ಮಂಡ್ಯ: ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ; ಯೋಗಿ ಆದಿತ್ಯನಾಥ್ ಭಾಗಿ
ಮಂಡ್ಯ, ಸೆಪ್ಟೆಂಬರ್ 27: ಕೆ.ಆರ್.ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಅಕ್ಟೋಬರ್ 13 ರಿಂದ 16 ರವರೆಗೆ ನಡೆಯಲಿರುವ ಕುಂಭ ಮೇಳ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಮೇಳವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದ್ದಾರೆ.
ತಾಲೂಕಿನ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳದ ಪ್ರಚಾರ ವಾಹನ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ನಾನಾ ಭಾಗಗಳಿಂದ ಸಾಧು, ಸಂತರು, ಭಾಗವಹಿಸಲಿದ್ದಾರೆ. ಇದಕ್ಕಾಗಿ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಮಹಾ ಕುಂಭಮೇಳವನ್ನು ಜಗದ್ಗುರಗಳ ಸೂಚನೆಯಂತೆ ಯಾವ ರೀತಿ ಮಾಡಬೇಕು ಎಂಬುದರ ಕುರಿತು ಮಂಗಳವಾರ ಪೂರ್ವಭಾವಿ ಸಭೆ ನಡೆಸಲಾಯಿತು. ಮಹಾಕುಂಭಮೇಳ ನಡೆಯುತ್ತಿರುವುದು ನಮ್ಮೆಲ್ಲರ ಪುಣ್ಯ. 9 ವರ್ಷಗಳ ಹಿಂದೆ ಅದ್ಭುತವಾಗಿ ನಡೆದಿತ್ತು. ಇದೀಗ ಮತ್ತೆ ಜಗದ್ಗುರುಗಳ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಸೋಣ ಎಂದು ಕೆಆರ್ ಪೇಟೆ ಶಾಸಕ ಹಾಗೂ ಕ್ರೀಡಾ ಸಚಿವ ನಾರಾಯಣಗೌಡ ತಿಳಿಸಿದರು.

ಕೆ.ಆರ್. ಪೇಟೆಗೆ ಮಾತ್ರವಲ್ಲ, ಸುತ್ತಮುತ್ತಲಿನ ನಾಲ್ಕೈದು ಜಿಲ್ಲೆಗಳಿಗೆ ಹೆಮ್ಮೆಯ ಕಾರ್ಯಕ್ರಮ. ನಾನು ಸೇವಕನಾಗಿ ದುಡಿಯುವುದಕ್ಕೆ ಬಂದಿದ್ದು, ರಾಜಕಾರಣದಿಂದ ಏನನ್ನು ಮಾಡಬೇಕಿಲ್ಲ. ಸೇವಕನಾಗಿ ದುಡಿದು ಕುಂಭಮೇಳವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗೋಣ. ಈ ಕಾರ್ಯಕ್ರಮಕ್ಕೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಬರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದರು.
9 ವರ್ಷಗಳ ನಂತರ ಕುಂಭ ಮೇಳ
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, " 9 ವರ್ಷಗಳ ಹಿಂದೆ ಯಾವುದೇ ಪೂರ್ವ ಸಿದ್ದತೆಗಳಿಲ್ಲದೇ, ದಿಢೀರ್ ಆಗಿ ರೂಪುಗೊಂಡು ಯಶಸ್ವಿಯಾಗಿ ಕುಂಭಮೇಳ ನಡೆದಿತ್ತು. ಆಗ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಂಡಿದ್ದ ನಾರಾಯಣಗೌಡರು ಯಶಸ್ವಿಗೊಳಿಸಿದ್ದರು. ಈಗ ಸಚಿವರಾಗಿ ಮತ್ತೊಮ್ಮೆ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿದ್ದು, ಉತ್ತಮವಾಗಿ ರೂಪಿಸುತ್ತಿದ್ದಾರೆ. ಮಹಾಕುಂಭಮೇಳದ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಎಲ್ಲರ ಸುಯೋಗ. ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಗಂಗಾರತಿ, ಸ್ನಾನಘಟ್ಟಗಳನ್ನು ನಿರ್ಮಿಸಲಾಗುತ್ತಿದ್ದು, ಸ್ನಾನ ಘಟ್ಟಗಳನ್ನು ಬಳಸುವಾಗ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಎಲ್ಲರೂ ಇದಕ್ಕೆ ಸಹಕರಿಸಿ ಯಶಸ್ವಿಗೊಳಿಸಬೇಕು" ಎಂದು ಹೇಳಿದರು.

ಜಾತಿಬೇಧ, ಪಕ್ಷಬೇಧ ಮರೆತು ಭಾಗಿಯಾಗಿ
ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಕುಂಭಮೇಳ ಆಯೋಜನೆ ಕುರಿತು ಈ ಹಿಂದೆ ವಿಜಯನಗರದ ಮಠದಲ್ಲಿ ಪೂರ್ವಭಾವಿ ಸಭೆ ನಡೆದಿತ್ತು. ಇಂದು ಅದಕ್ಕೆ ಪೂರಕವಾಗಿ ಮತ್ತೊಂದು ಸಭೆ ನಡೆದಿದೆ. ಸರಕಾರ, ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನದಿ ನೀರಿಗೆ, ಗಾಳಿಗೆ ಯಾವುದೇ ಜಾತಿ ಇಲ್ಲ. ಜಾತಿಬೇಧ, ಪಕ್ಷಬೇಧ ಮರೆತು ಎಲ್ಲರೂ ಒಟ್ಟಾಗಿ ಸೇರಿ ಇದನ್ನು ಯಶಸ್ವಿಗೊಳಿಸಬೇಕು. ಇದು ಜನಮಾನಸಕ್ಕೆ ಮುಟ್ಟುವ ಕಾರ್ಯಕ್ರಮವಾಗಲಿ ಎಂದು ಆಶಿಸಿದರು.
ಕಾಗಿನೆಲೆ ಶಾಖಾಮಠದ ಶಿವಾನಂದಪುರಿ ಸ್ವಾಮೀಜಿ, ಶಾಸಕ ಕೇಶವಪ್ರಸಾದ್, ಮಾಜಿ ಶಾಸಕ ಮಾದೇಗೌಡ, ಜಿಲ್ಲಾಧಿಕಾರಿ ಎಸ್ ಅಶ್ವಥಿ, ಎಸ್ಪಿ ಯತೀಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾ ಕುಂಭ ಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ ಎಂದು ಕ್ರೀಡಾ ಸಚಿವ ಡಾ.ನಾರಾಯಣ ಗೌಡ ತಿಳಿಸಿದ್ದರು. ಲಕ್ನೋದಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಖುದ್ದು ಭೇಟಿ ಮಾಡಿದ್ಧ ಸಚಿವ ಡಾ.ನಾರಾಯಣ ಗೌಡ ಅವರು ಕೆ.ಆರ್.ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೆ ಆಹ್ವಾನ ನೀಡಿದ್ದರು.
ಅಕ್ಟೋಬರ್ 13 ರಿಂದ 16ರವರೆಗೂ ಕೆ.ಆರ್ ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅಕ್ಟೋಬರ್ 16ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ತಿಳಿಸಿರುವುದಾಗಿ ಸಚಿವರು ಹೇಳಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications