ಮಂಡ್ಯ ದುರಂತ: ಮುಖ್ಯಮಂತ್ರಿಗಳ ಎಲ್ಲಾ ಕಾರ್ಯಕ್ರಮ ರದ್ದು
Recommended Video

ಮಂಡ್ಯ, ನವೆಂಬರ್ 24: ಮಂಡ್ಯ ಜಿಲ್ಲೆಯ ಕನಗನಮರಡಿ ಬಳಿ ವಿಸಿ ನಾಲೆಗೆ ಬಸ್ ಬಿದ್ದು 25ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.
ಕನಗನಮರಡಿಗೆ ಸಿಎಂ|ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದಕ್ಕೆ
— CM of Karnataka (@CMofKarnataka) November 24, 2018
_
ಮುಖ್ಯಮಂತ್ರಿಗಳು ತಮ್ಮ ಇಂದಿನ ಎಲ್ಲ ಕಾರ್ಯಕ್ರಮಗಳನ್ನೂ ರದ್ದುಪಡಿಸಿ ಪಾಂಡವಪುರ- ಕನಗನಮರಡಿ ಗ್ರಾಮದ ಬಸ್ ಅಪಘಾತ ನಡೆದ ಸ್ಥಳಕ್ಕೆ ಧಾವಿಸಲಿದ್ದಾರೆ.ಇಂದು ಸಂಜೆ ನಡೆಯಬೇಕಿದ್ದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಮುಂದೂಡುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ pic.twitter.com/eahedQWKUl
ಘಟನೆಯ ಹಿನ್ನಲೆಯಲ್ಲಿ ಇಂದು ನಡೆಯಬೇಕಿದ್ದ ಚಲನಚಿತ್ರ ಪ್ರಶಸ್ತಿ ಸಮಾರಂಭ ಸೇರಿದಂತೆ ಮುಖ್ಯಮಂತ್ರಿಯವರು ಭಾಗವಹಿಸಲಿದ್ದ ಎಲ್ಲಾ ಕಾರ್ಯಕ್ರಮಗಳನ್ನೂ ರದ್ದುಗೊಳಿಸಲಾಗಿದೆ.

ಪಾಂಡವಪುರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ರಾಜಕುಮಾರ್ ಎಂಬ ಖಾಸಗಿ ಬಸ್ಸೊಂದು ಕನಗನಮರಡಿ ಎಂಬಲ್ಲಿ ನಾಲೆಯೊಂದಕ್ಕೆ ಉರುಳಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ25 ಕ್ಕೂ ಹೆಚ್ಚು ಜನ ಮೃತರಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗಿದೆ. ಚಾಲಕನ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.












Click it and Unblock the Notifications