ಕನ್ನಂಬಾಡಿ ಭರ್ತಿಗೆ 3 ಅಡಿ ಬಾಕಿ: ಜುಲೈನಲ್ಲೇ ಸಿಎಂ ಬಾಗಿನ ಅರ್ಪಣೆ?
ಮಂಡ್ಯ, ಜುಲೈ 9 : ಕೇರಳದ ವೈನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಹೆಚ್ಚಿರುವ ಕಾರಣ ಕೃಷ್ಣರಾಜಸಾಗರ ಜಲಾಶಯ ಭರ್ತಿಗೆ ಕೇವಲ ಮೂರು ಅಡಿ ಮಾತ್ರ ಉಳಿದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಸಂಪೂರ್ಣ ಭರ್ತಿಯಾಗುವ ಸಾಧ್ಯತೆಗಳಿದೆ. ಇದೇ ಮೊದಲ ಬಾರಿಗೆ ಜುಲೈ ತಿಂಗಳಲ್ಲೇ ಕನ್ನಂಬಾಡಿ ಅಣೆಕಟ್ಟೆ ಭರ್ತಿಯಾಗುತ್ತಿದೆ.
ಸಾಮಾನ್ಯವಾಗಿ ಕೃಷ್ಣರಾಜಸಾಗರ ಜಲಾಶಯ ಆಗಸ್ಟ್ , ಸೆಪ್ಟಂಬರ್ ತಿಂಗಳಲ್ಲಿ ಭರ್ತಿಯಾಗುತ್ತಿತ್ತು. ಆದರೆ ಈ ಬಾರಿ ಅವಧಿಗೂ ಮುನ್ನವೇ ಭರ್ತಿಯಾಗಿರುವುದು ರೈತರಲ್ಲಿ ಸಂತಸ ಮೂಡಿದೆ. ಕಳೆದ ಬಾರಿ ಆಗಸ್ಟ್ ತಿಂಗಳಲ್ಲಿ ಭರ್ತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಸ್ಟ್ನಲ್ಲೇ ಕಾವೇರಿಗೆ ಬಾಗಿನ ಅರ್ಪಿಸಿದ್ದರು.
ಜಲಾಶಯದ ಗರಿಷ್ಠ ಮಟ್ಟ 124.80 ಇದ್ದು, ಶನಿವಾರ ಜಲಾಶಯದಲ್ಲಿ 121.42 ಅಡಿ ನೀರು ಸಂಗ್ರವಾಗಿದೆ. ಕಳೆದ ಒಂದು ವಾರದಿಂದೀಚೆಗೆ ಮುಂಗಾರು ಚುರುಕಾಗಿದ್ದು, ಕಾವೇರಿ ಕಣಿವೆ ವ್ಯಾಪ್ತಿಯ ಕಬಿನಿ, ಹಾರಂಗಿ, ಹೇಮಾವತಿ ಎಲ್ಲ ಜಲಾಶಯಗಳು ಮೈದುಂಬಿವೆ.

ಕಳೆದ ಸೋಮವಾರ ಜಲಾಶಯದಲ್ಲಿ 111.64 ಅಡಿ ನೀರು ಸಂಗ್ರಹವಾಗಿತ್ತು. 25905 ಕ್ಯೂಸೆಕ್ ನೀರು ಒಳ ಹರಿವು ದಾಖಲಾಗಿತ್ತು. ಜುಲೈ 5ರಂದು 113.60 ಅಡಿಗೆ ಏರಿಕೆಯಾಗಿದ್ದರೆ, 27302 ಕ್ಯೂಸೆಕ್ ನೀರು ಹರಿದುಬರುತ್ತಿತ್ತು. ಜುಲೈ 6ರಂದು 114.70 ಅಡಿ ನೀರು ಸಂಗ್ರಹವಾಗಿದ್ದರೆ, ಜಲಾಶಯಕ್ಕೆ 29468 ಕ್ಯೂಸೆಕ್ ನೀರು ಹರಿದುಬರುತ್ತಿತ್ತು.
ಜುಲೈ 7ರಂದು ಕನ್ನಂಬಾಡಿ ಅಣೆಕಟ್ಟೆಯಲ್ಲಿ 116.94 ಅಡಿ ನೀರು ಸಂಗ್ರಹವಾಗಿತ್ತು. 33602 ಕ್ಯೂಸೆಕ್ ಒಳಹರಿವು ದಾಖಲಾಗಿತ್ತು. ಜುಲೈ 8ರಂದು 119.44 ಅಡಿ ನೀರಿದ್ದರೆ, ಜಲಾಶಯಕ್ಕೆ 33962 ಕ್ಯೂಸೆಕ್ ನೀರು ಹರಿದುಬರುತ್ತಿತ್ತು. ಇಂದು ಜಲಾಶಯದಲ್ಲಿ 121.80 ಅಡಿ ನೀರು ಸಂಗ್ರಹವಾಗಿತ್ತು. ಒಟ್ಟಾರೆ ಜಲಾಶಯದಲ್ಲಿ 44.873 ಟಿ.ಎಂ.ಸಿ. ನೀರು ಸಂಗ್ರಹವಾಗಿದೆ. ಜಲಾಶಯದಿಂದ 4817 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಶುಕ್ರವಾರವಷ್ಟೇ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೆ.ಆರ್.ಎಸ್.ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಜುಲೈ ತಿಂಗಳಲ್ಲೇ ಕಾವೇರಿಗೆ ಬಾಗೀನ ಅರ್ಪಿಸುವ ಕಾರ್ಯಕ್ರಮ ಏರ್ಪಡಿಸುವುದಾಗಿ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications