ನಿವೇಶನ ಖಾತೆ ಮಾಡಿಕೊಡಲು 40 ಸಾವಿರ ಲಂಚಕ್ಕೆ ಬೇಡಿಕೆ: ಅಧಿಕಾರಿ ಲೋಕಾಯುಕ್ತ ಬಲೆಗೆ
ಮಂಡ್ಯ, ಮೇ 24: ನಿವೇಶನದ ಖಾತೆ ಮಾಡಿಕೊಡುವುದಕ್ಕೆ ಸಂಬಂಧಿಸಿದಂತೆ ಲಂಚದ ಬೇಡಿಕೆ ಇಟ್ಟು ಕಚೇರಿಯಲ್ಲಿ ಹಣ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮಂಡ್ಯ ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ (ಗ್ರೇಡ್-1) ದಯಾನಂದ (54) ಎಂಬಾತನೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ.

ಘಟನೆಯ ವಿವರ
ಮಂಡ್ಯದ ಶ್ರೀರಾಮ ಬಡಾವಣೆಯಲ್ಲಿ ಮಂಜುನಾಥ್ ಎಂಬುವರು 30*40 ಅಳತೆಯ ನಿವೇಶನ ಖರೀದಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ತನ್ನ ಪತ್ನಿ ಹಾಗೂ ಅತ್ತೆಯವರ ಹೆಸರಿಗೆ ಜಂಟಿ ಖಾತೆ ಮಾಡಿಸಿಕೊಡುವಂತೆ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು.
ಖಾತೆ ಬದಲಾವಣೆಗೆ ಆರಂಭದಲ್ಲಿ ಕಾರ್ಯದರ್ಶಿ ದಯಾನಂದ 40 ಸಾವಿರ ರೂ.ಗಳಿಗೆ ಬೇಡಿಕೆ ಇಟ್ಟಿದ್ದರು. ಬಳಿಕ ಇಬ್ಬರ ನಡುವೆ ಒಪ್ಪಂದ ನಡೆದು 35 ಸಾವಿರ ರೂ.ಗಳಿಗೆ ಒಪ್ಪಿಕೊಂಡಿದ್ದರು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ದೂರುದಾರ ಮಂಜುನಾಥ್ ಅವರು 5 ಸಾವಿರ ರೂ.ಗಳೊಂದಿಗೆ ಗ್ರಾಮ ಪಂಚಾಯಿತಿ ಕಚೇರಿಗೆ ಆಗಮಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಲೋಕಾಯುಕ್ತ ಪೊಲೀಸರು ಆರೋಪಿ ದಯಾನಂದ 5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಧ್ಯಾಹ್ನ 12.30ರ ಸಮಯದಲ್ಲಿ ದಾಳಿ ನಡೆಸಿ ದಯಾನಂದನನ್ನು ವಶಕ್ಕೆ ಪಡೆದರು.

ಲೋಕಾಯುಕ್ತ ದಾಳಿ ವೇಳೆ ಗ್ರಾಮಸ್ಥರ ಗದ್ದಲ
ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಕಾರ್ಯದರ್ಶಿ ದಯಾನಂದ್ ಅವರನ್ನು ವಶಕ್ಕೆ ಪಡೆಯುತ್ತಿದ್ದ ಸುದ್ದಿ ತಿಳಿದ ಕೆಲ ಗ್ರಾಮಸ್ಥರು ಪಂಚಾಯಿತಿ ಕಚೇರಿಗೆ ಆಗಮಿಸಿ ಗದ್ದಲ ಸೃಷ್ಠಿಸಿದ್ದರು.
ದೂರುದಾರ ಮಂಜುನಾಥ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾರ್ಯದರ್ಶಿ ದಯಾನಂದ್ ಪರವಾಗಿ ಮಾತನಾಡಿದರು. ಆದರೆ ಪೊಲೀಸರು ಇದಾವುದಕ್ಕೂ ಕಿವಿಗೊಡದೆ ಲಂಚ ಸ್ವೀಕರಿಸುತ್ತಿದ್ದ ದಯಾನಂದ್ನನ್ನು ವಶಕ್ಕೆ ಪಡೆದು ಕಚೇರಿಗೆ ಕರೆತರುವಲ್ಲಿ ಯಶಸ್ವಿಯಾದರು.
ಲೋಕಾಯುಕ್ತ ಎಸ್ಪಿ ಶ್ರೀನಾಥ್ಜೋಷಿ, ಡಿವೈಎಸ್ಪಿ ಸುನಿಲ್ಕುಮಾರ್ ಮಾರ್ಗದರ್ಶನದಲ್ಲಿ ತನಿಖಾಧಿಕಾರಿ ಪ್ರಕಾಶ್ ನೇತೃತ್ವದಲ್ಲಿ ಇನ್ಸ್ಪೆಕ್ಟರ್ಗಳಾದ ಮೋಹನ್ ರೆಡ್ಡಿ, ಬ್ಯಾಟರಾಯಗೌಡ ಅವರು ಲಂಚ ಪಡೆಯುತ್ತಿದ್ದ ಅಧಿಕಾರಿಯನ್ನು ಬಲೆಗೆ ಬೀಳಿಸಿದ್ದಾರೆ. ಸಿಬ್ಬಂದಿಗಳಾದ ಶಂಕರ್, ಮಹದೇವಯ್ಯ, ಶರತ್, ಯೋಗೇಶ್, ನಂದೀಶ್, ಚಾಲಕರಾದ ನವೀನ್, ಶಿವಕುಮಾರ್ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications