KRS dam water level: ಕೃಷ್ಣರಾಜ ಸಾಗರ ಜಲಾಶಯದ ಒಳಹರಿವು ಹೆಚ್ಚಳ, ಅಂಕಿಅಂಶಗಳ ವಿವರ ತಿಳಿಯಿರಿ
ಮಂಡ್ಯ, ಅಕ್ಟೋಬರ್, 04: ಮಂಡ್ಯ, ಮೈಸೂರು ಮತ್ತು ಬೆಂಗಳೂರು ಜಿಲ್ಲೆಗಳ ಜೀವನಾಡಿಯಾದ ಕೃಷ್ಣರಾಜ ಸಾಗರ ಜಲಾಶಯದಲ್ಲಿ ಒಂದು ವಾರದ ಹಿಂದೆಯಷ್ಟೇ ನೀರಿನ ಪ್ರಮಾಣ 96 ಅಡಿಗೆ ಇಳಿಕೆಯಾಗಿತ್ತು. ಆದರೆ ಇದೀಗ ಸಾಧಾರಣ ಮಳೆಯಾದ ಹಿನ್ನೆಲೆ ಜಲಾಶಯದಲ್ಲಿ ನೀರಿನ ಪ್ರಮಾಣ 100ರ ಗಡಿ ದಾಟಿದೆ.
ಇದರಿಂದ ಈ ಭಾಗದ ರೈತರ ಮುಖದಲ್ಲಿ ಮತ್ತೆ ಮಂದಹಾಸ ಮೂಡಿದೆ. ಬುಧವಾರ (ಅಕ್ಟೋಬರ್ 04) ಕೆಆರ್ಎಸ್ ಜಲಾಶಯದಲ್ಲಿ 100.36 ಅಡಿಯಷ್ಟು ನೀರು ಸಂಗ್ರಹ ಆಗಿದೆ ಎಂದು ಕೆಆರ್ಎಸ್ ನೀರಾವರಿ ನಿಗಮದ ಮಾಹಿತಿ ನೀಡಿದೆ.

ಇನ್ನು ಜಲಾಶಯದ ಗರಿಷ್ಠ ಸಂಗ್ರಹ ಸಾಮರ್ಥ್ಯವು 124.8 ಅಡಿಯಾಗಿದ್ದು, ಭರ್ತಿಯಾಗಲು 24 ಅಡಿ ಬಾಕಿಯಿದೆ. ಜಲಾಶಯದಲ್ಲಿ ಒಂದು ವಾರದಲ್ಲಿಯೇ 4 ಅಡಿ ನೀರು ಹೆಚ್ಚಳ ಆಗಿದ್ದು, ಒಂದು ತಿಂಗಳ ಬಳಿಕ ಅಂದರೆ ಇಂದು 100ರ ಅಡಿ ದಾಟಿದೆ.
ಈ ಬಾರಿ ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಹಿನ್ನೆಲೆ ಬರ ತಾಂಡವವಾಡುತ್ತಿದ್ದು, ಹಾಗೂ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಕೆಆರ್ಎಸ್ ಜಲಾಶಯದಲ್ಲಿ ಕಳೆದ ಒಂದು ತಿಂಗಳಿಂದ ನೀರಿನ ಪ್ರಯಾಣ ಇಳಿಮುಖ ಆಗುತ್ತಲೇ ಇದೆ. ಸದ್ಯ ಕಳೆದ 5 ದಿನಗಳಿಂದ ಕಾವೇರಿ ಕಣಿವೆಯಲ್ಲಿ ಸಾಧಾರಣ ಮಳೆ ಸುರಿದ ಹಿನ್ನೆಲೆ ಕೆಆಆರ್ಎಸ್, ಹೇಮಾವತಿ, ಕಬಿನಿ ಮತ್ತು ಹಾರಂಗಿ ಜಲಾಶಯಗಳ ನೀರಿನ ಮಟ್ಟ ಏರಿಕೆ ಆಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜುಲೈ ತಿಂಗಳಿನಲ್ಲಿ ಭರೀ ಮಳೆಯಾದ ಹಿನ್ನೆಲೆ ಆಗ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ ನೀರು 100 ಅಡಿಗಿಂತಲೂ ಹೆಚ್ಚಳವಾಗಿತ್ತು. ಬಳಿಕ ಮುಂಗಾರು ಬೆಳೆಗಳಿಗೆ ಕಾಲುವೆಗಳಿಂದ ನೀರು ಹರಿಸಿದ್ದು ಹಾಗೂ ತಮಿಳುನಾಡಿಗೆ ನೀರು ಹರಿಸಲಾಯಿತು. ಪರಿಣಾಮ ಸೆಪ್ಟೆಂಬರ್ನಲ್ಲಿ ಜಲಾಶಯದಲ್ಲಿ ನೀರಿನ ಪ್ರಯಾಣ ಕುಸಿತ ಕಾಣುತ್ತಲೇ ಬಂದಿತು. ಹೀಗೆ ದಿನ ಕಳೆದಂತೆಲ್ಲ ಸೆಪ್ಟೆಂಬರ್ ಕೊನೆಗೆ 97 ಅಡಿಗೆ ತಲುಪಿತ್ತು. ಆದರೆ ಇದೀಗ ಏರಿಕೆಯಾಗುತ್ತಾ ಸಾಗಿದ್ದು, ಇಂದು 100 ಅಡಿ ದಾಟಿದೆ.
ಜಲಾಶಯದಲ್ಲಿ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯವು 49.5 ಟಿಎಂಸಿ ಆಗಿದೆ. ಸೆಪ್ಟೆಂಬರ್ ಕೊನೆಯ ವಾರದಲ್ಲಿ ನೀರಿನ ಪ್ರಯಾಣ ಕೇವಲ 20.96 ಟಿಎಂಸಿ ಇತ್ತು. ಸದ್ಯ 23 ಟಿಎಂಸಿಗೆ ಹೆಚ್ಚಳ ಆಗಿದೆ. ಮತ್ತೊಂದೆಡೆ ಬಳಸಲು ಯೋಗ್ಯವಿರುವ ನೀರಿನ ಪ್ರಮಾಣವು 12 ಟಿಎಂಟಿಯಿಂದ 14.7 ಟಿಎಂಸಿಗೆ ಹೆಚ್ಚಳ ಆಗಿದೆ ಎಂದು ತಿಳಿದುಬಂದಿದೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications