ಮಂಡ್ಯ: ನಾಮಪತ್ರ ಹಿಂಪಡೆಯದ ಪಕ್ಷೇತರ ಅಭ್ಯರ್ಥಿ ಸುಮಲತಾ
ಮಂಡ್ಯ, ಮಾರ್ಚ್ 30: ಮಂಡ್ಯ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಸುಮಲತಾ ಹೆಸರಿನ ನಾಲ್ವರು ಅಭ್ಯರ್ಥಿಗಳು ಅಂತಿಮವಾಗಿ ಸ್ಪರ್ಧೆಗೆ ಉಳಿದುಕೊಳ್ಳುವುದು ನಿಶ್ಚಿತವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಪ್ರಬಲ ಪೈಪೋಟಿ ನೀಡುತ್ತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರಲ್ಲದೆ ಸುಮಲತಾ ಹೆಸರಿನ ಇನ್ನೂ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.
ಇದು ಕುತೂಹಲ ಮತ್ತು ವಿವಾದಕ್ಕೆ ಕಾರಣವಾಗಿತ್ತು. ಸುಮಲತಾ ಅಂಬರೀಷ್ ಅವರಿಗೆ ಬರಬೇಕಾದ ಮತಗಳು ಹಂಚಿಹೋಗಲಿ ಎಂಬ ಕಾರಣಕ್ಕೆ ಈ ರೀತಿ ಸುಮಲತಾ ಹೆಸರಿನವರಿಂದ ನಾಮಪತ್ರ ಸಲ್ಲಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ಇದರೆ ಬೆನ್ನಲ್ಲೇ, ಅಭ್ಯರ್ಥಿಗಳಲ್ಲಿ ಒಬ್ಬರಾದ ಗೊರವಿ ಗ್ರಾಮದ ಸುಮಲತಾ ಮಂಜೇಗೌಡ ಎಂಬುವವರು ನಾಮಪತ್ರ ಹಿಂದಕ್ಕೆ ಪಡೆದುಕೊಳ್ಳುವುದಾಗಿ ತಿಳಿಸಿದ್ದರು.
'ಯಾರದ್ದೋ ಮಾತು ಕೇಳಿ ನನ್ನ ಪತ್ನಿ ನಾಮಪತ್ರ ಸಲ್ಲಿಸಿದ್ದಾಳೆ. ನಾನು ಅಪ್ಪಟ ದರ್ಶನ್ ಅಭಿಮಾನಿ. ನನ್ನ ಪತ್ನಿಯೊಂದಿಗೆ ತೆರಳಿ ನಾಮಪತ್ರ ಹಿಂದಕ್ಕೆ ಪಡೆಯುತ್ತೇನೆ. ಸುಮಲತಾ ಅವರನ್ನು ಬೆಂಬಲಿಸುತ್ತೇನೆ' ಎಂದು ಮಂಜೇಗೌಡ ಹೇಳಿದ್ದರು.
ಆದರೆ, ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದ್ದ ಶುಕ್ರವಾರ, ಅವರು ನಾಮಪತ್ರ ಹಿಂದಕ್ಕೆ ಪಡೆದುಕೊಂಡಿಲ್ಲ. ಇದರಿಂದ ಕಣದಲ್ಲಿ ನಾಲ್ವರು ಸುಮಲತಾ ಉಳಿದುಕೊಳ್ಳುವಂತಾಗಿದೆ.
ಅಭ್ಯರ್ಥಿಗಳ ಪಟ್ಟಿಯಲ್ಲಿ ಸುಮಲತಾ ಅಂಬರೀಷ್ ಅವರ ಹೆಸರು ಎ. ಸುಮಲತಾ ಎಂದಿದೆ. ಅವರಿಗೆ ಕಹಳೆ ಓದುವ ವ್ಯಕ್ತಿಯ ಚಿತ್ರದ ಚಿಹ್ನೆ ನೀಡಲಾಗಿದೆ. ಎಂ. ಸುಮಲತಾ ಹೆಸರಿನ ಸುಮಲತಾ ಮಂಜೇಗೌಡ ಅವರಿಗೆ ಬೇಬಿ ವಾಕರ್ ಚಿಹ್ನೆ ನೀಡಲಾಗಿದೆ. ಇನ್ನಿಬ್ಬರು ಸುಮಲತಾ ತಳ್ಳುವ ಗಾಡಿ ಮತ್ತು ಬ್ಯಾಟ್ ಚಿಹ್ನೆಯನ್ನು ಪಡೆದುಕೊಂಡಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications