ಅಜ್ಜಿಯ ಅಸ್ಥಿ ವಿಸರ್ಜನೆ ವೇಳೆ ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ಮೊಮ್ಮಗ
ಮಂಡ್ಯ, ಅಕ್ಟೋಬರ್ 18: ತನ್ನ ಅಜ್ಜಿಯ ಅಸ್ಥಿ ವಿಸರ್ಜನೆ ವೇಳೆ ಯುವಕನೊಬ್ಬ ಕಾವೇರಿ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ದೊಡ್ಡ ಗೋಸಾಯಿ ಘಾಟ್ ಹತ್ತಿರ ನಡೆದಿದೆ.
ಬೆಂಗಳೂರಿನ ಗವಿಪುರಂ ನಿವಾಸಿ 31 ವರ್ಷದ ಎನ್.ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋದ ಯುವಕನಾಗಿದ್ದು, ಶ್ರೀಪ್ರಸಾದ್ ನ ಅಜ್ಜಿ ಚಂದ್ರಮತಿ ಮೂರು ದಿನದ ಹಿಂದೆ ವಯೋಸಹಜ ಅನಾರೋಗ್ಯದಿಂದ ಮೃತಪಟ್ಟಿದ್ದರು. ಹೀಗಾಗಿ ಅಸ್ಥಿ ವಿಸರ್ಜನೆಗಾಗಿ ಕುಟುಂಬದ ಸದಸ್ಯರೆಲ್ಲ ಶ್ರೀರಂಗಪಟ್ಟಣ ಗೋಸಾಯಿ ಘಾಟ್ ಗೆ ಬಂದಿದ್ದರು.
ಈ ವೇಳೆ ವೈದಿಕರ ಮಾರ್ಗದರ್ಶನದಂತೆ ವಿಧಿ ವಿಧಾನ ಮುಗಿಸಿ, ಅಂತಿಮವಾಗಿ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಹಾಗೂ ಆತನ ಭಾವ ಮಯೂರ್ ಕಾವೇರಿ ನದಿಗೆ ಇಳಿದಿದ್ದರು. ಅಸ್ಥಿ ಬಿಟ್ಟ ಬಳಿಕ ನೀರಿನಲ್ಲಿ ಮುಳುಗಲು ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ.

ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದರಿಂದ ಇಬ್ಬರು ಕೊಚ್ಚಿಹೋಗಿದ್ದಾರೆ. ಈ ವೇಳೆ ಮಯೂರ್ ಅವರನ್ನು ಸ್ಥಳೀಯರು ದಡ ಸೇರಿಸಿದ್ದಾರೆ. ಆದರೆ ಶ್ರೀಪ್ರಸಾದ್ ಕುಟುಂಬಸ್ಥರ ಕಣ್ಣೆದುರೇ ನೀರಿನಲ್ಲಿ ಮುಳುಗಿದ್ದಾರೆ.
ನದಿ ಅಂಚಿನ ಕೃಷಿ ಜಮೀನಿನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಶೆಡ್ ಗಳಲ್ಲಿ ವೈದಿಕರು ಅಂತಿಮ ವಿಧಿ ವಿಧಾನ ನಡೆಸುತ್ತಿದ್ದರು. ನದಿ ಆಳವಿದ್ದರೂ ಹಣದ ಆಸೆಗಾಗಿ ಹೊರ ಜಿಲ್ಲೆಗಳಿಂದ ಬರುವ ಜನರನ್ನು ಪುಸಲಾಯಿಸಿ ಅಪಾಯವನ್ನೂ ಲೆಕ್ಕಿಸದೇ ಅವರಿಂದ ಅಸ್ಥಿ ವಿಸರ್ಜನೆ ಮಾಡಿಸುತ್ತಿದ್ದರು.
ಕಾವೇರಿ ನದಿಯಲ್ಲಿ ನಡೆದ ಈ ದುರ್ಘಟನೆಯಿಂದ ಮೂರೇ ದಿನದಲ್ಲಿ ಇಬ್ಬರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವಕ್ಕಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.
Recommended Video
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications