KRS: ಕೆಆರ್ಎಸ್ನಿಂದ 1 ಲಕ್ಷ ಕ್ಯೂಸೆಕ್ಸ್ ನೀರು ಹೊರಕ್ಕೆ- ರಂಗನತಿಟ್ಟು ಪಕ್ಷಧಾಮ ಮುಳುಗಡೆ: ನದಿ ಪಾತ್ರದವರಿಗೆ ಎಚ್ಚರಿಕೆ!
ಮಂಡ್ಯ ಜುಲೈ 25: ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲಿ 1 ಲಕ್ಷಕ್ಕೂ ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಹರಿಯಬಿಡುವ ಸಾಧ್ಯತೆಗಳಿದ್ದು, ನದಿ ಪಾತ್ರದ ಜನರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ.
ಜಲಾಶಯದಿಂದ ಪ್ರಸ್ತುತ 40 ಸಾವಿರ ಕ್ಯುಸೆಕ್ಗೂ ಹೆಚ್ಚು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಹೇಮಾವತಿ ಮತ್ತು ಹಾರಂಗಿ ಅಣೆಕಟ್ಟೆಗಳು ಭರ್ತಿಯಾಗಿರುವುದರಿಂದ ಹೆಚ್ಚು ನೀರು ಜಲಾಶಯದ ಕಡೆಗೆ ಹರಿದುಬರುತ್ತಿದೆ. ಹೀಗಾಗಿ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್ನಿಂದ 1 ಲಕ್ಷ ಕ್ಯುಸೆಕ್ವರೆಗೆ ನೀರು ಹರಿಯಬಿಡುವ ಸಾಧ್ಯತೆಗಳಿರುವುದರಿಂದ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಎಚ್ಚರಿಕೆ ನೀಡಿದ್ದಾರೆ.

ಜಲಾಶಯದಿಂದ ಹೆಚ್ಚು ನೀರನ್ನು ಹರಿಯಬಿಟ್ಟಿರುವುದರಿಂದ ರಂಗನತಿಟ್ಟು ಪಕ್ಷಿಧಾಮದ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ. ಪಕ್ಷಿಗಳ ಆಶ್ರಯತಾಣವಾದ ನಡುಗಡ್ಡೆಗಳು ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದರೆ ವಾಕಿಂಗ್ ಪಾಥ್ಗೂ ನೀರು ನುಗ್ಗುವ ಸಾಧ್ಯತೆಗಳಿವೆ. ಪ್ರವಾಸಿಗರ ವೀಕ್ಷಣೆಗೂ ನಿರ್ಬಂಧ ವಿಧಿಸಲಾಗಿದ್ದು, ಗೇಟ್ ಬಳಿಯೇ ಪ್ರವಾಸಿಗರನ್ನ ತಡೆದು ಹೊರಗೆ ಕಳುಹಿಸಲಾಗುತ್ತಿದೆ.
ಮೇ 15ರಂದು ಮಳೆ ಕೊರತೆಯಿಂದಾಗಿ ಜಲಾಶಯ 79.65 ಅಡಿಗೆ ಕುಸಿದಿತ್ತು. ಕುಡಿಯುವ ನೀರಿಗೂ ಸಮಸ್ಯೆ ಉಂಟಾಗುವ ಆತಂಕ ಎದುರಾಗಿತ್ತು. ಜೂ.28ರಿಂದ ಜಲಾಶಯದ ಒಳಹರಿವು ಹೆಚ್ಚಾಗಲು ಆರಂಭಿಸಿತು. 3856 ಕ್ಯುಸೆಕ್ ಇದ್ದ ಒಳಹರಿವು 13457 ಕ್ಯುಸೆಕ್ಗೆ ಏರಿತು. ಜು.3ರಂದು 14135 ಕ್ಯುಸೆಕ್ನಷ್ಟು ನೀರು ಹರಿದುಬಂದಿದ್ದರಿಂದ ಜು.5ಕ್ಕೆ ಜಲಾಶಯದ ನೀರಿನ ಮಟ್ಟ 100 ಅಡಿಯನ್ನು ತಲುಪಿತ್ತು.

ಆನಂತರ ಜಲಾಶಯದ ಒಳಹರಿವಿನ ಪ್ರಮಾಣ ಮತ್ತೆ ಕುಸಿದು ಜು.6ರಂದು 6185ಕ್ಯುಸೆಕ್ ಹರಿದುಬರುತ್ತಿತ್ತು. ಬಳಿಕ ಒಳಹರಿವು ಒಮ್ಮೊಮ್ಮೆ ಏರಿಕೆಯಾಗುತ್ತಾ ಮತ್ತೊಮ್ಮೆ ಕುಸಿಯುತ್ತಲೇ ಬಂದಿತ್ತು. ಜು.14ರಂದು ಒಳಹರಿವು 2898 ಕ್ಯುಸೆಕ್ಗೆ ಕುಸಿದು ಆತಂಕ ಮೂಡಿಸಿತ್ತು. ಜು.15ರಂದು ಮತ್ತೆ ಒಳಹರಿವಿನ ಪ್ರಮಾಣ 10,121ಕ್ಯುಸೆಕ್ಗೆ ಏರಿಕೆಯಾಯಿತು. ನಂತರ 19,202 ಕ್ಯುಸೆಕ್, ಬಳಿಕ 25933 ಕ್ಯುಸೆಕ್, ಆನಂತರ 35997 ಕ್ಯುಸೆಕ್, ತದನಂತರದಲ್ಲಿ 44617 ಕ್ಯುಸೆಕ್, ಕೊನೆಗೆ 70850 ಕ್ಯುಸೆಕ್ ನೀರು ಹರಿದುಬರುವುದರೊಂದಿಗೆ ಕೇವಲ 5 ದಿನಗಳಲ್ಲಿ 15 ಟಿಎಂಸಿ ನೀರು ಹರಿದುಬಂದಿತು.
ಕಳೆದ ವರ್ಷ ಮಳೆ ಕೊರತೆಯಿಂದ ಜಲಾಶಯ ಭರ್ತಿಯಾಗಿರಲಿಲ್ಲ. ಕೇವಲ 114 ಅಡಿಯವರೆಗೆ ಮಾತ್ರ ತಲುಪಲು ಸಾಧ್ಯವಾಗಿತ್ತು. ಹೀಗಾಗಿ ಮುಂಗಾರು ಹಂಗಾಮಿಗೆ ಸಮರ್ಪಕವಾಗಿ ನೀರು ಹರಿಸಲಾಗಲಿಲ್ಲ. ಬೇಸಿಗೆ ಬೆಳೆಗೂ ನೀರು ಕೊಡುವುದಕ್ಕೆ ಸಾಧ್ಯವಾಗಲೂ ಇಲ್ಲ. ಪ್ರಾಧಿಕಾರದ ನಿರಂತರ ಆದೇಶಗಳಿಂದ ಜಲಾಶಯದಲ್ಲಿ ಸಂಗ್ರಹವಾಗಿದ್ದ ಭಾಗಶಃ ನೀರೆಲ್ಲವೂ ತಮಿಳುನಾಡಿಗೆ ಹರಿಸಲಾಗಿತ್ತು.
ಕಾವೇರಿ ಜಲಾನಯನ ಪ್ರದೇಶದ ನಾಲ್ಕೂ ಜಲಾಶಯಗಳು ಭರ್ತಿಯಾಗಿರುವ ಕಾರಣ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡಲಾಗುತ್ತಿದೆ. ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಮತ್ತು ಪ್ರಾಧಿಕಾರಗಳು ನೀರು ಹರಿಸುವಂತೆ ಸೂಚಿಸುವ ಅಗತ್ಯವೇ ಇಲ್ಲದಂತೆ ಕರ್ನಾಟದ ಕಾವೇರಿ ಪ್ರಾಂತ್ಯದಿಂದ ತಮಿಳುನಾಡಿಗೆ ನಿರಂತರವಾಗಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದೆ.
ಮಾನ್ಸೂನ್ ಮಾರುತಗಳು ಕೇರಳ ಮತ್ತು ಕರ್ನಾಟಕದಲ್ಲಿದ್ದು, ಮುಂದಿನ ದಿನಗಳಲ್ಲಿ ತಮಿಳುನಾಡಿನತ್ತ ಸಾಗುತ್ತವೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾದ ಬಳಿಕ ತಮಿಳುನಾಡಿನಲ್ಲಿ ಮಳೆ ವ್ಯಾಪಕವಾಗುವ ಸಾಧ್ಯತೆಗಳಿದ್ದು, ಈಗಾಗಲೇ ಮೆಟ್ಟೂರು ಜಲಾಶಯಕ್ಕೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದ್ದು, ಮುಂದಿನ ದಿನಗಳಲ್ಲಿ ಅಲ್ಲೂ ಹೆಚ್ಚಿನ ಪ್ರಮಾಣದ ನೀರನ್ನು ಹಿಡಿದಿಟ್ಟುಕೊಳ್ಳಲಾಗದೆ ಸಮುದ್ರದ ಪಾಲಾಗುತ್ತದೆ.
ಈ ವಿಚಾರವನ್ನು ಕಾವೇರಿ ಪ್ರಾಧಿಕಾರದ ಗಮನಕ್ಕೆ ತಂದು ಮೇಕೆದಾಟು ಯೋಜನೆ ಅಥವಾ ಬೇರೆ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸುವುದು ಸೂಕ್ತ ಎಂಬುದು ನೀರಾವರಿ ತಜ್ಞರ ಅಭಿಪ್ರಾಯವೂ ಆಗಿದೆ.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications