ಕೆ.ಸಿ.ನಾರಾಯಣಗೌಡ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಮಂಡ್ಯ, ಜುಲೈ 8: ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆ. ಸಿ ನಾರಾಯಣಗೌಡ ವಿರುದ್ಧ ಮಂಡ್ಯದ ಜಾತ್ಯತೀತ ಜನತಾದಳ ಪಕ್ಷದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಶಾಸಕ ನಾರಾಯಣಗೌಡ ವಿರುದ್ಧ ಕಾರ್ಯಕರ್ತರು ಕೆಂಡಕಾರುತ್ತಿದ್ದಾರೆ. ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ತಮ್ಮದೇ ಆದ ರೀತಿಯಲ್ಲಿ ಅಸಮಾಧಾನವನ್ನು ಹೊರಹಾಕಿದ್ದಾರೆ. ಬಿಜೆಪಿಗೆ ಶಾಸಕರು ಸೋಲ್ಡ್ ಆಗಿದ್ದಾರೆ ಎಂಬ ರೀತಿಯ ಬರಹ ಹಾಗೂ ಶ್ರದ್ಧಾಂಜಲಿ ಭಾವಚಿತ್ರವನ್ನು ಹಾಕಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶಾಸಕ ನಾರಾಯಣಗೌಡ ವಿರುದ್ಧ ದಳ ಕಾರ್ಯಕರ್ತರು ಆಕ್ರೋಶಗೊಂಡಿದ್ದರೆ, ಇತ್ತ ಮಾಜಿ ಶಾಸಕ ಚಂದ್ರಶೇಖರ್ ಬೆಂಬಲಿಗರು ಹರ್ಷ ವ್ಯಕ್ತಪಡಿಸುತ್ತಾ ಕೆಆರ್ ಪೇಟೆಗೆ ಅಂಟಿಕೊಂಡಿದ್ದ ಗ್ರಹಣ ತೊಲಗಿ ಬಿಡುಗಡೆಯಾಗುವ ಸಮಯ ಬಂದಿದೆ. ಮತ್ತೊಮ್ಮೆ ಚಂದ್ರಶೇಖರ್ ಎನ್ನುವ ಬರಹಗಳನ್ನು ಸಾಮಾಜಿಕ ಜಾಲತಾಣ ಹರಿಬಿಟ್ಟಿದಾರೆ.

ಶಾಸಕ ಕೆ ಸಿ ನಾರಾಯಣಗೌಡರು ರಾಜೀನಾಮೆ ನೀಡಿದ್ದು ಕೆ.ಆರ್ ಪೇಟೆ ಕ್ಷೇತ್ರಕ್ಕೆ ಉಪಚುನಾವಣೆ ನಿಗದಿಯಾದರೆ, ಜಾತ್ಯತೀತ ಜನತಾದಳದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಬೇಕು ಎನ್ನುವ ಕೂಗು ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಕೇಳಿಬಂದಿದೆ. ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಪೋಸ್ಟ್ ಗಳನ್ನು ತೇಲಿಬಿಟ್ಟಿದ್ದಾರೆ.
'ನಮ್ಮ ಪಕ್ಷದ ಕೆಲವು ಶಾಸಕರ ಅಕಾಲಿಕ ಮರಣದಿಂದ ತೆರವಾಗಿದ್ದ ಸ್ಥಾನಕ್ಕೆ ಕೆ.ಆರ್ ಪೇಟೆಯಿಂದ ನಮ್ಮ ಯುವರಾಜ ನಿಖಿಲ್ ಕುಮಾರಸ್ವಾಮಿ' ಎಂಬ ಸ್ಟೇಟಸ್ ಹಾಕುವ ಮೂಲಕ ನಿಖಿಲ್ ಸ್ಪರ್ಧಿಸುವಂತೆ ಕಾರ್ಯಕರ್ತರು ಮನವಿ ಮಾಡಿದ್ದಾರೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Viral Video: ತೆಂಗಿನ ಚಿಪ್ಪನ್ನು ಮಗುವಿನ ಶೌಚಾಲಯ ಮಾಡಿಕೊಂಡ ದಂಪತಿ, ವಿಡಿಯೋ ವೈರಲ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications