ಜನರ ಹಣವನ್ನು ಮೋದಿ ಸರ್ಕಾರ ಪಿಕ್ಪಾಕೆಟ್ ಮಾಡುತ್ತಿದೆ
ಮಂಡ್ಯ, ಜೂನ್ 15: "ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ವರ್ಷದಲ್ಲಿ 17 ಬಾರಿ ತೈಲ ಬೆಲೆ ಹೆಚ್ಚಳ ಮಾಡುವ ಮೂಲಕ ಜನರ ಹಣವನ್ನು ಪಿಕ್ಪಾಕೆಟ್ ಮಾಡಲು ಮುಂದಾಗಿದೆ," ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.
ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಯಲಿಯೂರು ಸರ್ಕಲ್ನ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು.
"ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ನಿರಂತರವಾಗಿ ಇಂಧನ ಬೆಲೆ ಹೆಚ್ಚಳ ಮಾಡುವ ಮೂಲಕ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆಯುತ್ತಿದೆ," ಎಂದು ಕಿಡಿಕಾರಿದರು.

"ಇಂಧನ ಬೆಲೆ ಏರಿಕೆ ಮಾಡುವವರು ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ಏಕೆ ಮಾಡಲಿಲ್ಲವೆಂದು ಪ್ರಶ್ನಿಸಿದ ಡಿಕೆಶಿ, ಸರ್ಕಾರಿ ನೌಕರರ ಸಂಬಳವನ್ನೂ ಏರಿಕೆ ಮಾಡಬೇಕಿತ್ತು. ಜನರ ಹಣವನ್ನು ಈ ರೀತಿ ಲೂಟಿ ಮಾಡುವ ಪ್ರಯತ್ನಕ್ಕೆ ಕೈ ಹಾಕಬಾರದು," ಎಂದು ಟೀಕಿಸಿದರು.
"ಅಮೆರಿಕದಂತಹ ದೇಶದಲ್ಲಿ ಇಂಧನ ಬೆಲೆ ಭಾರತಕ್ಕೆ ಹೋಲಿಸಿದರೆ ಶೇ. 60ರಷ್ಟು ಮಾತ್ರ ಇದೆ. ಅಕ್ಕ ಪಕ್ಕದ ಬಾಂಗ್ಲಾದೇಶ, ಬರ್ಮಾ ಸೇರಿದಂತೆ ಸಣ್ಣ ಪುಟ್ಟ ರಾಷ್ಟ್ರಗಳಲ್ಲಿ ಇಂಧನ ಬೆಲೆ ಕಡಿಮೆ ಇದೆ. ಹೀಗಿರುವಾಗ ನಮ್ಮ ದೇಶದಲ್ಲಿ ಯಾಕೆ ಹೆಚ್ಚು ಮಾಡಿದ್ದೀರಿ," ಎಂದು ಪ್ರಶ್ನಿಸಿದರು.

ರಾಮ ಮಂದಿರ ಭೂಮಿ ಖರೀದಿಯಲ್ಲಿ ಹಗರಣ
"ರಾಮ ಮಂದಿರ ನಿರ್ಮಾಣದ ಭೂಮಿ ಖರೀದಿಯಲ್ಲಿ ದೊಡ್ಡ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಇದು ಇಡೀ ದೇಶ ಹಾಗೂ ಜನರ ಭಾವನೆಗೆ ಮಾಡಿರುವ ಅಪಮಾನ. ಈ ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕೆಂದು," ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ.
Recommended Video
"ರಾಮ ಮಂದಿರ ನಿರ್ಮಾಣಕ್ಕಾಗಿ ಹಳ್ಳಿ, ಹಳ್ಳಿಗಳಲ್ಲಿ ಜನ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಹೀಗಿರುವಾಗ ಇವರು ಭೂಮಿ ಖರೀದಿಯಲ್ಲಿ ಅವ್ಯವಹಾರ ಮಾಡಿ ದ್ರೋಹ ಬಗೆದಿದ್ದಾರೆ. ಇದನ್ನು ಇಡೀ ದೇಶ ಖಂಡಿಸಬೇಕು. ಜನ ಕೊಟ್ಟಿರುವ ದೇಣಿಗೆಯನ್ನು ಹಿಂದಿರುಗಿಸಬೇಕು. ಈ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಿ, ಶಿಕ್ಷೆ ನೀಡಬೇಕು," ಎಂದು ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ಆಗ್ರಹಿಸಿದರು.
-
ಅಪ್ಪನ ಸಕ್ಕರೆ ಚಟ ಬಿಡಿಸಲು ಮೋದಿ ಮೊರೆ ಹೋದ ಯುವಕ: ವಿಡಿಯೋ Viral, ಪ್ರಧಾನಿಯಿಂದ ಬಂತು ಅಚ್ಚರಿಯ ರಿಪ್ಲೈ -
ಇರಾನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ: ಜಾಗತಿಕ ಪೂರೈಕೆ ವ್ಯತ್ಯಯದ ಬಗ್ಗೆ ಆತಂಕ -
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: ನೀರಿನ ಬಿಲ್ ಮೇಲಿನ ಬಡ್ಡಿ ಶೇ.100ರಷ್ಟು ಮನ್ನಾ; ಡಿಕೆಶಿ ಮಹತ್ವದ ಘೋಷಣೆ -
ಭಾರತದಲ್ಲಿ ಇಂಧನ ಭದ್ರತೆಗೆ ಒತ್ತು, ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ: ಮೋದಿ ನೇತೃತ್ವದಲ್ಲಿ ಸಭೆ, ಹಲವು ಮಹತ್ವದ ತೀರ್ಮಾನ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications