ಕೆಆರ್ ಎಸ್ ಡಿಸ್ನಿಲ್ಯಾಂಡ್ ಯೋಜನೆ ಮಾಡಿಯೇ ಸಿದ್ಧ: ಪುಟ್ಟರಾಜು
ಮಂಡ್ಯ, ನವೆಂಬರ್ 21: ಕೃಷ್ಣರಾಜಸಾಗರದ ಬಳಿ 1200 ಕೋಟಿ ರು ವೆಚ್ಚದಲ್ಲಿ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಮ್ಯೂಸ್ ಮೆಂಟ್ ಪಾರ್ಕ್ ನಿರ್ಮಾಣ, 125 ಅಡಿ ಎತ್ತರದ ಕಾವೇರಿ ಮಾತೆ ಪ್ರತಿಮೆ ಸ್ಥಾಪನೆ ಯೋಜನೆಗೆ ವಿರೋಧ ಕೇಳಿ ಬಂದಿರುವ ಹಿನ್ನಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಲು ಸಚಿವ ಸಿಎಸ್ ಪುಟ್ಟರಾಜು ಅವರು ಸುದ್ದಿಗೋಷ್ಠಿ ನಡೆಸಿದರು.
'30 ಅಡಿ ಗುಂಡಿ ಅಡಿಪಾಯ ತೋಡಿ, 125 ಅಡಿ ಕಾವೇರಿ ಪ್ರತಿಮೆ ನಿಲ್ಲಿಸುವುದು ದೊಡ್ಡ ವಿಚಾರವಲ್ಲ. ಇಂದು ವೈಜ್ಞಾನಿಕ ಜಗತ್ತಿನಲ್ಲಿ ಅನೇಕ ತಂತ್ರಜ್ಞಾನಗಳು ಬಂದಿವೆ. ಬೇಕಿದ್ದರೆ, ಯೋಜನೆ ವಿರೋಧಿಸುತ್ತಿರುವವರೇ ಸೂಚಿಸುವ ತಜ್ಞರನ್ನು ಮುಂದಿಟ್ಟಕೊಂಡು ಒಂದು ತೀರ್ಮಾನಕ್ಕೆ ಬರೋಣ," ಎಂದು ಅವರು ಹೇಳಿದರು.

ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ಎಸ್ ಅಭಿವೃದ್ದಿಗೆ ಚಿಂತನೆ ನಡೆಸಲಾಗಿದೆ. ಆದ್ರೆ ಯೋಜನೆಗೆ ರೈತರ ಒಂದಿಂಚು ಭೂಮಿಯನ್ನೂ ವಶಪಡಿಸಿಕೊಳ್ಳಲ್ಲ. ನೂರಾರು ಎಕರೆ ಸರ್ಕಾರದ ಜಮೀನು ಇದೆ. ಒಂದು ವೇಳೆ ಅನಿವಾರ್ಯ ಬಂದಾಗ ಅಗತ್ಯ ಪರಿಹಾರ ನೀಡಿ ವಶಪಡಿಸಿಕೊಳ್ತೀವಿ ಎಂದರು.
ಕೆಆರ್ಎಸ್ ಸುತ್ತ ಮುತ್ತ ಸರ್ಕಾರದ 300 ಎಕರೆ ಜಮೀನಿದೆ. ಆ ಭಾಗದಲ್ಲಿ ನನ್ನ ಕುಟುಂಬದ 10ಎಕರೆ ಜಮೀನೂ ಇದೆ. ಅಗತ್ಯ ಬಿದ್ದರೆ ನಾನು ಜಮೀನು ಕೊಡುತ್ತೇನೆ. ಸಚಿವ ಎಂದು ಜಮೀನು ಕೊಡದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಂಗಳೂರು ಮೈಸೂರು ಹೆದ್ದಾರಿಗೆ ರೈತರೇ ಸ್ವಇಚ್ಛೆಯಿಂದ ಜಮೀನು ನೀಡಿದ್ದರು. ಹಾಗೇ ನಾನೂ ಜಮೀನು ಬರೆದುಕೊಡುತ್ತೇನೆ," ಎಂದರು.
ಅಭಿವೃದ್ಧಿ-ವಿರೋಧಿಗಳಿಂದಲೇ ಮಂಡ್ಯ ಜಿಲ್ಲೆಗೆ ಕಳಂಕ. ಯಾವೊಂದು ಕೈಗಾರಿಕೆಗಳು ಮಂಡ್ಯಕ್ಕೆ ಬರ್ತಿಲ್ಲ. ಕಾವೇರಿ ಮಾತೆಯ ಪುತ್ಥಳಿ ನಿರ್ಮಾಣದಿಂದ ಕೆಆರ್ಎಸ್ಗೆ ಕಂಟಕವಿರೋದನ್ನ ತಜ್ಞರು ಹೇಳಬೇಕು. ಕೆಆರ್ಎಸ್ ಅಭಿವೃದ್ಧಿಯಾದರೆ ಸಾವಿರಾರು ಜನರಿಗೆ ಉದ್ಯೋಗ ದೊರಕಲಿದೆ ಎಂದು ಸಚಿವ ಪುಟ್ಟರಾಜು ತಿಳಿಸಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications