ಮಂಡ್ಯದ ಕಿಕ್ಕೇರಿ ಬಳಿ ರು. 4ಲಕ್ಷ ಮೌಲ್ಯದ ಅಕ್ರಮ ಮರಳು ವಶ
ಮಂಡ್ಯ: ಕೆ.ಆರ್. ಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ದೊಡ್ಡತಾರಹಳ್ಳಿ ಕೆರೆಯಲ್ಲಿ ಗ್ರಾಮದ ಕೆಲವರು ಅಕ್ರಮವಾಗಿ ದಾಸ್ತಾನು ಮಾಡಿಟ್ಟಿದ್ದ ಸುಮಾರು ರು.4ಲಕ್ಷ ಮೌಲ್ಯದ ಮರಳನ್ನು ಕಿಕ್ಕೇರಿ ಪೊಲೀಸರು ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
ಮೊದಲಿನಿಂದಲೂ ದೊಡ್ಡತಾರಹಳ್ಳಿ ಗ್ರಾಮಕ್ಕೆ ಸೇರಿದ ಬಿಸಲಹಳ್ಳಿ ಕೆರೆ ಮತ್ತು ಅಕ್ಕಪಕ್ಕದಲ್ಲಿ ಅಕ್ರಮವಾಗಿ ಗ್ರಾಮದ ಕೆಲವರು ಮರಳನ್ನು ಸಂಗ್ರಹಿಸಿಟ್ಟುಕೊಂಡು ಮಾರಾಟ ಮಾಡುತ್ತಿದ್ದರು. ಗ್ರಾಮದಲ್ಲಿ ಗೊತ್ತಿದ್ದರೂ ಆ ಬಗ್ಗೆ ಯಾರೂ ಪೊಲೀಸರಿಗೆ ಮಾಹಿತಿ ನೀಡಿರಲಿಲ್ಲ.[ಮಂಗಳೂರಲ್ಲಿ ಅಕ್ರಮ ಮರಳು ದಂಧೆಗೆ ಇಲ್ಲ ಕಡಿವಾಣ]

ಆದರೆ ಈ ನಡುವೆ ಕಿಕ್ಕೇರಿ ಪೊಲೀಸರಿಗೆ ದೊಡ್ಡತಾರಹಳ್ಳಿ ಕೆರೆಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿರುವ ಕುರಿತು ಖಚಿತ ಮಾಹಿತಿ ಬಂದಿತ್ತು. ಹೀಗಾಗಿ ಸಬ್ಇನ್ಸ್ ಪೆಕ್ಟರ್ ಆರ್.ಸಿದ್ದರಾಜು ಸೇರಿದಂತೆ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುತ್ತಿದ್ದಂತೆಯೇ ಅಕ್ರಮವಾಗಿ ಮರಳು ಸಂಗ್ರಹಿಸಿಟ್ಟಿದ್ದ ದಂಧೆಕೋರರು ನಾಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳದಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು ರು. 4ಲಕ್ಷ ಮೌಲ್ಯದ 7 ಟ್ರಕ್ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ಇಷ್ಟೊಂದು ಮೌಲ್ಯದ ಮರಳನ್ನು ಸಂಗ್ರಹಿಸಿಟ್ಟಿದ್ದು ಯಾರು? ಯಾರಿಗೆ ಇದರಲ್ಲಿ ಪಾಲಿದೆ? ಮೊದಲಾದ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಪೊಲೀಸರು ತನಿಖೆ ಆರಂಭಿಸಿದ್ದು ಅಕ್ರಮ ಮರಳು ದಂಧೆ ನಡೆಸುತ್ತಿರುವ ವ್ಯಕ್ತಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಒಂದು ಟ್ರಕ್ ಮರಳಿಗೆ ಮಾರುಕಟ್ಟೆಯಲ್ಲಿ ಸುಮಾರು ರು. 60ಸಾವಿರ ಬೆಲೆಯಿದ್ದು, 7 ಟ್ರಕ್ ನಷ್ಟು ಮರಳು ದೊರೆತಿದ್ದು, ಮರಳಿನ ಮೌಲ್ಯ ರು.4ಲಕ್ಷ ಎಂದು ಅಂದಾಜಿಸಲಾಗಿದೆ. ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ಹಾಗೂ ತಾಲೂಕು ದಂಡಾಧಿಕಾರಿಗಳ(ತಹಸೀಲ್ದಾರ್) ಗಮನಕ್ಕೆ ತಂದು ಮರಳು ಹರಾಜಿಗೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಪಿಎಸ್ಐ ಸಿದ್ದರಾಜು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications