ಮದ್ದೂರು ಕೆರೆ ಕೋಡಿ ಒಡೆದು ಪ್ರವಾಹ; ಬೆಂಗಳೂರು-ಮೈಸೂರು ಹೆದ್ದಾರಿ ಬಂದ್
ಮಂಡ್ಯ, ಆಗಸ್ಟ್ 3 : ಐತಿಹಾಸಿಕ ಮದ್ದೂರು ಕೆರೆ ಕೋಡಿ ಒಡೆದು ಉಂಟಾದ ನೀರಿನ ಪ್ರವಾಹಕ್ಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದರಿಂದ ಬುಧವಾರ ಇಡೀ ದಿನ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿರುವ ಘಟನೆ ನಡೆಯಿತು.
ಮದ್ದೂರು ಕೆರೆ ಕೋಡಿ ನೀರು ಭಾರೀ ಪ್ರಮಾಣದಲ್ಲಿ ಕೆರೆ ಪಾತ್ರದ ಜಮೀನುಗಳು ಪ್ರವಾಹದಲ್ಲಿ ಕೊಚ್ಚಿಹೋಗಿವೆ. ಕೊಲ್ಲಿ ನದಿ ಮೂಲಕ ಹರಿದ ನೀರಿನ ಪ್ರವಾಹದಿಂದಾಗಿ ಮದ್ದೂರು ಪಟ್ಟಣದಲ್ಲಿ ಭಾರೀ ಪ್ರಮಾಣದ ಆನಾಹುತ ಸೃಷ್ಠಿಸಿದೆ. ಮಂಗಳವಾರವಷ್ಟೇ ಮಂಡ್ಯ ತಾಲೂಕು ಹೊಸಬೂದನೂರು ಕೆರೆ ಒಡೆದು ಅಪಾರ ಪ್ರಮಾಣದ ನೀರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಸಂಚಾರ ಬಂದ್ ಆಗಿತ್ತು. ಈಗ ಹೆದ್ದಾರಿಯಲ್ಲಿ ಹರಿಯುತ್ತಿರುವ ನೀರಿನ ಪ್ರಮಾಣ ಇಳಿಮುಖವಾಗಿದೆ. ಇದರ ಬೆನ್ನಲ್ಲೇ ಮಂಡ್ಯ ತಾಲೂಕು ಕೆರೆಗೋಡು ಹಾಗೂ ಹುಂಜನಕೆರೆಗಳು ಭಾರಿ ಮಳೆಯಿಂದಾಗಿ ಒಡೆದು ಪ್ರವಾಹೋಪಾದಿಯಲ್ಲಿ ಹರಿದು ಮದ್ದೂರು ಕೆರೆಯತ್ತ ಹರಿದುಬಂದಿದ್ದರಿಂದ ಈಗ ಮದ್ದೂರು ಕೆರೆಯೂ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ.
ಕೆರೆಯ ಕೆಳ ಭಾಗದಲ್ಲಿ ಬರುವ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗಿದೆ. ಕೆರೆ ಕೋಡಿ ನೀರು ಕೊಲ್ಲಿ ನದಿಗೆ ನುಗ್ಗಿದ್ದರಿಂದ ನದಿ ಪಾತ್ರದ ಪಟ್ಟಣದಲ್ಲಿ ಬರುವ ಎಲ್ಐಸಿ ಬಡಾವಣೆ ಹಾಗೂ ವಿನಾಯಕ ಲೇಔಟ್ಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಅಲ್ಲದೆ, ಪೂರ್ಣಪ್ರಜ್ಞ ಶಾಲೆ, ಸೋಮೇಶ್ವರ ಸಮುದಾಯ ಭವನ, ಕಲ್ಯಾಣ ಮಂಟಪ, ಮಹದೇಶ್ವರ ಅಕ್ಕಿ ಗಿರಣಿಗೆ ನೀರು ನುಗ್ಗಿದೆ. ಪರಿಣಾಮ ಗಿರಣಿಯಲ್ಲಿ ದಾಸ್ತಾನು ಮಾಡಲಾಗಿದ್ದ ಭತ್ತ ಮತ್ತು ಅಕ್ಕಿ ನೀರಿನಿಂದ ಆವೃತವಾಗಿ ಲಕ್ಷಾಂತರ ರೂ. ನಷ್ಟವುಂಟಾಗಿದೆ ಅಲ್ಲದೆ, ಮನೆಯಲ್ಲಿದ್ದ ಹಲವು ದಿನಬಳಕೆ ವಸ್ತುಗಳು ಹಾನಿಗೊಳಗಾಗಿವೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಕೊಲ್ಲಿ ಸೇತುವೆ ಸೇರಿದಂತೆ ಸಂಪರ್ಕ ರಸ್ತೆಗಳಲ್ಲಿ ನೀರಿನ ಪ್ರವಾಹದಿಂದಾಗಿ ಹೆದ್ದಾರಿ ವಾಹನಗಳ ಸಂಚಾರಿ ಸಂಪೂರ್ಣವಾಗಿ ನಿಷೇದಿಸಲಾಗಿತ್ತು. ಬೆಂಗಳೂರಿನಿಂದ ಮೈಸೂರಿಗೆ ಬರುವ ವಾಹನಗಳನ್ನು ಪರ್ಯಾಯ ವ್ಯವಸ್ಥೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಬೆಂಗಳೂರಿನಿಂದ ಬರುವ ವಾಹನಗಳನ್ನು ರುದ್ರಾಕ್ಷಿಪುರ, ವೈದ್ಯನಾಥಪುರ, ಮದ್ದೂರು, ಕೆ.ಎಂ. ದೊಡ್ಡಿ, ಮಂಡ್ಯ ಮಾರ್ಗವಾಗಿ ಮೈಸೂರಿಗೆ ತೆರಳುವ ವ್ಯವಸ್ಥೆ ಮಾಡಲಾಗಿದೆ. ಮೈಸೂರಿನಿಂದ ಬರುವ ವಾಹನಗಳನ್ನು ಶ್ರೀರಂಗಪಟ್ಟಣ, ಮಂಡ್ಯ, ಮಳವಳ್ಳಿ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ.
ಕೊಲ್ಲಿ ಸರ್ಕಲ್ನ ಹೆದ್ದಾರಿ ಸೇತುವೆ ಮೇಲೆ ಹರಿಯುತ್ತಿರುವ ನೀರನ್ನು ತೆರವು ಮಾಡಲು ಪುರಸಭಾಧ್ಯಕ್ಷ ಸುರೇಶ್ಕುಮಾರ್ ನೇತೃತ್ವದಲ್ಲಿ ಜನಪ್ರತಿನಿಧಿಗಳು ಹಾಗೂ ಪುರಸಭಾ ಸಿಬ್ಬಂದಿಗಳು ಎರಡು ಜೆಸಿಬಿಗಳ ಸಹಾಯದಿಂದ ಸೇತುವೆ ಮತ್ತು ಇಕ್ಕಲೆಗಳಲ್ಲಿ ಬರುವ ರಸ್ತೆ ವಿಭಜಕಗಳನ್ನು ಒಡೆದು ಪ್ರವಾಹದ ನೀರನ್ನು ಶಿಂಷಾ ನದಿಗೆ ಹರಿದುಹೋಗುವಂತೆ ವ್ಯವಸ್ಥೆ ಮಾಡಿದ್ದರಾದರೂ, ನೀರಿನ ಪ್ರವಾಹ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಸ್ಥಳದಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದೆ.

ಮಂಡ್ಯ ತಾಲೂಕು ಕೀಲಾರ ಕೆರೆಯು ಅಪಾಯದ ಹಂಚಿಗೆ ತಲುಪಿದ ಹಿನ್ನೆಲೆಯಲ್ಲಿ ಕಾವೇರಿ ನೀರಾವರಿ ನೀಗಮದ ಅಧಿಕಾರಿಗಳು ಮದ್ದೂರು ಕೆರೆ ಕೋಡಿಯನ್ನು ಮತ್ತಷ್ಟು ಅಗಲಗೊಳಿಸಿ ಹರಿದುಬರುವ ನೀರಿನ ಪ್ರಮಾಣವನ್ನು ಹೊರ ಹಾಕುವ ಮೂಲಕ ಕೆರೆಯಲ್ಲಿ ಸರಾಗವಾಗಿ ನೀರು ಹರಿಯುವಂತೆ ಕ್ರಮ ಕೈಗೊಂಡಿದ್ದಾರೆ.
ಕಾವೇರಿ ನೀರಾವರಿ ನಿಗಮದ ಎಇಇ ನಾಗರಾಜು, ಎಇ ನಾಗರಾಜು, ಸಹಾಯಕ ಇಂಜಿನಿಯರ್ ತಾರಾ ಹಾಗೂ ಸಿಬ್ಬಂದಿಗಳು ಕೆರೆಯ ಬಳಿ ಮೊಕ್ಕಾಂ ಹೂಡಿದ್ದು, ಅಪಾಯ ಸ್ಥಿತಿ ಎದುರಾದಲ್ಲಿ ಜೆಸಿಬಿ ಯಂತ್ರಗಳ ಸಹಾಯದಿಂದ ಕೋಡಿಯನ್ನು ಅಗಲಗೊಳಿಸಿ ಮತ್ತಷ್ಟು ನೀರು ಶಿಂಷಾ ನದಿಗೆ ಹರಿದುಹೋಗುವಂತೆ ಮಾಡಲು ನಿರ್ಧಾರ ಮಾಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications