ಮಂಡ್ಯ ಧರಣಿಯಲ್ಲಿ ಮಹದಾಯಿ, ಕಳಸಾ ಬಂಡೂರಿ ರೈತ ಒಕ್ಕೂಟ
ಮಂಡ್ಯ, ಸೆಪ್ಟೆಂಬರ್ 13: ಮಹದಾಯಿ, ಕಳಸಾ ಬಂಡೂರಿ ರೈತ ಒಕ್ಕೂಟದ ಅಧ್ಯಕ್ಷ ವಿಜಯ್ ಕುಲಕರ್ಣಿ ನೇತೃತ್ವದಲ್ಲಿ ಒಕ್ಕೂಟ ಹುಬ್ಬಳ್ಳಿ ಜಿಲ್ಲಾ ಘಟಕದ ಕಾರ್ಯಕರ್ತರು ನಗರದ ಸರ್ ಎಂ.ವಿ. ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ಸೂಚಿಸಿದರು.
ನಗರದ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಪೇಟೆ ಬೀದಿ, ಜೈನರ ಬೀದಿ, ನೂರಡಿ ರಸ್ತೆ, ಗುತ್ತಲು ರಸ್ತೆಗಳಲ್ಲಿ ಬಹುತೇಕ ಅಂಗಡಿಗಳು ಮುಚ್ಚಿದ್ದವು. ಬಕ್ರೀದ್ ಇದ್ದ ಕಾರಣ ಒಂದು ರೀತಿಯಲ್ಲಿ ಮಂಡ್ಯ ನಗರ ಬಂದ್ ರೀತಿಯಂತಾಗಿತ್ತು.[ತಮಿಳು ಭಾಷಿಕರಿಗೆ ಮಂಡ್ಯದಲ್ಲಿ ರಕ್ಷಣೆ ಕೊಡ್ತೀವಿ]

ಕಾವೇರಿ ಹೋರಾಟ ತೀವ್ರಗೊಂಡಿದ್ದ ಹಿನ್ನೆಲೆಯಲ್ಲಿ ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು, ಮಳವಳ್ಳಿ, ಪಾಂಡವಪುರ ತಾಲೂಕುಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಅರೆಸೇನಾ ಪಡೆ, ಇಂಡೋ ಟಿಬೇಟಿಯನ್ ಬಾರ್ಡರ್ ಸೆಕ್ಯೂರಿಟಿ ಫೋರ್ಸ್ ಮತ್ತು ಪೊಲೀಸರು ನಗರದ ವಿವಿಧ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿದರು.
ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಸುತ್ತಿರುವ ಧರಣಿಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡಸೇನೆ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಸದಸ್ಯರು ಭಾವಹಿಸಿದ್ದರು. ನಗರಸಭೆ ಮಾಜಿ ಸದಸ್ಯ ಅಮ್ಜದ್ ಪಾಷಾ ಉಪವಾಸ ಮಾಡುವ ಮೂಲಕ ಬೆಂಬಲ ಸೂಚಿಸಿದರು.['ಗಂಟೆಗೊಂದು ಮಾತಾಡುವ ಸಿದ್ದರಾಮಯ್ಯನ್ನ ನಾವು ನಂಬಲ್ಲ']

ಮಹದಾಯಿ, ಕಳಸಾ ರೈತ ಒಕ್ಕೂಟ ಹಾಗೂ ಇಲ್ಲಿನ ಕೆಲ ಸಂಘಟನೆಗಳ ವತಿಯಿಂದ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸುವ ಮೂಲಕ ವಾಹನ ಸಂಚಾರಕ್ಕೆ ಅಡ್ಡಿ ಉಂಟುಮಾಡಲಾಯಿತು.
ಮಾಜಿ ಸಂಸದ ಜಿ.ಮಾದೇಗೌಡ, ಮುಖಂಡರಾದ ಆತ್ಮಾನಂದ, ಎಚ್.ಡಿ.ಚೌಡಯ್ಯ, ಅಂಬುಜಮ್ಮ, ಎನ್.ರಾಜು, ಶಂಭೂನಹಳ್ಳಿ ಸುರೇಶ್, ಮಂಜುನಾಥ್, ಬೇಕ್ರಿ ರಮೇಶ್, ಎಂ.ಬಿ.ಶ್ರೀನಿವಾಸ್, ಸಿ.ಟಿ.ಮಂಜುನಾಥ್, ಎಂ.ಎಸ್.ಸತ್ಯಾನಂದ, ಮಾ.ಸೋ.ಚಿದಂಬರ್, ಎಚ್.ಡಿ. ಜಯರಾಂ, ಸೇರಿದಂತೆ ಹಲವರು ಧರಣಿಯಲ್ಲಿ ಭಾಗವಹಿಸಿದ್ದರು.[ಕಾವೇರಿ ವಿವಾದದ ಬಗ್ಗೆ ಮೌನ ಮುರಿದ ಪ್ರಧಾನಿ ಮೋದಿ]

ನಗರದ ಸರ್ ಎಂ.ವಿ. ಪ್ರತಿಮೆ ಬಳಿ ನಡೆಯುತ್ತಿರುವ ಧರಣಿಯಲ್ಲಿ ಮಾತನಾಡಿದ ಜಿ.ಮಾದೇಗೌಡ, ಕಾವೇರಿ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅನ್ಯಾಯವನ್ನು ಪ್ರತಿಭಟಿಸುವುದೇ ಮಹಾಪರಾಧವಲ್ಲ. ಕಾವೇರಿ ವಿಷಯದಲ್ಲಿ ನ್ಯಾಯ ಸಿಗುವವರೆಗೂ ಹೋರಾಟ ಮಾಡುತ್ತೇವೆ. ನಿಷೇಧಾಜ್ಞೆ ಉಲ್ಲಂಘಿಸಿ ಜೈಲಿಗೆ ಹೋಗಲು ಸಿದ್ಧ ಎಂದು ಘೋಷಿಸಿದರು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ












Click it and Unblock the Notifications