ನಾಗಮಂಗಲದಲ್ಲಿ ಎರಡು ಡಯಾಗ್ನೋಸ್ಟಿಕ್ ಸೆಂಟರ್ಗೆ ಬೀಗ
ಮಂಡ್ಯ, ಡಿಸೆಂಬರ್ 20: ಸ್ಕ್ಯಾನಿಂಗ್ ಯಂತ್ರದಲ್ಲಿನ ಮಾಹಿತಿಗಳನ್ನು ಅಳಿಸಿರುವುದು ಕಂಡು ಬಂದ ಹಿನ್ನಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ನ ಸ್ಕ್ಯಾನಿಂಗ್ ಕೊಠಡಿಗಳನ್ನು ಪಾಂಡವಪುರ ಉಪವಿಭಾಗಾಧಿಕಾರಿ ಎಲ್.ನಂದೀಶ್ ನೇತೃತ್ವದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೀಲ್ ಮಾಡಿದ್ದಾರೆ.
ಪಟ್ಟಣದ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ಗೆ ಮಂಗಳವಾರ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಸ್ಕ್ಯಾನಿಂಗ್ ದಾಖಲಾತಿ ಪುಸ್ತಕ ಮತ್ತು ಸ್ಕ್ಯಾನಿಂಗ್ ಯಂತ್ರದಲ್ಲಿರುವ ಮಾಹಿತಿಗಳು ಹೊಂದಾಣಿಕೆಯಾಗದಿರುವುದು ಕಂಡುಬಂದಿದೆ.

ಅಲ್ಲದೆ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ 2 ವರ್ಷಗಳ ಸ್ಕ್ಯಾನಿಂಗ್ ಮಾಹಿತಿಯನ್ನು ಅಳಿಸಿರುವುದು ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ 3ತಿಂಗಳ ಸ್ಕ್ಯಾನಿಂಗ್ ಮಾಹಿತಿಯನ್ನು ಅಳಿಸಿರುವುದು ಬೆಳಕಿಗೆ ಬಂದಿದೆ.
ಇದರಿಂದ ಅನುಮಾನಗೊಂಡು ಸೂಕ್ತ ದಾಖಲಾತಿ ಹಾಜರುಪಡಿಸುವಂತೆ ಎರಡೂ ಡಯಾಗ್ನೋಸ್ಟಿಕ್ ಸೆಂಟರ್ಗಳ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತಿಳಿಸಿದರಾದರೂ ಅಗತ್ಯ ದಾಖಲಾತಿ ಒದಗಿಸಲಿಲ್ಲ. ಕಾನೂನು ಉಲ್ಲಂಘಸಿರುವ ಆರೋಪದಡಿಯಲ್ಲಿ ಎರಡೂ ಸ್ಕ್ಯಾನಿಂಗ್ ಕೊಠಡಿಗಳನ್ನು ಸೀಲ್ ಮಾಡಿ ನೋಟಿಸ್ ಜಾರಿ ಮಾಡಲಾಗಿದೆ. ನೋಟೀಸ್ಗೆ ಅವರು ನೀಡುವ ಉತ್ತರದ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ವಹಿಸಲಾಗುವುದೆಂದು ಉಪವಿಭಾಗಾಧಿಕಾರಿ ಎಲ್. ನಂದೀಶ್ ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ, ಹಿರಿಯ ಆರೋಗ್ಯ ಪರಿವೀಕ್ಷಕರಾದ ಸಿದ್ದಲಿಂಗಪ್ಪ ಮತ್ತು ಚಿಕ್ಕಸ್ವಾಮಿ ಇದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications