KRS Dam: ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಬಾಡೂಟ ಆಯೋಜನೆ
KRS Dam: ಮಂಡ್ಯ, ಮೈಸೂರು, ಬೆಂಗಳೂರು ಜಿಲ್ಲೆಗಳ ಜೀವನಾಡಿಯಾದ ಕೆಆರ್ಎಸ್ (ಕೃಷ್ಣರಾಜ ಸಾಗರ) ಜಲಾಶಯ ಭರ್ತಿಯಾದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ ಮಾಡಿದ್ದಾರೆ. ಇನ್ನೂ ಇದೇ ವೇಳೆ ಈ ಕಾರ್ಯಕ್ರಮದಲ್ಲಿ ಕಾವೇರಿ ನಿಗಮ ಅಧಿಕಾರಿಗಳು ಯಡವಟ್ಟೊಂದ ಮಾಡಿದ್ದು, ಇದು ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಸಾಮಾನ್ಯವಾಗಿ ಜಲಾಶಯಗಳು ತುಂಬಿದಾಗ ಹೂ, ಹಣ್ಣು ಕಾಯಿಯನ್ನು ಮರದಲ್ಲಿ ಡ್ಯಾಂಗೆ ಬಿಡುವ ಮೂಲಕ ಬಾಗಿನ ಅರ್ಪಣೆ ಮಾಡುವುದು ನಮ್ಮ ಸಂಪ್ರದಾಯದಲ್ಲಿದೆ. ಆದರೆ ಇಂದು ಕೆಆರ್ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ ವೇಳೆ ಅಧಿಕಾರಿಗಳು ದೊಡ್ಡ ಯಡವಟ್ಟೊಂದನ್ನು ಮಾಡಿದ್ದಾರೆ. ಮಾಹಿತಿ ಇಲ್ಲಿದೆ ಗಮನಿಸಿ.

ಕಾರ್ಯಕ್ರಮದ ಬಳಿಕ ಕಾವೇರಿ ನೀರಾವರಿ ಅಧಿಕಾರಿಗಳು ಭರ್ಜರಿ ಬಾಡೂಟ ಆಯೋಜನೆ ಮಾಡಿದ್ದು, ಈ ಮೂಲಕ ಸಂಪ್ರದಾಯಕ್ಕೆ ಅವಾಮಾನ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ. ಅಷ್ಟೇ ಅಲ್ಲದೆ, ಸಿಎಂ ಹಾಗೂ ಸಚಿವರು ಬಾಗಿನ ಅರ್ಪಣೆ ಮಾಡಿದ ಬಳಿಕ ಕಾವೇರಿ ನಿಗಮ ಅಧಿಕಾರಿಗಳು ಬಾಡೂಟ ಸೇವನೆ ಮಾಡಿದ್ದಾರೆ. ಕೆಆರ್ಎಸ್ನ ಖಾಸಗಿ ಹೋಟೆಲ್ನಲ್ಲಿ ಬಾಡೂಡ ಆಯೋಜನೆ ಮಾಡಲಾಗಿದ್ದು, ಈ ಮೂಲಕ ನಿಗಮದ ಅಧಿಕಾರಿಗಳು ಸಂಪ್ರದಾಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
ಹಾಗಾದರೆ ಅಧಿಕಾರಿಗಳು ಮಾಡಿರುವ ಈ ಯಡವಟ್ಟಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಏನು ಹೇಳುತ್ತಾರೆ ಎಂದು ಕಾದುನೋಡಬೇಕಿದೆ. ಇನ್ನು 124.80 ಅಡಿ ಗರಿಷ್ಠ ನೀರಿ ಮಟ್ಟದ ಸಂಗ್ರಹಣಾ ಸಾಮರ್ಥ್ಯ ಹೊಂದಿರುವ ಈ ಜಲಾಶಯದಲ್ಲಿ ಇದೀಗ 124.80 ಅಡಿ ನೀರಿದೆ.
ಡಿ.ಕೆ.ಶಿವಕುಮಾರ್ ಹೇಳಿದ್ದೇನು?: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಲವು ಪ್ರಮುಖ ಜಲಾಶಯಗಳು ಈಗಾಗಲೇ ತುಂಬುವ ಹಂತವನ್ನು ತಲುಪಿದ್ದರೆ, ಇನ್ನು ಕೆಲವು ಭರ್ತಿಯಾಗಿವೆ. ಇನ್ನಯ ಇಂದು (ಜುಲೈ 29) ಕೆಆರ್ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಣೆ ಮಾಡಿದ್ದಾರೆ. ಬಳಿಕ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
ಕಳೆದ ವರ್ಷ ಅಂದರೆ 2023ರಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಜಲಾಶಯಗಳೆಲ್ಲ ಬತ್ತುವ ಹಂತವನ್ನು ತಲುಪಿದ್ದವು. ಆದರೆ 2024ರ ಜೂನ್ ಆರಂಭವಾಗುತ್ತಿದ್ದಂತೆ ಮುಂಗಾರು ಚುರುಕು ಪಡೆದಿದ್ದು, ಹಲವು ಜಲಾಶಯಗಳು ಭರ್ತಿಯಾಗಿವೆ. ಇನ್ನು ಈ ಬಾರಿ ಉತ್ತಮ ಮಳೆಯಾದ ಹಿನ್ನೆಲೆ ಕಬಿನ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಿದರು.
ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಾಗಿನ ಅರ್ಪಿಸಿದ್ದು, ಈ ವೇಳೆ ಮೈಸೂರು ಭಾಗದ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಕಬಿನಿ ಜಲಾಶಯ ನಮ್ಮೆಲ್ಲರ ಮರ್ಯಾದೆ ಉಳಿಸಿದೆ. ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಡಬೇಕಿತ್ತು. ಇದೀಗ ಕಬಿನಿ ಡ್ಯಾಂ ತುಂಬಿದ್ದು, ತಮಿಳುನಾಡಿಗೆ ನೀರು ಬಿಡಲಾಗಿದೆ ಎಂದರು.
ಜಲಾಶಯದ ನೀರಿನ ಮಟ್ಟ 2282.51 ಅಡಿಯಷ್ಟಿದೆ. ಒಳ ಹರಿವಿನ ಪ್ರಮಾಣ 22,334 ಕ್ಯೂಸೆಕ್ ಇದ್ದರೆ, ಹೊರಹರಿವನ್ನು 8,000 ಕ್ಯೂಸೆಕ್ಗೆ ಇಳಿಕೆ ಮಾಡಲಾಗಿದೆ. ಜಲಾಶಯದಲ್ಲಿ 18.55 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನು ಕೇರಳದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಒಳಹರಿವು ಕಡಿಮೆಯಾಗಿದೆ. ಹವಾಮಾನ ಇಲಾಖೆಯು ಮತ್ತೆ ಮಳೆ ಚುರುಕು ಪಡೆಯಲಿದೆ ಎಂದು ತಿಳಿಸಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications