ಪ್ರೊ.ಭಗವಾನ್ ವಿರುದ್ಧ ದೂರು: ಸಂಘ ಸಂಸ್ಥೆ, ಟ್ರಸ್ಟ್ಗಳಿಗೆ ಬರುವ ವಿದೇಶಿ ಹಣದ ತನಿಖೆಗೆ ಆಗ್ರಹ
ಮಂಡ್ಯ, ಅಕ್ಟೋಬರ್ 18 : ಪುರಾಣ ಪುರುಷರಾದ ಶ್ರೀರಾಮ, ಸೀತಾಮಾತೆ ಹಾಗೂ ಇತ್ತೀಚೆಗೆ ಕೃಷಿಕ ಸಮುದಾಯವಾದ ಒಕ್ಕಲಿಗ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಪ್ರೊ. ಭಗವಾನ್ ವಿರುದ್ಧ ಮಂಡ್ಯದಲ್ಲಿ ದೂರು ದಾಖಲಾಗಿದೆ.
ಪ್ರೊ. ಭಗವಾನ್ ಅವರ ವಿರುದ್ಧ ಹಾಗೂ ಜೊತೆಗೆ ಇವರು ನಡೆಸುತ್ತಿರುವ ಸಂಘ ಸಂಸ್ಥೆಗಳಿಗೆ ವಿದೇಶಗಳಿಂದ ಹರಿದುಬರುತ್ತಿರುವ ಹಣದ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ. ಮಂಜುನಾಥ್ ಇತರರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು, ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಮಹಿಷ ದಸರಾ ಕಾರ್ಯಕ್ರಮದಲ್ಲಿ ಸಾರ್ವಜನಿಕವಾಗಿ ಒಕ್ಕಲಿಗರು ಸಂಸ್ಕೃತಿ ಹೀನರು ಹಾಗೂ ಪ್ರಾಣಿಗಳು ಎಂಬ ಮಾತುಗಳನ್ನಾಡಿ ಸಾರ್ವತ್ರಿಕವಾಗಿ ಅಪಮಾನ ಮಾಡಿದ್ದಾರೆ.
ಈ ಹಿಂದೆಯೂ ಧರ್ಮದ ಬಗ್ಗೆ ಹಾಗೂ ಇತಿಹಾಸ ಪುಣ್ಯ ಪುರುಷರಾದ ಶ್ರೀರಾಮ, ಸೀತಾದೇವಿ, ಭಗವದ್ಗೀತೆಯ ಬಗ್ಗೆ ತೀರಾ ಹಗುರವಾದ ಮಾತನಾಡಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದರ ಹಿಂದೆ ಅಂತರಾಷ್ಟ್ರೀಯ ಹುನ್ನಾರವಿದ್ದು, ಡಿಸ್ಮ್ಯಾಂಟಲಿಂಗ್ ಆಫ್ ಗ್ಲೋಬಲ್ ಹಿಂದುತ್ವ ಎಂಬ ವೀಡಿಯೋ ಸಂವಾದವನ್ನು ವಿದೇಶಿ ವಿದ್ಯಾಲಯಗಳು ಏರ್ಪಡಿಸಿದ್ದು, ಭಾರತದಿಂದ ಸಹಸ್ರಾರು ಜನ ತಮ್ಮನ್ನು ತಾವು ಬುದ್ಧಿಜೀವಿಗಳು ಎಂದು ಕರೆದುಕೊಳ್ಳುವ ಪ್ರಾಧ್ಯಾಪಕರು, ಸಾಹಿತಿಗಳು, ಇತಿಹಾಸ ತಜ್ಞರು ಸೇರಿದಂತೆ ಹಲವಾರು ಮಂದಿ ಭಾಗವಹಿಸಿರುವ ಬಗ್ಗೆ ವಿದೇಶಿ ಮಾಧಮಗಳಲ್ಲಿ ವರದಿಯಾಗಿವೆ ಎಂದು ತಿಳಿಸಿದ್ದಾರೆ.
ಈ ಸಂವಾದಲ್ಲಿ ಪ್ರೊ. ಭಗವಾನ್, ಪ್ರೊ. ಮಹೇಶ್ ಚಂದ್ರಗುರು, ಜ್ಞಾನಪ್ರಕಾಶ್ ಸ್ವಾಮಿ ಹೀಗೆ ಹಲವಾರು ಮಂದಿ ಭಾಗವಹಿಸಿ ದೇಶದಲ್ಲಿ ಧರ್ಮ ಧರ್ಮಗಳ ಮಧ್ಯೆ, ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಇವರ ಕಾರ್ಯಕ್ಕೆ ವಿದೇಶದಿಂದ ಕೋಟಿಗಟ್ಟಲೆ ಹಣ ಪಡೆದಿದ್ದಾರೆ ಎಂಬ ಅನುಮಾನಗಳಿದ್ದು, ಇವರು ನಡೆಸುತ್ತಿರುವ ಸಂಘ ಸಂಸ್ಥೆಗಳು, ಟ್ರಸ್ಟ್ಗಳ ಹಣದ ಮೂಲದ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಬಿಜೆಪಿ ಮುಖಂಡರಾದ ಪ್ರಸನ್ನ, ಮನುಕುಮಾರ್ ಹೊಳಲು, ಶಿವಲಿಂಗಯ್ಯ, ಶಿವಕುಮಾರ್, ವಿನೋಭ, ರಾಜೇಶ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications