ಹಿಡಿಮಣ್ಣಿನ ಗೌರವದೊಂದಿಗೆ ಪುಟ್ಟಣ್ಣಯ್ಯ ಅಂತ್ಯಸಂಸ್ಕಾರ
ಮಂಡ್ಯ, ಫೆಬ್ರವರಿ 21 : ಭಾನುವಾರ ರಾತ್ರಿ ನಿಧನರಾದ ರೈತನಾಯಕ, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ ಗುರುವಾರ (ಫೆ.22) ರಂದು ನಡೆಯಲಿದೆ.
ರಾಜ್ಯದ ವಿವಿಧೆಡೆಯಿಂದ ಆಗಮಿಸುವ ಸಾವಿರಾರು ರೈತ ಕಾರ್ಯಕರ್ತರು ತಮ್ಮ ಜಿಲ್ಲೆಗಳಿಂದ ಒಂದು ಹಿಡಿ ಮಣ್ಣನ್ನು ತಂದು ಹಾಕುವ ಮೂಲಕ ವಿಶೇಷವಾಗಿ ಅಂತ್ಯಕ್ರಿಯೆ ನಡೆಸಲು ರಾಜ್ಯ ರೈತಸಂಘ ತೀರ್ಮಾನಿಸಿದೆ.
ಈಗಾಗಲೇ ಜಿಲ್ಲಾಧಿಕಾರಿಗಳು ರೈತಸಂಘದ ಮುಖಂಡರು ಸಭೆ ನಡೆಸಿ ಅಂತ್ಯಸಂಸ್ಕಾರ ಸಂದರ್ಭ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧಾರ ಕೈಗೊಂಡಿದ್ದಾರೆ. ವಿದೇಶದಲ್ಲಿರುವ ಪುತ್ರಿ, ಮೊಮ್ಮಕ್ಕಳು ಆಗಮಿಸಿದ ಬಳಿಕ ಗುರುವಾರ ಅಂತ್ಯಕ್ರಿಯೆ ನಡೆಯಲಿದೆ.

ಮೈಸೂರಿನ ಜೆಎಸ್ಎಸ್ ಕಾಲೇಜಿನಲ್ಲಿರುವ ಪಾರ್ಥಿವ ಶರೀರವನ್ನು ಬೆಳಗ್ಗೆ 5 ಗಂಟೆಗೆ ತೆರೆದ ವಾಹನದಲ್ಲಿ ಶ್ರೀರಂಗಪಟ್ಟಣದ ಮೂಲಕ ಪಾಂಡವಪುರಕ್ಕೆ 6 ಗಂಟೆಗೆ ತಂದು ವಾಹನದಲ್ಲಿಯೇ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ.
In Pics : ಅಗಲಿದ ರೈತ ನಾಯಕನಿಗೆ ಗಣ್ಯರ ಅಶ್ರುತರ್ಪಣ
ನಂತರ ಐದುದೀಪ ವೃತ್ತದಿಂದ ಹಾರೋಹಳ್ಳಿ, ಎಲೆಕೆರೆ ಮಾರ್ಗವಾಗಿ ಕ್ಯಾತನಹಳ್ಳಿ ಗ್ರಾಮದ ಪುಟ್ಟಣ್ಣಯ್ಯನವರ ನಿವಾಸಕ್ಕೆ ತೆಗೆದುಕೊಂಡು ಹೋಗಿ ಅಲ್ಲಿ ಕೆಲಕಾಲ ಕುಟುಂಬಸ್ಥರಿಗೆ ವಿಧಿವಿಧಾನಕ್ಕೆ ಅವಕಾಶಮಾಡಿಕೊಡಲಾಗುತ್ತದೆ.
ನಂತರ ಕ್ಯಾತನಹಳ್ಳಿಯ ಕ್ರೀಡಾಂಗಣದಲ್ಲಿ ಬೆಳಗ್ಗೆ 7.30ರಿಂದ 10.30ರವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇದಕ್ಕಾಗಿ ಕ್ರೀಡಾಂಗಣದಲ್ಲಿ ಬೃಹತ್ ಸ್ಕ್ರೀನ್ ವ್ಯವಸ್ಥೆಯನ್ನು ಜಿಲ್ಲಾಡಳಿತ ಮಾಡಿದೆ.
ಬೆಳಗ್ಗೆ 11 ಗಂಟೆ ಬಳಿಕ ರೈಸ್ಮಿಲ್ ಪಕ್ಕದಲ್ಲಿರುವ ತೋಟದಲ್ಲಿ ಪುಟ್ಟಣ್ಣಯ್ಯನವರ ಅಂತ್ಯಕ್ರಿಯೆಯನ್ನು ವಿಧಿವಿಧಾನದ ಪ್ರಕಾರ ಅಂತ್ಯಕ್ರಿಯೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ.
ಈಗಾಗಲೇ ಪುಟ್ಟಣ್ಣಯ್ಯನವರ ಅಂತ್ಯಕ್ರಿಯೆ ನಡೆಯುವ ಸ್ಥಳ ಪರಿಶೀಲನೆ ನಡೆಸಿರುವ ಜಿಲ್ಲಾಡಳಿತ ಕುಟುಂಬಸ್ಥರಿಗೆ, ಗಣ್ಯರಿಗೆ, ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಪ್ರತ್ಯೇಕವಾದ ಸ್ಥಳನ್ನು ನಿರ್ಮಿಸಲು ಸಿದ್ಧತೆ ನಡೆದಿದೆ.
ಅಂತ್ಯಕ್ರಿಯೆಯನ್ನು ವೀಕ್ಷಣೆ ಮಾಡಲು ಅಂತ್ಯಕ್ರಿಯೆಯ ನಡೆಯುವ ಸ್ಥಳದಲ್ಲಿ ಸ್ಕ್ರೀನ್ ವ್ಯವಸ್ಥೆಯನ್ನು ಸಹ ಮಾಡಲಾಗುತ್ತಿದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಸಾರ್ವಜನಿಕರು, ಕಾರ್ಯಕರ್ತರು, ಅಭಿಮಾನಿಗಳಿಗೆ ಊಟದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ದೂರದ ಊರಿನಿಂದ ಆಗಮಿಸುವವರಿಗೆ ವಾಸ್ತವ್ಯದ ವ್ಯವಸ್ಥೆಯನ್ನು ಸಹ ಕ್ಯಾತನಹಳ್ಳಿ ಗ್ರಾಮದಲ್ಲಿ ಮಾಡಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications