KRS Dam: KRS: ಕೆಆರ್ಎಸ್ನಿಂದ 80,000 ಕ್ಯೂಸೆಕ್ ನೀರು ಬಿಡುಗಡೆ: ನದಿತೀರದ ಜನರಿಗೆ ಪ್ರಮುಖ ಸೂಚನೆಗಳೇನು?
KRS Dam: ರಾಜ್ಯದಲ್ಲಿ ಮುಂಗಾರು ಚುರುಕು ಪಡೆದ ಪರಿಣಾಮ ನದಿ, ಕೆರೆ-ಕಟ್ಟೆಗಳು ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಜಲಾಶಯಗಳು ಕೂಡ ಮೈದುಂಬುತಿದ್ದು, ಇದರಿಂದ ನದಿತೀರದ ಜನರಿಗೆ ನಡುಕ ಶುರುವಾಗಿದೆ. ಈಗಾಗಲೇ ಬೆಂಗಳೂರು, ಮಂಡ್ಯ, ಮೈಸೂರು ಜಿಲ್ಲೆಗಳ ಜೀವನಾಡಿ ಕೃಷ್ಣರಾಜ ಸಾಗರ (ಕೆಆರ್ಎಸ್) ಡ್ಯಾಂ ಭರ್ತಿಯಾಗಿದ್ದು, ಇದೀಗ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆ 80,000 ಕ್ಯೂಸೆಕ್ ನೀರನ್ನ ನದಿಗೆ ಹರಿಸಲಾಗುತ್ತಿದೆ. ಹಾಗಾದ್ರೆ, ಮಂಡ್ಯ ಜಿಲ್ಲಾಧಿಕಾರಿ ನೀಡಿದ ಮುನ್ನೆಚ್ಚರಿಕೆ ಕ್ರಮಗಳು ಏನೆಂದು ಇಲ್ಲಿ ತಿಳಿಯಿರಿ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಮುಂದುವರೆದಿರುವ ಪರಿಣಾಮ ಹಳೇ ಕೆಆರ್ಎಸ್ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಏರಿಕೆಉಯಾಗುತ್ತಲಿದೆ. ಆದ್ದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸುವ ತೀರ್ಮಾನ ಮಾಡಟಲಾಗಿದೆ ಎಂದು ತಿಳಿದುಬಂದಿದೆ.

ಕಳೆದ ಕೆಲ ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಪ್ರಮಾಣ ತಗ್ಗಿದ ಹಿನ್ನೆಲೆ ಹೆಚ್ಚು ನೀರು ಹರಿಯುತ್ತಿರಲಿಲ್ಲ. ಆದರೆ, ಆಗಸ್ಟ್ 17ರಿಂದ ಮತ್ತೆ ರಣಭೀಕರ ಮಳೆ ಮುಂದುವರೆದ ಹಿನ್ನೆಲೆ 33,052 ಕ್ಯೂಸೆಕ್ಗೂ ಅಧಿಕ ನೀರು ಒಳಹರಿವು ಬರುತ್ತಿದೆ. ಈಗಾಗಲೇ ಜೂನ್ ಅಂತ್ಯದಲ್ಲೇ ಜಲಾಶಯ ಭರ್ತಿಯಾಗಿದೆ. ಇನ್ನು ಇದೀಗ ಒಳಹರಿವು ಏರಿಕೆಯಾಗುತ್ತಿರುವ ಹಿನ್ನೆಲೆ ಇಂದು (ಆಗಸ್ಟ್ 18) ಬೆಳಗ್ಗೆ 10 ಗಂಟೆವರೆಗೆ 31,550 ಕ್ಯೂಸೆಕ್ ನೀರನ್ನ ನದಿಗೆ ಹರಿಸಲಾಗುತ್ತಿತ್ತು. ಬಳಿಕ 80,000 ಕ್ಯೂಸೆಕ್ ನೀರನ್ನ ಹರಿಸಲಾಗುತ್ತಿದೆ.
ಈ ಕುರಿತು ಮಂಡ್ಯದ ಜಿಲ್ಲಾಧಿಕಾರಿ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದು, ಕಾವೇರಿ ನದಿ ಪಾತ್ರದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ. ನದಿತೀರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ. ಜಲಾಶಯದಿಂದ ನೀರು ಬಿಡುಗಡೆ ಮಾಡಿದ್ದು, ಈ ಸುಂದರ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಇನ್ನು ಇದೀಗ ಇಂದು ಸದ್ಯ 124.80 ಅಡಿಗಳ ಗರಿಷ್ಠ ಮಟ್ಟದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 124.54 ಅಡಿಗೆ ಬಂದಿದೆ. ಅಂದರೆ, ಸಂಪೂರ್ಣ ಭರ್ತಿ ಆಗಿದೆ. 49.452 ಟಿಎಂಸಿ ಗರಿಷ್ಠ ಸಾಮರ್ಥ್ಯ ಇರುವ ಈ ಜಲಾಶಯದಲ್ಲಿ 49.089 ಟಿಎಂಸಿಯಷ್ಟು ನೀರು ಭರ್ತಿ ಆಗಿದೆ ಎಂದು ತಿಳಿದುಬಂದಿದೆ. ಮಳೆ ಹೀಗೆ ಮುಂದುವರೆದರೆ, ಒಳಹರಿವಿನ ಪ್ರಮಾಣ ಮತ್ತಷ್ಟು ಏರಿಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಕೆಆರ್ಎಸ್ ಜಲಾಶಯ ಜೂನ್ನಲ್ಲಿಯೇ ಭರ್ತಿಯಾಗಿದ್ದು, ಇದೀಗ ಮತ್ತೆ ಭಾರೀ ಮಳೆಯಿಂದ ಭರ್ತಿಯಾಗಿದೆ. ಅಲ್ಲದೆ, ಒಳಹರಿವು ಹೆಚ್ಚುತ್ತಿರುವ ಹಿನ್ನೆಲೆ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದ ನದಿತೀರದ ಜನರಿಗೆ ನಡುಕ ಶುರುವಾಗಿದೆ. ಈಗಾಗಲೇ ಈ ಭಾಗಗಳ ಜನರು ಎಚ್ಚರಿಕೆಯಿಂದ ಇರುವಂತೆಯೂ ಜಿಲ್ಲಾಡಳಿತ ಎಚ್ಚರಿಕೆ ಸಂದೇಶವನ್ನು ರವಾನೆ ಮಾಡಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications