KRS dam water level: ಕೃಷ್ಣರಾಜ ಸಾಗರ ಜಲಾಶಯದ ಒಳಹರಿವು ಹೆಚ್ಚಳ, ಅಂಕಿಅಂಶಗಳ ವಿವರ ತಿಳಿಯಿರಿ
ಮಂಡ್ಯ, ಅಕ್ಟೋಬರ್, 04: ಮಂಡ್ಯ, ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳ ಜೀವನಾಡಿಯಾದ ಕೃಷ್ಣರಾಜ ಸಾಗರ ಜಲಾಶಯದಲ್ಲಿ ಒಂದು ವಾರದ ಹಿಂದೆಯಷ್ಟೇ ನೀರಿನ ಪ್ರಮಾಣ 96 ಅಡಿಗೆ ಇಳಿಕೆಯಾಗಿತ್ತು. ಆದರೆ ಇದೀಗ ಸಾಧಾರಣ ಮಳೆಯಾದ ಹಿನ್ನೆಲೆ ಜಲಾಶಯದಲ್ಲಿ ನೀರಿನ ಪ್ರಮಾಣ 100ರ ಗಡಿ ದಾಟಿದೆ.
ಇದರಿಂದ ಈ ಭಾಗದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಬುಧವಾರ (ಅಕ್ಟೋಬರ್ 04) ಕೆಆರ್ಎಸ್ ಜಲಾಶಯದಲ್ಲಿ 100.36 ಅಡಿಯಷ್ಟು ನೀರು ಸಂಗ್ರಹ ಆಗಿದೆ ಎಂದು ಕೆಆರ್ಎಸ್ ನೀರಾವರಿ ನಿಗಮದ ಮಾಹಿತಿ ನೀಡಿದೆ.

ಇನ್ನು ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯವು 124.8 ಅಡಿಯಾಗಿದ್ದು, ಭರ್ತಿಯಾಗಲು 24 ಅಡಿ ಬಾಕಿಯಿದೆ. ಜಲಾಶಯದಲ್ಲಿ ಒಂದು ವಾರದಲ್ಲಿಯೇ 4 ಅಡಿ ನೀರು ಹೆಚ್ಚಳ ಆಗಿದ್ದು, ಒಂದು ತಿಂಗಳ ಬಳಿಕ ಅಂದರೆ ಇಂದು 100ರ ಅಡಿ ದಾಟಿದೆ.
ಈ ಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಬರ ತಾಂಡವವಾಡುತ್ತಿದ್ದು, ಹಾಗೂ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಕೆಆರ್ಎಸ್ ಜಲಾಶಯದಲ್ಲಿ ಕಳೆದ ಒಂದು ತಿಂಗಳಿಂದ ನೀರಿನ ಪ್ರಯಾಣ ಇಳಿಮುಖ ಆಗುತ್ತಲೇ ಇದೆ. ಸದ್ಯ ಕಳೆದ 5 ದಿನಗಳಿಂದ ಕಾವೇರಿ ಕಣಿವೆಯಲ್ಲಿ ಸಾಧಾರಣ ಮಳೆ ಸುರಿದ ಹಿನ್ನೆಲೆ ಕೆಆಆರ್ಎಸ್, ಹೇಮಾವತಿ, ಕಬಿನಿ ಮತ್ತು ಹಾರಂಗಿ ಜಲಾಶಯಗಳ ನೀರಿನ ಮಟ್ಟ ಏರಿಕೆ ಆಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜುಲೈ ತಿಂಗಳಿನಲ್ಲಿ ಭರೀ ಮಳೆಯಾದ ಹಿನ್ನೆಲೆ ಆಗ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ನೀರು 100 ಅಡಿಗಿಂತಲೂ ಹೆಚ್ಚಳವಾಗಿತ್ತು. ಬಳಿಕ ಮುಂಗಾರು ಬೆಳೆಗಳಿಗೆ ಕಾಲುವೆಗಳಿಂದ ನೀರು ಹರಿಸಿದ್ದು ಹಾಗೂ ತಮಿಳುನಾಡಿಗೆ ನೀರು ಹರಿಸಲಾಯಿತು. ಪರಿಣಾಮ ಸೆಪ್ಟೆಂಬರ್ನಲ್ಲಿ ಜಲಾಶಯದಲ್ಲಿ ನೀರಿನ ಪ್ರಯಾಣ ಕುಸಿತ ಕಾಣುತ್ತಲೇ ಬಂದಿತು. ಹೀಗೆ ದಿನ ಕಳೆದಂತೆಲ್ಲ ಸೆಪ್ಟೆಂಬರ್ ಕೊನೆಗೆ 97 ಅಡಿಗೆ ತಲುಪಿತ್ತು. ಆದರೆ ಇದೀಗ ಏರಿಕೆಯಾಗುತ್ತಾ ಸಾಗಿದ್ದು, ಇಂದು 100 ಅಡಿ ದಾಟಿದೆ.
ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯವು 49.5 ಟಿಎಂಸಿ ಆಗಿದೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ನೀರಿನ ಪ್ರಯಾಣ ಕೇವಲ 20.96 ಟಿಎಂಸಿ ಇತ್ತು. ಸದ್ಯ 23 ಟಿಎಂಸಿಗೆ ಹೆಚ್ಚಳ ಆಗಿದೆ. ಮತ್ತೊಂದೆಡೆ ಬಳಸಲು ಯೋಗ್ಯವಿರುವ ನೀರಿನ ಪ್ರಮಾಣವು 12 ಟಿಎಂಟಿಯಿಂದ 14.7 ಟಿಎಂಸಿಗೆ ಹೆಚ್ಚಳ ಆಗಿದೆ ಎಂದು ತಿಳಿದುಬಂದಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications