ರಕ್ಕಸ ಮಳೆಗೆ ಸಕ್ಕರೆ ಜಿಲ್ಲೆ ತತ್ತರ; ತುಂಬಿ ಹರಿದ ಕೆರೆ-ಕಟ್ಟೆ, ಹತ್ತಾರು ಎಕರೆ ಜಲಾವೃತ
ಮಂಡ್ಯ, ಅಕ್ಟೋಬರ್ 14 : ಕಳೆದ ಎರಡು ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿದ ಮಹಾಮಳೆಗೆ ಮಂಡ್ಯ ಜಿಲ್ಲೆಯ ಜನರು ತತ್ತರಿಸಿಹೋಗಿದ್ದಾರೆ. ಕೆರೆ-ಕಟ್ಟೆಗಳು ತುಂಬಿ ಕೋಡಿ ಹರಿದಿದ್ದರೆ, ಹಳ್ಳಗಳಲ್ಲಿ ನೀರು ಉಕ್ಕಿ ಹರಿಯುತ್ತಿದೆ. ನೂರಾರು ಎಕರೆ ಜಮೀನುಗಳು ಜಲಾವೃತಗೊಂಡು ಅಪಾರ ಹಾನಿ ಸಂಭವಿಸಿದೆ.
ತಾಲೂಕಿನ ಬೂದನೂರು ಕೆರೆ ಕೋಡಿ ಮತ್ತೆ ಒಡೆದಿದೆ. ಇದರಿಂದ ಅಪಾರ ಪ್ರಮಾಣದ ನೀರು ಅಕ್ಕ-ಪಕ್ಕದ ಜಮೀನುಗಳಿಗೆ ನುಗ್ಗಿದೆ. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡ ಪರಿಣಾಮ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಮಧ್ಯಾಹ್ನದವರೆಗೆ ಬಂದ್ ಆಗಿತ್ತು.
ಕಳೆದ ಆಗಸ್ಟ್ 1ರಂದು ಸುರಿದ ಧಾರಾಕಾರ ಮಳೆಗೆ ಬೂದನೂರು ಕೆರೆ ಒಡೆದು ಹೆದ್ದಾರಿ ಸೇರಿದಂತೆ ಅಕ್ಕ-ಪಕ್ಕದ ಜಮೀನುಗಳಿಗೂ ನೀರು ನುಗ್ಗಿತ್ತು. ನಂತರದಲ್ಲಿ ಕೋಡಿ ಒಡೆದ ಜಾಗಕ್ಕೆ ಮರಳಿನ ಮೂಟೆಗಳನ್ನು ಜೋಡಿಸಿ ಭದ್ರತೆ ಒದಗಿಸಲಾಗಿತ್ತು. ಇದೀಗ ಮತ್ತೊಂದೆಡೆ ಕೆರೆಯ ಕೋಡಿ ಒಡೆದು ಅನಾಹುತ ಸಂಭವಿಸಿದೆ. ಕೆರೆಯ ಏರಿ ಶಿಥಿಲವಾಗಿರುವುದು ಹಾಗೂ ಕೋಡಿ ಹರಿದ ನೀರು ಸರಾಗವಾಗಿ ಹರಿಯುವುದಕ್ಕೆ ವ್ಯವಸ್ಥೆಗಳಿಲ್ಲದಿರುವುದೇ ಪದೇ ಪದೇ ಏರಿ ಒಡೆಯಲು ಕಾರಣ ಎನ್ನುವುದು ಗ್ರಾಮಸ್ಥರು ಹೇಳುವ ಮಾತಾಗಿದೆ. ಕೋಡಿ ಹರಿದ ನೀರು ಜಮೀನುಗಳಿಗೆ ನುಗ್ಗಿ ಸುಮಾರು 25 ಎಕರೆಯಷ್ಟು ಭತ್ತದ ಸಲು ನಾಶವಾಗಿದೆ.

ಕೆಲ ಸಮಯ ಮೈಸೂರು-ಬೆಂಗಳೂರು ಹೆದ್ದಾರಿ ಸಂಚಾರ ಬಂದ್
ನೀರು ಹೆದ್ದಾರಿಯಲ್ಲಿ ಹರಿಯುತ್ತಿದ್ದರಿಂದ ಮೈಸೂರು-ಬೆಂಗಳೂರು ಹೆದ್ದಾರಿ ಸಂಚಾರವನ್ನು ಮಧ್ಯಾಹ್ನದವರೆಗೆ ಸ್ಥಗಿತಗೊಳಿಸಲಾಗಿತ್ತು. ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳನ್ನು ಸಕ್ಕರೆ ವೃತ್ತದಲ್ಲೇ ಮಾರ್ಗ ಬದಲಿಸಿ ಬೈಪಾಸ್ ರಸ್ತೆಯ ಕೆಳಭಾಗದಲ್ಲಿರುವ ಸರ್ವೀಸ್ ರಸ್ತೆಯ ಮೂಲಕ ಉಮ್ಮಡಹಳ್ಳಿ-ಕೀಲಾರ-ಈಚಗೆರೆ-ಬೆಸಗರಹಳ್ಳಿ ಮಾರ್ಗವಾಗಿ ಮದ್ದೂರಿಗೆ ಕಳುಹಿಸಲಾಗುತ್ತಿದೆ. ಅದೇ ರೀತಿ ಬೆಂಗಳೂರಿನಿಂದ ಮೈಸೂರಿಗೆ ಬರುವ ವಾಹನಗಳನ್ನು ಮಾತ್ರ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಸೇತುವೆ ಕುಸಿದು ಗ್ರಾಮೀಣ ಭಾಗದಲ್ಲೂ ಹಲವೆಡೆ ರಸ್ತೆ ಬಂದ್
ಶುಕ್ರವಾರ ರಾತ್ರಿ ಸುರಿದ ಮಳೆಯಿಂದ ನಗರದಿಂದ ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ನೀರು ಹರಿದಿದ್ದರಿಂದ ಹಾಗೂ ಸೇತುವೆ ರಸ್ತೆ ಕುಸಿದಿದ್ದರಿಂದ ಸಂಪರ್ಕ ಕಡಿತಗೊಂಡಿತ್ತು. ಮರಕಾಡುದೊಡ್ಡಿ ಮೂಲಕ ಗುತ್ತಲು ಸಂಪರ್ಕಿಸುವ ರಸ್ತೆ, ತಾವರೆಗೆರೆಯಿಂದ ಚೀರನಹಳ್ಳಿ-ಹಳುವಾಡಿ-ತಗ್ಗಹಳ್ಳಿ ಹೋಗುವ ರಸ್ತೆಯಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದರಿಂದ ರಸ್ತೆ ಎಲ್ಲಿದೆ ಎನ್ನುವುದೇ ಕಾಣುತ್ತಿರಲಿಲ್ಲ. ಹೀಗಾಗಿ ಈ ಗ್ರಾಮಗಳಿಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ನಗರದ ಗುತ್ತಲು ರಸ್ತೆ ಮಾರ್ಗವಾಗಿ ಭೂತನಹೊಸೂರಿಗೆ ತೆರಳುವ ಮಾರ್ಗದಲ್ಲಿರುವ ಅಬೀಬ್ ಖಂಡಸಾರಿ ಫ್ಯಾಕ್ಟರಿ ಬಳಿ ಭಾರೀ ಪ್ರಮಾಣದ ನೀರು ಹರಿದು ರಸ್ತೆ ಸೇತುವೆಯನ್ನೇ ಅರ್ಧಭಾಗ ಕೊರೆದಿತ್ತು. ಇದರಿಂದ ಕೆ.ಎಂ.ದೊಡ್ಡಿ-ಮಳವಳ್ಳಿ ರಸ್ತೆ ಸಂಪರ್ಕವನ್ನು ಬಂದ್ ಮಾಡಲಾಗಿತ್ತು.

ಭತ್ತ,ಕಬ್ಬಿನ ಗದ್ದೆ, ಬಾಳೆತೋಟಗಳಿಗೂ ನೀರು ನುಗ್ಗಿ ಅಪಾರ ಹಾನಿ
ಕಾರಸವಾಡಿ, ಬೇವಿನಹಳ್ಳಿ, ಕೊತ್ತತ್ತಿ, ಸಂತೆಕಸಲಗೆರೆ ಭಾಗದಲ್ಲಿ ಬಿದ್ದ ಮಳೆಯಿಂದ ಕೆರೆಗಳು ಕೋಡಿ ಬಿದ್ದು ಕಾಲುವೆಗಳ ಮೂಲಕ ಅಪಾರ ಪ್ರಮಾಣದ ನೀರು ಹರಿದುಬಂದಿದ್ದರಿಂದ ಸೇತುವೆ ಮಟ್ಟಕ್ಕೆ ನೀರು ಹರಿಯುತ್ತಿತ್ತು. ಎರಡೂ ಭಾಗದಲ್ಲೂ ರಸ್ತೆ ನೀರಿನ ರಭಸಕ್ಕೆ ಕೊರಕಲು ಉಂಟಾಗಿ ಕುಸಿಯುವ ಹಂತದಲ್ಲಿದೆ. ಈ ಸೇತುವೆ ರಸ್ತೆಯ ಅಕ್ಕ-ಪಕ್ಕದ ಜಮೀನುಗಳು, ಬತ್ತದ ಗದ್ದೆ, ಕಬ್ಬಿನ ಗದ್ದೆ, ಬಾಳೆತೋಟಗಳಿಗೂ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ. ಸುಮಾರು ಸುಮಾರು 50 ಎಕರೆಗೂ ಹೆಚ್ಚು ಜಮೀನು ಜಲಾವೃತವಾಗಿದೆ. ಕೆಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿ ಹಾನಿ ಸಂಭವಿಸಿದೆ. ರಾತ್ರಿ ಸುರಿದ ಬಾರೀ ಮಳೆಗೆ ಗುತ್ತಲು ಕೆರೆ ಕೋಡಿ ಬಿದ್ದ ಪರಿಣಾಮ ಬಡಾವಣೆಯ 4 ಮನೆಗಳ ಗೋಡೆ ಕುಸಿತವಾಗಿದೆ.

ಮನೆಗೆ ನುಗ್ಗಿದ ಒಳಚರಂಡಿ ನೀರು
ರಾತ್ರಿಯಿಡೀ ಸುರಿದ ಮಳೆಯಿಂದ ಹಾಲಹಳ್ಳಿ ಕೆರೆ, ಮುಸ್ಲಿಂ ಕಾಲೋನಿ ನಡುವೆ ಬರುವ ರಾಜಕಾಲುವೆ ತುಂಬಿ ಒಳಚರಂಡಿ ಪೈಪುಗಳ ಮೂಲಕ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿ ಸುಮಾರು 12 ರಿಂದ 1.30ರ ಸಮಯದಲ್ಲಿ ಮನೆಗಳಿಗೆ ಚರಂಡಿ ನೀರು ಹಾಗೂ ಮಳೆ ನೀರು ನುಗ್ಗಿದ್ದು ರಾತ್ರಿ ಮನೆಯಲ್ಲಿ ಮಕ್ಕಳು ಹಾಗೂ ಮಹಿಳೆಯರು ನಿದ್ದೆಗೆಟ್ಟು ಜೀವಭಯದಲ್ಲಿ ಬೆಳಗಿನವರೆಗೆ ಕಾಲ ಕಳೆದಿದ್ದಾರೆ. ರಾತ್ರಿ ಏಕಾಏಕಿ ಪೈಪುಗಳ ಮುಖಾಂತರ ನೀರು ನುಗ್ಗಿದ್ದರಿಂದ ಮನೆಯಲ್ಲಿರುವ ವಸ್ತುಗಳನ್ನು ರಕ್ಷಿಸಿಡಲು ಸಾಧ್ಯವಾಗಿಲ್ಲ. ಅಡುಗೆ ಸಾಮಗ್ರಿಗಳು. ಪಾತ್ರೆಗಳು, ಬಟ್ಟೆಗಳು ಎಲ್ಲವೂ ನೀರಿನಲ್ಲಿ ತೇಲುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications