ಮಂಡ್ಯ : ಕನಗನಮರಡಿಯಲ್ಲಿ ಸರ್ಕಾರಿ ಬಸ್ ಸೇವೆಗೆ ಚಾಲನೆ
ಮಂಡ್ಯ, ನವೆಂಬರ್ 27 : ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ 2 ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭಿಸಲಾಗಿದೆ. ಶನಿವಾರ ಖಾಸಗಿ ಬಸ್ ವಿ.ಸಿ.ನಾಲೆಗೆ ಉರುಳಿ ಬಿದ್ದು 30 ಜನರು ಮೃತಪಟ್ಟಿದ್ದರು.
ಮಂಡ್ಯ-ಕನಗನಮರಡಿ-ಪಾಂಡವಪುರ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಎರಡು ಬಸ್ ಸಂಚಾರವನ್ನು ಆರಂಭಿಸಿದೆ. ಸೋಮವಾರ ಬೆಳಗ್ಗೆಯಿಂದಲೇ ಬಸ್ ಸಂಚಾರ ಆರಂಭವಾಗಿದ್ದು, ಮಾರ್ಗದಲ್ಲಿ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ.
ಮಂಡ್ಯ ಬಸ್ ದುರಂತ: ಸಂತ್ರಸ್ತರ ಕುಟುಂಬಕ್ಕೆ 1.5 ಕೋಟಿ ಬಿಡುಗಡೆಗೆ ಸಿದ್ಧತೆ
ಮಂಡ್ಯ-ಪಾಂಡವಪುರ ಮಾರ್ಗದಲ್ಲಿ ಓಡಾಡುವ ಖಾಸಗಿ ಬಸ್ ಹಾಗೂ ಆಟೋಗಳ ನಡುವೆ ಪೈಪೋಟಿ ಇತ್ತು. ಪ್ರಯಾಣಿಕರ ಸುರಕ್ಷತೆಗಿಂತ ಹಣಗಳಿಸುವುದೇ ಇವರ ಗುರಿಯಾಗಿತ್ತು. ಅದರ ಪ್ರತಿಫಲವಾಗಿಯೇ ದುರಂತ ನಡೆದಿದೆ.
ಕನಗನಮರಡಿ ಬಸ್ ದುರಂತ: ಚಾಲಕನ ವಿರುದ್ಧ ಎಫ್ಐಆರ್ ದಾಖಲು
ದುರಂತಕ್ಕೂ ಮೊದಲು ಪಾಂಡವಪುರ-ಕನಗನಮರಡಿ-ಮಂಡ್ಯ ಮಾರ್ಗದಲ್ಲಿ 1 ಕೆಎಸ್ಆರ್ಟಿಸಿ ಬಸ್ ಸಂಚಾರ ನಡೆಸುತ್ತಿತ್ತು. ಬೆಳಗ್ಗೆ 6 ಹಾಗೂ ಸಂಜೆ 7 ಗಂಟೆಗೆ ಸಂಚಾರ ನಡೆಸುತ್ತಿದ್ದ ಬಸ್, ಪ್ರಯಾಣಿಕರ ಕೊರತೆ ಹಿನ್ನಲೆಯಲ್ಲಿ ಸ್ಥಗಿತಗೊಂಡಿತ್ತು.
ಬಸ್ ದುರಂತದಲ್ಲಿ ಮಡಿದವರ ಅಂತ್ಯ ಸಂಸ್ಕಾರ: ಮುಗಿಲು ಮುಟ್ಟಿದ ರೋದನ
ಆರ್ಟಿಓಗಳು ನೀಡುವ ಮಾಹಿತಿಯಂತೆ ಜಿಲ್ಲೆಯಲ್ಲಿ 465 ಅನುಮತಿ ಪಡೆದ ಖಾಸಗಿ ಬಸ್ಗಳಿವೆ. ಆದರೆ, ಅನುಮತಿಯನ್ನು ಪಡೆಯದೇ 100ಕ್ಕೂ ಅಧಿಕ ಬಸ್ಗಳು ಸಂಚಾರ ನಡೆಸುತ್ತಿವೆ. ಪ್ರಯಾಣಿಕರ ಸುರಕ್ಷತೆ ಬಗ್ಗೆ ಈ ಬಸ್ ಮಾಲೀಕರು ತಲೆಕೆಡಿಸಿಕೊಳ್ಳುವುದಿಲ್ಲ.
ಶನಿವಾರ ಕನಗನಮರಡಿ ಸಮೀಪ ರಾಜ್ಕುಮಾರ್ ಹೆಸರಿನ ಖಾಸಗಿ ಬಸ್ ವಿ.ಸಿ.ನಾಲೆಗೆ ಉರುಳಿ ಬಿದ್ದಿತ್ತು. ಬಸ್ನಲ್ಲಿದ್ದ 30 ಪ್ರಯಾಣಿಕರು ಜಲಸಮಾಧಿಯಾಗಿದ್ದರು. ಇಬ್ಬರು ಮಾತ್ರ ಜೀವ ಉಳಿಸಿಕೊಂಡಿದ್ದರು. ಬಸ್ ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತ ನಾಪತ್ತೆಯಾಗಿದ್ದಾನೆ.