ಸುಮಲತಾ ಪರ ಪ್ರಚಾರ: ನಟರಿಗೆ ಎಚ್ಚರಿಕೆ ನೀಡಿದ ಕೆ.ಆರ್. ಪೇಟೆ ಶಾಸಕ
Recommended Video

ಮಂಡ್ಯ, ಮಾರ್ಚ್ 20: ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಸುಮಲತಾ ಪರ ಪ್ರಚಾರ ನಡೆಸದಂತೆ ನಟರಿಗೆ ಕೆ.ಆರ್. ಪೇಟೆ ಜೆಡಿಎಸ್ ಶಾಸಕ ನಾರಾಯಣಗೌಡ ಧಮಕಿ ಹಾಕಿದ್ದಾರೆ.
ನಮ್ಮದೇ ಸರ್ಕಾರ ಅಸ್ತಿತ್ವದಲ್ಲಿದೆ. ನೀವು ಆಸ್ತಿ ಅಂತಸ್ತು ಏನು ಮಾಡಿದ್ದೀರಿ ಅದರ ಮೇಲೆ ತನಿಖೆ ಮಾಡುತ್ತೇವೆ. ನಿಮ್ಮ ಕೆಲಸ ನೋಡಿಕೊಂಡು ಗೌರವದಿಂದ ಮನೆಯಲ್ಲಿರಿ ಎಂದು ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
ರಾಜಕಾರಣ, ಕುಮಾರಣ್ಣ, ದೇವೇಗೌಡರ ಬಗ್ಗೆ ಮಾತನಾಡಲು ಅಧಿಕಾರವಿಲ್ಲ. ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಮಾತನಾಡಿದರೆ ತಕ್ಕಪಾಠ ಮಾಡುತ್ತೇವೆ. ಭಾರತದಲ್ಲಿ ಸರ್ಕಾರ ಎಲ್ಲಿ ಹೇಗೆ ನಡೆಯುತ್ತಿದೆ ಎಂಬ ಬಗ್ಗೆ ಇವರಿಗೆ ತಿಳಿದಿಲ್ಲ. ನಿಮಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಸುಮ್ಮನೆ ಸಿನಿಮಾ ಮಾಡಿ ಎಂದು ಆಗ್ರಹಿಸಿದರು.

ಇದರಿಂದ ಫಿಲಂ ಇಂಡಸ್ಟ್ರಿಗೆ ಎಫೆಕ್ಟ್ ಆಗುತ್ತದೆ. ನಾವೆಲ್ಲ ಟಿಕೆಟ್ ಪಡೆದುಕೊಂಡು ಸಿನಿಮಾ ನೋಡುತ್ತಿರುವುದರಿಂದ ಅವರು ದೊಡ್ಡ ನಟರಾಗಿ ಬೆಳೆದಿರುವುದು ಎಂದು ಹೇಳಿದರು.
ಈ ಬಗ್ಗೆ ಟಿವಿ ವಾಹಿನಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡ, ತಾವು ಆಕ್ರೋಶದಿಂದ ಮಾತನಾಡಿರುವುದು ನಿಜ. ಆದರೆ, ದರ್ಶನ್ ಮಂಡ್ಯದ ಜನರು, ರಾಜಕಾರಣಿಗಳು ಮತ್ತು ದೇವೇಗೌಡರ ಬಗ್ಗೆ ಕೆಟ್ಟದಾಗಿ ಏಕವಚನದಲ್ಲಿ ಮಾತನಾಡಿದ್ದಾರೆ. ಅವರಿಗೆ ಹೀಗೆ ಮಾತನಾಡುವ ಹಕ್ಕು ಏನಿದೆ? ಇದು ಎಲ್ಲ ಕಡೆ ಮೊನ್ನೆಯಿಂದ ಹರಿದಾಡುತ್ತಿದೆ ಎಂದು ಹೇಳಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications