ನರೇಗಾ ಕೂಲಿ ನೀಡದೇ ಚೆಲ್ಲಾಟ: ಕೆ.ಆರ್ ಪೇಟೆಯಲ್ಲಿ ಕೂಲಿ ಕಾರ್ಮಿಕರ ದಿಢೀರ್ ಬೃಹತ್ ಪ್ರತಿಭಟನೆ
ಮಂಡ್ಯ, ನವೆಂಬರ್ 19: ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮಂದಗೆರೆಯಲ್ಲಿ ಕೂಲಿ ಕಾರ್ಮಿಕರು ಏಕಾಏಕಿ ಪ್ರತಿಭಟನೆ ನಡೆಸಿದ್ದಾರೆ. ಮಂದಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ನರೇಗಾ ಯೋಜನೆಯಲ್ಲಿ ನಾನಾ ಕೆಲಸಗಳನ್ನು ಮಾಡಿರುವ ಕೂಲಿ ಕಾರ್ಮಿಕರಿಗೆ ಕೂಲಿ ಹಣ ನೀಡಿಲ್ಲ. ಜೊತೆಗೆ ಎನ್.ಎಂ.ಆರ್ನಲ್ಲೂ ಕೂಲಿ ಹಣವನ್ನು ಜೀರೋ ಮಾಡಿದ್ದಾರೆ ಎಂದು ಆರೋಪಿಸಿ 50ಕ್ಕೂ ಹೆಚ್ಚು ಕೂಲಿ ಕಾರ್ಮಿಕರು ಕೆ.ಆರ್.ಪೇಟೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣ ಅಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ತಮ್ಮ ಕೂಲಿ ಹಣ ನೀಡುವಂತೆ ಐವತ್ತಕ್ಕೂ ಹೆಚ್ಚು ಕಾರ್ಮಿಕರು ಆಗ್ರಹಿಸಿದ್ದಾರೆ. ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಜಗದೀಶ್ ಮಾತನಾಡಿ, ಮಹತ್ವಕಾಂಕ್ಷೆ ಯೋಜನೆಯಾದ ನರೇಗಾ ಯೋಜನೆಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿರುವ ನಮ್ಮ ಗ್ರಾಮದ 89 ಕಾರ್ಮಿಕರು ಕೆಲಸ ಮಾಡಿದ್ದಾರೆ. ಕೆಲಸ ಮಾಡಿದ ಎನ್.ಎಂ.ಆರ್ ನಲ್ಲೂ ಕೂಲಿ ಹಣವನ್ನು ಜೀರೋ ಎಂದು ಅಧಿಕಾರಿಗಳು ಉದ್ದೇಶ ಪೂರಕವಾಗಿ ನಮೂದಿಸಿದ್ದಾರೆ. ಒಂದು ವಾರದಿಂದ ನಮ್ಮ ಗ್ರಾಮದ ಕಾರ್ಮಿಕರಿಗೆ ಕೆಲಸ ನೀಡಿಲ್ಲ. ಕೂಡಲೇ ಕೂಲಿ ಕಾರ್ಮಿಕರಿಗೆ ಹಣ ನೀಡುವಂತೆ ಒತ್ತಾಯಿಸಿದರು.

ಕೂಲಿ ಕಾರ್ಮಿಕರು ಕೆಲಸವಿಲ್ಲದೇ ಪರದಾಡುವಂತಾಗಿದೆ. ಸ್ಥಳೀಯ ಪಿಡಿಒ ಹಾಗೂ ಇಂಜಿನಿಯರ್ ಅವರ ಉದ್ದೇಶ ಪೂರ್ವಕವಾಗಿ ನಿರ್ಲಕ್ಷ್ಯದಿಂದ ಕೂಲಿ ಪಾವತಿಯಾಗುತ್ತಿಲ್ಲ ಎಂದು ಆರೋಪಿಸಿದರು. ಸಮಸ್ಯೆಗಳ ಈಡೇರಿಕೆಗಾಗಿ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಲಿ ಮಾಡುವ ಗ್ರಾಮೀಣ ಮಹಿಳೆಯರು ಕಚೇರಿಗಳಿಗೆ ಅಲೆದಾಡಿ ಸಾಕಾಗಿದೆ. ನಮ್ಮ ಕೂಲಿ ಹಣ ನೀಡುವವರೆಗೂ ಧರಣಿ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನಾಕಾರರ ಸಮಸ್ಯೆ ಆಲಿಸಿದ ತಾ.ಪಂ ಸಹಾಯಕ ನಿರ್ದೇಶಕ ಉಮಾಶಂಕರ್, ಕೂಲಿ ಕಾರ್ಮಿಕರ ಸಮಸ್ಯೆಗಳ ಈಡೇರಿಕೆಗೆ ಬುಧವಾರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು. ತಾಲೂಕು ಪಂಚಾಯಿತಿ ಆವರಣದಲ್ಲಿ ಕ್ಯಾತನಹಳ್ಳಿ ಗ್ರಾಮದಿಂದ ಆಗಮಿಸಿದ್ದ ಕೂಲಿ ಕಾರ್ಮಿಕರು ತಾ.ಪಂ.ಕಾರ್ಯನಿರ್ವಾಹಣ ಅಧಿಕಾರಿ ಹಾಗೂ ಮಂದಗೆರೆ ಪಿಡಿಓ ನರೇಗಾ ಯೋಜನೆ ಇಂಜಿನಿಯರ್ಗಳ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
ಪ್ರತಿಭಟನೆಯಲ್ಲಿ ಶಿವರಾಜು, ಜವರೇಗೌಡ, ಶಿವಯ್ಯ, ಮಹಾದೇವ, ಅವಿನಾಶ, ರಾಜಯ್ಯ,ಚಂದ್ರಚಾರಿ, ಸೋಮಶೇಖರ್, ಪುಟ್ಟರಾಜು,ಉದೇಶ, ಜಯಲಕ್ಷ್ಮಿ, ವಸಂತ, ರೇಖಾ, ಚಂದ್ರಮ್ಮ, ಕಾಳಯ್ಯ, ಹೇಮಾವತಿ, ಶಿವಕುಮಾರಿ, ಪುಟ್ಟತಾಯಿ, ಜಯಲಕ್ಷ್ಮಿ,ಮೀನಾಕ್ಷಿ, ಕಾಂತಮ್ಮ, ರಂಜಿತ, ಕೆಂಪಮ್ಮ, ಪುಟಮ್ಮ, ಸುಮಿತ್ರಾ, ಕುಮಾರಿ, ತಮ್ಮಯ್ಯ, ಲಕ್ಷ್ಮಿ, ಸೇರಿದಂತೆ ಇತರರು ಭಾಗವಹಿಸಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications