ನಾಗಮಂಗಲದಲ್ಲಿ ಎರಡು ಡಯಾಗ್ನೋಸ್ಟಿಕ್ ಸೆಂಟರ್ಗೆ ಬೀಗ
ಮಂಡ್ಯ, ಡಿಸೆಂಬರ್ 20: ಸ್ಕ್ಯಾನಿಂಗ್ ಯಂತ್ರದಲ್ಲಿನ ಮಾಹಿತಿಗಳನ್ನು ಅಳಿಸಿರುವುದು ಕಂಡು ಬಂದ ಹಿನ್ನಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ನ ಸ್ಕ್ಯಾನಿಂಗ್ ಕೊಠಡಿಗಳನ್ನು ಪಾಂಡವಪುರ ಉಪವಿಭಾಗಾಧಿಕಾರಿ ಎಲ್.ನಂದೀಶ್ ನೇತೃತ್ವದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸೀಲ್ ಮಾಡಿದ್ದಾರೆ.
ಪಟ್ಟಣದ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ಗೆ ಮಂಗಳವಾರ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಸ್ಕ್ಯಾನಿಂಗ್ ದಾಖಲಾತಿ ಪುಸ್ತಕ ಮತ್ತು ಸ್ಕ್ಯಾನಿಂಗ್ ಯಂತ್ರದಲ್ಲಿರುವ ಮಾಹಿತಿಗಳು ಹೊಂದಾಣಿಕೆಯಾಗದಿರುವುದು ಕಂಡುಬಂದಿದೆ.

ಅಲ್ಲದೆ ಲಕ್ಷ್ಮಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ 2 ವರ್ಷಗಳ ಸ್ಕ್ಯಾನಿಂಗ್ ಮಾಹಿತಿಯನ್ನು ಅಳಿಸಿರುವುದು ಮತ್ತು ಕಾವೇರಿ ಡಯಾಗ್ನೋಸ್ಟಿಕ್ ಸೆಂಟರ್ನಲ್ಲಿ 3ತಿಂಗಳ ಸ್ಕ್ಯಾನಿಂಗ್ ಮಾಹಿತಿಯನ್ನು ಅಳಿಸಿರುವುದು ಬೆಳಕಿಗೆ ಬಂದಿದೆ.
ಇದರಿಂದ ಅನುಮಾನಗೊಂಡು ಸೂಕ್ತ ದಾಖಲಾತಿ ಹಾಜರುಪಡಿಸುವಂತೆ ಎರಡೂ ಡಯಾಗ್ನೋಸ್ಟಿಕ್ ಸೆಂಟರ್ಗಳ ವೈದ್ಯರು ಮತ್ತು ಸಿಬ್ಬಂದಿಗಳಿಗೆ ತಿಳಿಸಿದರಾದರೂ ಅಗತ್ಯ ದಾಖಲಾತಿ ಒದಗಿಸಲಿಲ್ಲ. ಕಾನೂನು ಉಲ್ಲಂಘಸಿರುವ ಆರೋಪದಡಿಯಲ್ಲಿ ಎರಡೂ ಸ್ಕ್ಯಾನಿಂಗ್ ಕೊಠಡಿಗಳನ್ನು ಸೀಲ್ ಮಾಡಿ ನೋಟಿಸ್ ಜಾರಿ ಮಾಡಲಾಗಿದೆ. ನೋಟೀಸ್ಗೆ ಅವರು ನೀಡುವ ಉತ್ತರದ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ವಹಿಸಲಾಗುವುದೆಂದು ಉಪವಿಭಾಗಾಧಿಕಾರಿ ಎಲ್. ನಂದೀಶ್ ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ, ತಾಲೂಕು ಆರೋಗ್ಯಾಧಿಕಾರಿ ಡಾ.ಪ್ರಸನ್ನ, ಹಿರಿಯ ಆರೋಗ್ಯ ಪರಿವೀಕ್ಷಕರಾದ ಸಿದ್ದಲಿಂಗಪ್ಪ ಮತ್ತು ಚಿಕ್ಕಸ್ವಾಮಿ ಇದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications