Mandya: ಕಾರಿನಲ್ಲಿದ್ದ ₹7 ಲಕ್ಷ ಕದಿಯಲು ಯತ್ನ; ಹಿಡಿದು ಥಳಿಸಿದ ಸಾರ್ವಜನಿಕರು
ಕಾರಿನಲ್ಲಿದ್ದ 7 ಲಕ್ಷ ರೂ. ನಗದು ಹಣವನ್ನು ಎಗರಿಸಲು ಹೋದ ಕಳ್ಳನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ ಘಟನೆ ಮಂಡ್ಯ ನಗರದ ಹೊರ ವಲಯದ ಅಮರಾವತಿ ಹೊಟೇಲ್ ಬಳಿ ನಡೆದಿದೆ.
ಆಂಧ್ರ ಮೂಲದ ವ್ಯಕ್ತಿಯೊಬ್ಬ (ಹೆಸರು ತಿಳಿದುಬಂದಿಲ್ಲ) ಸಾರ್ವಜನಿಕರ ಕೈ ಸಿಕ್ಕಿಬಿದ್ದಿದ್ದು, ಆತನನ್ನು ಸಾರ್ವಜನಿಕರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

ಕಲ್ಲಹಳ್ಳಿ ಬಡಾವಣೆಯ ಮಧು ಎಂಬುವರು ನಗರ ಕೆನರಾ ಬ್ಯಾಂಕಿನಲ್ಲಿ 7 ಲಕ್ಷ ರೂ. ಹಣವನ್ನು ಡ್ರಾ ಮಾಡಿಕೊಡು ತಮ್ಮ ಕಾರಿನಲ್ಲಿ ಅಮರಾವತಿ ಹೊಟೇಲ್ ಬಳಿ ಸ್ನೇಹಿತರನ್ನು ಭೇಟಿ ಮಾಡಲು ಆಗಮಿಸಿದ್ದರು.
ಕಾರನ್ನು ಹೊಟೇಲ್ ಹಿಂಭಾಗದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿ ಸ್ನೇಹಿತರನ್ನು ಭೇಟಿ ಮಾಡಲು ತೆರಳಿದ್ದರು. ಸ್ನೇಹಿತರನ್ನು ಭೇಟಿ ಮಾಡಿ ವಾಪಸ್ಸು ಬರುವಷ್ಟರಲ್ಲಿ ಆರೋಪಿ ಕಾರಿನ ಚಾಲಕರ ಕಿಟಕಿಯ ಗಾಜನ್ನು ಒಡೆದು ಕಾರಿನೊಳಗೆ ನುಗ್ಗಿ ಹಣಕ್ಕಾಗಿ ಹುಡುಕಾಟ ನಡೆಸಿದ್ದಾನೆ. ಆದರೆ ಹಣ ಆತನ ಕೈಗೆ ಸಿಗಲಿಲ್ಲ.
ಮಧು ಅವರು ವಾಪಸ್ಸು ಬಂದು ಕಾರಿನೊಳಗೆ ಹುಡುಕುತ್ತಿದ್ದ ಕಳ್ಳನನ್ನು ಕಂಡು ಆತನನ್ನ ಹಿಡಿಯಿರಿ ಎಂದು ಕಿರುಚಿದ್ದಾರೆ. ತಕ್ಷಣ ಎಚ್ಚೆತ್ತ ಕಳ್ಳ ಅಲ್ಲಿಂದ ಓಟ ಕೀಳಲು ಪ್ರಾರಂಭಿಸಿದ್ದ ಹೊಟೇಲ್ನ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಲು ಯತ್ನಿಸಿದ್ದ. ಮಧು ಅವರ ಕಿರುಚಾಟ ಆಲಿಸಿದ ಸಾರ್ವಜನಿಕರು ಕಳ್ಳನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದರು.
ಕಾರಿನೊಳಗೆ ಚಾಲಕನ ಸೀಟಿನ ಕೆಳಗೆ ಹಣ ಇಟ್ಟಿದ್ದರಿಂದ ಹಣ ಆತನ ಕೈಗೆ ಸಿಗಲಿಲ್ಲ. ಬಳಿಕ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications