Get Updates
Get notified of breaking news, exclusive insights, and must-see stories!

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ರಮ್ಯಾ ಸ್ಪರ್ಧೆ ಬಯಸಿದರೆ ಮುಕ್ತ ಅವಕಾಶವಿದೆ- ಕಾಂಗ್ರೆಸ್‌ ಶಾಸಕ

ಮಂಡ್ಯ, ಅಕ್ಟೋಬರ್‌ 12: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ನಟಿ ರಮ್ಯಾ ಸ್ಪರ್ಧೆ ಬಯಸಿದರೆ ನನ್ನ ಮುಕ್ತ ಆಹ್ವಾನವಿದೆ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ಕೇವಲ 6 ತಿಂಗಳ ಅವರಿಗೆ ಸಂಸದೆಯಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಅವರು ಬಂದರೂ ನಮಗೆ ತೊಂದರೆ ಇಲ್ಲ. ರಮ್ಯಾ ಪರವಾಗಿ ಕೆಲಸ ಮಾಡುವುದಕ್ಕೆ ತಯಾರಿದ್ದೇವೆ ಎಂದು ತಿಳಿಸಿದರು.

ಚುನಾವಣೆ ಸ್ಪರ್ಧೆಯಲ್ಲಿ ಸಾಕಷ್ಟು ಮಂದಿ ಇದ್ದಾರೆ. ಇದರಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ, ಎನ್.ಚಲುವರಾಯಸ್ವಾಮಿ ಪತ್ನಿ ಧನಲಕ್ಷ್ಮೀ ಅಥವಾ ಸಚಿವ ಎನ್.ಚಲುವರಾಯಸ್ವಾಮಿ ಈ ಮೂವರಲ್ಲಿ ಯಾರಿಗಾದರೂ ಟಿಕೆಟ್ ನೀಡಲಿ. ಕಾಂಗ್ರೆಸ್ ಗೆಲುವು ಸುಲಭವಾಗುತ್ತದೆ ಎಂದು ಹೇಳಿದರು.

Lok Sabha Election: MLA P. Ravikumar Support Ramya Contest From Mandya Constituency

ಜಿಲ್ಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆಗಳಿರುವುದರಿಂದ ಈ ಮೂವರಲ್ಲಿ ಒಬ್ಬರಿಗೆ ಟಿಕೆಟ್ ನೀಡಬೇಕೆನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಚುನಾವಣೆ ಪೂರ್ವಭಾವಿ ಸಭೆಯಲ್ಲೂ ನನ್ನ ನಿರ್ಧಾರ ತಿಳಿಸಿದ್ದೇನೆ ಎಂದು ತಿಳಿಸಿದರು.

ಮೈತ್ರಿಕೂಟಕ್ಕಿಂತ ಒಗ್ಗಟ್ಟು ಮೂಡಿಸುವುದು ಮುಖ್ಯ - ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ್‌

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಯಾರಾಗಬೇಕು ಎನ್ನುವುದಕ್ಕಿಂತ ಮುಖ್ಯವಾಗಿ ಒಗ್ಗಟ್ಟು ಮೂಡಿಸುವುದು ಮುಖ್ಯವಾಗಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥನಾರಾಯಣ ಹೇಳಿದರು.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರಾ, ಜೆಡಿಎಸ್ ಅಭ್ಯರ್ಥಿ ಸ್ಪರ್ಧೆ ಮಾಡುವರೋ ಎನ್ನುವುದು ನಿರ್ಧಾರವಾಗಬೇಕಿದೆ. ಆನಂತರ ಉಭಯಪಕ್ಷಗಳ ಸ್ಥಳೀಯ ಮುಖಂಡರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಗ್ಗಟ್ಟು ಪ್ರದರ್ಶಿಸಬೇಕು. ಆನಂತರದಲ್ಲಿ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಬೇಕಿದೆ ಎಂದು ತಿಳಿಸಿದರು.

Lok Sabha Election: MLA P. Ravikumar Support Ramya Contest From Mandya Constituency

ಮಂಡ್ಯ ಕ್ಷೇತ್ರದಿಂದ ಸುಮಲತಾ ಅವರಿಗೆ ಟಿಕೆಟ್ ನೀಡುವಂತೆ ಕೆ.ಸಿ.ನಾರಾಯಣಗೌಡ ಒತ್ತಾಯಿಸಿರುವ ಬಗ್ಗೆ ಮಾತನಾಡಿದ ಅವರು,

ನಾರಾಯಣಗೌಡರು ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಪಕ್ಷ ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಪಕ್ಷ ತೀರ್ಮಾನ ಮಾಡಲಿದೆ ಎಂದರು.

ಅವರ ರಾಜಕೀಯ ಭವಿಷ್ಯಕ್ಕೆ ಧಕ್ಕೆ ಆಗುವ ಪರಿಸ್ಥಿತಿ ಎದುರಾದಾಗ ಸಹಜವಾಗಿಯೇ ಎಲ್ಲರಲ್ಲೂ ಬೇಸರ ಆಗುತ್ತದೆ. ಇದು ರಾಷ್ಟ್ರಮಟ್ಟದಲ್ಲಿ ವರಿಷ್ಠರು ಮಾಡಿರುವ ನಿರ್ಧಾರ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ವರಿಷ್ಠರ ನಿರ್ಧಾರವನ್ನು ಗಮನದಲ್ಲಿಟ್ಟುಕೊಂಡು ನಾವೂ ಸಹಕರಿಸಬೇಕು. ಏನೇ ಸಮಸ್ಯೆಗಳು ಎದುರಾದರೂ ಹೇಗೆ ಬಗೆಹರಿಸಿಕೊಳ್ಳಬೇಕೆಂಬ ಬಗ್ಗೆ ಆಲೋಚಿಸಬೇಕು ಎಂದು ಹೇಳಿದರು.

ಕೆ.ಸಿ.ನಾರಾಯಣಗೌಡರು ಹಿರಿಯರು. ನಮ್ಮ ಪಕ್ಷಕ್ಕೆ ಶಕ್ತಿ ತುಂಬಿದವರು. ಅವರಿಗೆ ಏನೇ ಸಮಸ್ಯೆಗಳಿದ್ದರೂ ಒಟ್ಟಿಗೆ ಕುಳಿತು ಚರ್ಚಿಸಿ ಪರಿಹಾರ ಕಂಡುಕೊಳ್ಳುತ್ತೇವೆ. ಅವರನ್ನು ನಾವು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಮೈತ್ರಿಯಿಂದ ಅವರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+