ಹೆಚ್ಚಿದ ಕಲ್ಲುಗಣಿಗಾರಿಕೆ: ಜಾರ್ಖಂಡ್ ತಂಡದಿಂದ ಕೆಅರ್ಎಸ್ ಸುರಕ್ಷತೆ ಪರಿಶೀಲನೆ
ಮಂಡ್ಯ, ಜುಲೈ, 22: ಮಂಡ್ಯ ಜಿಲ್ಲೆಯಲ್ಲಿರುವ ಕೆಆರ್ಎಸ್ನ ಸುತ್ತಮುತ್ತ ನಡೆಯುತ್ತಿರುವ ಗಣಿಗಾರಿಕೆಯಿಂದ ಅಣೆಕಟ್ಟು ಸುರಕ್ಷತೆಗೆ ಅಪಾಯವಿರುವ ಕುರಿತು ಅಧ್ಯಯನ ನಡೆಸಲು ಜಿಲ್ಲಾಡಳಿತ ಮುಂದಾಗಿದ್ದು, ಜುಲೈ 25 ರಿಂದ 31ರವರೆಗೆ ಪ್ರಾಯೋಗಿಕ ಸ್ಫೋಟ ನಡೆಸಲು ನಿರ್ಧರಿಸಿದೆ.
ಜಾರ್ಖಂಡ್ ರಾಜ್ಯದ ಧನಬಾದ್ನ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಕೇಂದ್ರ ಪ್ರಾಯೋಗಿಕ ಸ್ಫೋಟ ನಡೆಸಲಿದೆ. ಕೃಷ್ಣರಾಜಸಾಗರ ಸುರಕ್ಷತೆಗಾಗಿ ಅಧ್ಯಯನ ನಡೆಸುವುದರೊಂದಿಗೆ ಅಲ್ಲಿನ ಗಣಿಗಾರಿಕೆ ನಿಷೇಧಿಸುವ ಸಂಬಂಧ ಸುರಕ್ಷಿತ ವಲಯ ಗುರುತಿಸಲಿದೆ. ಇದಕ್ಕಾಗಿ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಮೈನಿಂಗ್ ಅಂಡ್ ಯೂಯೆಲ್ ಸರ್ವೇಯವರು ಅಣೆಕಟ್ಟೆಗೆ ಹತ್ತಿರದಲ್ಲಿರುವ ಪ್ರದೇಶದಲ್ಲಿ ಅಧ್ಯಯನ ನಡೆಸುವಂತೆ ತಿಳಿಸಿದ್ದಾರೆ.
5 ಗಣಿ ಪ್ರದೇಶಗಳಲ್ಲಿ ಸ್ಫೋಟಕ್ಕೆ ಸಿದ್ಧತೆ
ಸಿಎಸ್ಐಆರ್ ಮತ್ತು ಸಿಐಎಂಎಆರ್ ವರದಿಯಲ್ಲಿ ತಿಳಿಸಿರುವಂತೆ ಒಟ್ಟು 5 ಕ್ವಾರಿಗಳಲ್ಲಿ ಟ್ರಯಲ್ ಬ್ಲಾಸ್ಟಿಂಗ್ಗಳನ್ನು ನಡೆಸಲು ಯೋಜಿಸಿದೆ. ಸ್ಫೋಟ ಕಾರ್ಯಾಚರಣೆ ನಡೆಸಲು ಅಗತ್ಯವಾದ ಸಾಮಗ್ರಿಗಳು ಮತ್ತು ನುರಿತ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಸೂಚಿಸಲಾಗಿದೆ. ಶ್ರೀರಂಗಪಟ್ಟಣ ಮತ್ತು ಪಾಂಡವಪುರ ವ್ಯಾಪ್ತಿಯಲ್ಲಿ 5 ಪ್ರಾಯೋಗಿಕ ಸ್ಫೋಟಗಳನ್ನು ನಡೆಸಲು ರಂಧ್ರಗಳನ್ನು ಕೊರೆದು, ಸ್ಫೋಟಕಗಳನ್ನು ಸರಬರಾಜು ಮಾಡಲು ಕೊಡಗು ಜಿಲ್ಲೆ ಕುಶಾಲನಗರದ ಕಂಪನಿಯೊಂದಕ್ಕೆ ಜವಾಬ್ದಾರಿ ವಹಿಸಲಾಗಿದೆ.

7 ದಿನಗಳ ಕಾಲ ಸ್ಫೋಟ ನಡೆಸುವುದರೊಂದಿಗೆ ಸ್ಪೋಟದಿಂದ ಭೂಮಿಯೊಳಗೆ ಉಂಟಾಗಬಹುದಾದ ಕಂಪನದ ತೀವ್ರತೆ, ಶಬ್ಧವನ್ನು ಅಳೆಯಲಾಗುತ್ತದೆ. ಹಾಗೂ ಏರ್ಬ್ಲಾಸ್ಟ್ ನಡೆಸುವುದರೊಂದಿಗೆ ಅಣೆಕಟ್ಟಿನ ಸುರಕ್ಷತೆ ಕುರಿತು ವಿಜ್ಞಾನಿಗಳ ತಂಡ ಅಧ್ಯಯನ ನಡೆಸಲಿದೆ. ಅಧ್ಯನಕ್ಕೆ ಆಗಮಿಸುವ ವಿಜ್ಞಾನಿಗಳು ಮತ್ತು ಸಿಬ್ಬಂದಿ ತಂಡಕ್ಕೆ ಜಿಲ್ಲಾಡಳಿತದ ವತಿಯಿಂದ ಸೂಕ್ತ ಪೊಲೀಸ್ ಭದ್ರತೆಯನ್ನು ಮಾಡಲಾಗಿದೆ.

3 ತಿಂಗಳಲ್ಲಿ ವರದಿ ಸಲ್ಲಿಸುವುದಾಗಿ ಭರವಸೆ
ಜಾರ್ಖಂಡ್ ಮೂಲದ ವಿಜ್ಞಾನಿಗಳು ಅಧ್ಯಯನ ನಡೆಸುವುದರೊಂದಿಗೆ 3 ತಿಂಗಳೊಳಗೆ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದ್ದಾರೆ. ಈ ಬಾರಿ ಸ್ಫೋಟದಿಂದ ಯಾವುದೇ ತೊಂದರೆಗಳು ಆಗದೇ ಆಯಶಸ್ವಿಯಾಗಿ ಪೂರ್ಣಗೊಂಡರೆ ಅಧ್ಯಯನ ನಡೆಸಿದ ವಿಜ್ಞಾನಿಗಳು ವರದಿ ಸಲ್ಲಿಕೆ ಕಾರ್ಯ ಸುಗಮವಾಗಲಿದೆ. ವಿಜ್ಞಾನಿಗಳು ನೀಡುವ ವರದಿ ಹೆಚ್ಚಿನ ಮಹತ್ವವನ್ನು ಪಡೆದುಕೊಂಡಿದೆ. ಕೇವಲ ಕೆಆರ್ಎಸ್ ಮಾತ್ರವಲ್ಲದೆ ರಾಜ್ಯದ ಉಳಿದ ಅಣೆಕಟ್ಟುಗಳ ಸುರಕ್ಷತೆ ದೃಷ್ಟಿಯಿಂದಲೂ ಗಣಿಗಾರಿಕೆ ಸಂಬಂಧ ಯಾವ ಯಾವ ನಿಯಮಾವಳಿಗಳನ್ನು ರೂಪಿಸಬೇಕು ಎನ್ನುವುದಕ್ಕೆ ಹೊಸ ಮಾರ್ಗಸೂಚಿಯಾಗಲಿದೆ.

ರಾಜ್ಯದಲ್ಲಿ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಸ್ಫೋಟಕ ನಡೆಸುವುದನ್ನು ನೋಡಿದ್ದೇವೆ. ಇದರಿಂದ ಎಷ್ಟೋ ನದಿಗಳು, ಅಣೆಕಟ್ಟುಗಳಿಗೆ ತೊಂದರೆಗಳು ಕೂಡ ಆಗುತ್ತಿವೆ. ಅಣೆಕಟ್ಟುಗಳು ಸ್ಫೋಟಕಗಳಿಂದ ಬಿರುಕು ಬಿಡುತ್ತಿದ್ದು, ಅಪಾಯದ ಅಂಚಿನಲ್ಲಿವೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಅದೇ ರೀತಿಯಾಗ ಬರೀ ರಾಜ್ಯದಲ್ಲಿ ಅಲ್ಲದೇ ದೇಶದಲ್ಲೇ ಪ್ರಖ್ಯಾತಿ ಪಡೆದಿರುವ ಕೆಆರ್ಎಸ್ ಅಣೆಕಟ್ಟು ಸುತ್ತಲಿನ ಗಣಿಗಾರಿಕೆಯಿಂದ ಅಪಾಯದ ಅಂಚಿನಲ್ಲಿದೆ ಎಂದು ಆರೋಪಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೆ ಎಚ್ಚೆತ್ತ ಮಂಡ್ಯ ಜಿಲ್ಲಾಡಳಿತ ಕೆಆರ್ಎಸ್ ಅಣೆಕಟ್ಟಿನ ಸುತ್ತ ಅಧ್ಯಯನ ನಡೆಸಲು ಮುಂದಾಗಿದೆ. ಹೊರರಾಜ್ಯಗಳಿಂದ ವಿಜ್ಞಾನಿಗಳನ್ನು ಕರೆಸಿ ಅಧ್ಯಯನ ಮಾಡಿಸಲು ನಿರ್ಧರಿಸಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications