲು, ಏರ್ಪೋರ್ಟ್ ಟರ್ಮಿನಲ್ನಲ್ಲಿ ನೀರು ಸೋರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ












Click it and Unblock the Notifications