ಯಾವಾಗ ಬೇಕಾದ್ರು ಸಾಯ್ಬೋದು ಅಂದಿದ್ದ ಎಚ್ಡಿಕೆ 85 ವರ್ಷ ಬದುಕಿರ್ತಾರಂತೆ
Recommended Video

ಮಂಡ್ಯ, ಅಕ್ಟೋಬರ್ 27: ನಿನ್ನೆಯಷ್ಟೆ, 'ನಾನು ಯಾವಾಗ ಬೇಕಾದ್ರು ಸಾಯಬಹುದು' ಎಂದಿದ್ದ ಸಿಎಂ ಕುಮಾರಸ್ವಾಮಿ ಇಂದು ವರಸೆ ಬದಲಿಸಿದ್ದಾರೆ.
ಇಂದು ಮಂಡ್ಯದ ಪಾಂಡವಪುರದಲ್ಲಿ ಉಪಚುನಾವಣೆ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, 'ನಾನೇನು ನಾಳೆ ಬೆಳಿಗ್ಗೆಯೇ ಸಾಯುವುದಿಲ್ಲ, 85 ವರ್ಷ ಆಗುವವರೆಗೆ ನಾನು ಬದುಕಿರುತ್ತೇನೆ' ಎಂದು ಹೇಳಿದರು.
ನಿನ್ನೆ ಸಿಎಂ ನೀಡಿದ್ದ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ರೋಲ್ಗೆ ಗುರಿ ಆಗಿತ್ತು. ಆದ ಕಾರಣ ಸಿಎಂ ಅವರು ಇಂದು ತಮ್ಮ ಹೇಳಿಕೆ ಬದಲಿಸಿದ್ದಾರೆ ಎನ್ನಲಾಗಿದೆ.
ನಿನ್ನೆ ಮಳವಳ್ಳಿಯಲ್ಲಿ ಮಾತನಾಡಿದ್ದ ಕುಮಾರಸ್ವಾಮಿ ಅವರು, 'ಇಸ್ರೇಲ್ನಲ್ಲೇ ನಾನು ಸಾಯಬೇಕಿತ್ತು, ನನ್ನ ಆರೋಗ್ಯ ಸರಿ ಇಲ್ಲ ನಾನು ಯಾವಾಗ ಬೇಕಾದರೂ ಸಾಯಬಹುದು' ಎಂದು ಭಾವನಾತ್ಮಕವಾಗಿ ಹೇಳಿದ್ದರು.

'ಕಣ್ಣೀರು ನಾಟಕವಲ್ಲ ನಾನು ಭಾವುಕ ಜೀವಿ'
ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಕುಮಾರಸ್ವಾಮಿ ಇದೇ ವಿಷಯ ಮಾತನಾಡಿ, ' ನಿನ್ನೆಯ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದು ನಾಟಿಕೀಯವಲ್ಲ, ನಾನು ಸ್ವಭಾವತಃ ಭಾವಜೀವಿ' ಎಂದು ಸಮಜಾಯಿಷಿ ನೀಡಿದ್ದರು.

ಟ್ರೋಲ್ಗೆ ಒಳಗಾಗುತ್ತಿರುವ ಸಿಎಂ ಕಣ್ಣೀರು
ಕುಮಾರಸ್ವಾಮಿ ಅವರು ಸಾಯುವ ಮಾತನ್ನು ಚುನಾವಣೆಗೆ ಮುಂಚೆ ಸಹ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರು ಭಾವನಾತ್ಮಕವಾಗಿ ಮಾತನಾಡಿದಾಗಲೆಲ್ಲಾ ಟ್ರೋಲ್ಗೆ ಗುರಿ ಆಗುತ್ತಿರುವುದು ಸಾಮಾನ್ಯವಾಗಿದೆ. ಚುನಾವಣೆ ಸಮಯದಲ್ಲಿ ಮಾತ್ರ ಕುಮಾರಸ್ವಾಮಿ ಸಾಯುವ ಮಾತನ್ನಾಡುತ್ತಾರೆ ಎಂದು ಟ್ರೋಲ್ಗಳು ವ್ಯಂಗ್ಯ ಮಾಡಿವೆ.

ಕಣ್ಣೀರು ಹಾಕಿದ್ದ ಸಿಎಂ
ಸಿಎಂ ಆದಮೇಲೆ ಸಹ ಕುಮಾರಸ್ವಾಮಿ ಅವರು ಜೆಡಿಎಸ್ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ್ದರು. ನಾನು ನೆಮ್ಮದಿಯಿಂದ ಸಿಎಂ ಹುದ್ದೆ ಅನುಭವಿಸುತ್ತಿಲ್ಲ ಎಂದು ಹೇಳಿದ್ದರು. ಸಿಎಂ ಅವರು ಕಣ್ಣೀರು ಹಾಕಿದ್ದ ಘಟನೆಯನ್ನು ಬಳಸಿಕೊಂಡ ಬಿಜೆಪಿ, ಕಾಂಗ್ರೆಸ್ ನೀಡುತ್ತಿರುವ ಕಾಟದಿಂದ ಕಣ್ಣೀರು ಹಾಕುತಿದ್ದಾರೆ ಎಂದು ಆರೋಪಿಸಿದ್ದರು. ಕೇಂದ್ರ ಸಚಿವ ಅರುಣ್ ಜೇಟ್ಲಿ ಸಹ ಈ ಬಗ್ಗೆ ಟ್ವೀಟ್ ಮಾಡಿ ವ್ಯಂಗ್ಯ ಮಾಡಿದ್ದರು.

ದಸರಾ ಸಮಯದಲ್ಲಿ ಕಣ್ಣೀರು
ಇತ್ತೀಚೆಗಷ್ಟೆ ಯುವ ದಸರಾ ಉದ್ಘಾಟನೆ ಮಾಡಿದ್ದ ಕುಮಾರಸ್ವಾಮಿ ಅವರು, ಗಾಯಕ ವಿಜಯ್ ಪ್ರಕಾಶ್ ಹಾಡಿದ್ದ 'ಒಳಿತು ಮಾಡು ಮನಸಾ' ಹಾಡು ಕೇಳಿ ಭಾವುಕರಾಗಿ ಕಣ್ಣೀರು ಹಾಕಿದ್ದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications