ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನೋಡಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯಾ ನಂತರ ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ಕಾಣಲು ಸಾಧ್ಯವಿಲ್ಲ. ಅವರಷ್ಟು ಸುಳ್ಳುಗಾರ ಮತ್ತೊಬ್ಬರಿಲ್ಲ. ಬಿಜೆಪಿ ಪಕ್ಷದ ಮತ್ತೊಂದು ಅನ್ವರ್ಥನಾಮವೇ ಸುಳ್ಳಿನ ಪಾರ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

CM Siddaramaiah

ಅಚ್ಛೇದಿನ ಬರುತ್ತೆ ಎಂದು ಹೇಳಿ ಹತ್ತು ವರ್ಷವಾಯಿತು. ಜನರ ಪಾಲಿಗೆ ಆ ದಿನಗಳು ಬರಲೇ ಇಲ್ಲ. ಎಲ್ಲರ ಜೊತೆ ಅಭಿವೃದ್ಧಿ ಎಂದರು ಜನರ ವಿಕಾಸವಾಗಲೇ ಇಲ್ಲ. ಕಪ್ಪುಹಣವನ್ನು ತರಲಿಲ್ಲ. ಉದ್ಯೋಗ ಸೃಷ್ಟಿಯನ್ನೂ ಮಾಡಲಿಲ್ಲ. ಹತ್ತು ವರ್ಷಗಳಿಂದ ಸುಳ್ಳು ಹೇಳುತ್ತಲೇ ಕಾಲ ಕಳೆಯುತ್ತಿದ್ದಾರೆ ಎಂದು ಟೀಕಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ

ನಾವು ಎಲ್ಲಾ ವರ್ಗ, ಸಮಾಜಕ್ಕೂ ಸಮವಾಗಿ ಅನುದಾನ ಕೊಟ್ಟಿದ್ದೇವೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣದಲ್ಲಿ ಅನ್ಯಾಯವಾಗಿದೆ ಎಂದು ನಾವು ಹೇಳುತ್ತಿದ್ದೇವೆ. ಕರ್ನಾಟಕದವರಿಗೆ ಸರಿಯಾಗಿ ತೆರಿಗೆ ಪಾಲನ್ನು ಕೊಡುತ್ತಿಲ್ಲ ಎಂದು ಕೇಳೋದು ತಪ್ಪಾ? ಇದು ಕನ್ನಡಿಗರಿಗೆ ಮಾಡಿದ ದ್ರೋಹವಲ್ಲವೇ. ಈ ಅನ್ಯಾಯದ ವಿರುದ್ಧ ಹೋರಾಟ ಮಾಡುವುದು ತಪ್ಪಾ ಎಂದು ಪ್ರಶ್ನಿಸಿದರು.

ಕೇಂದ್ರ ಹೇಳುವ ಸುಳ್ಳನ್ನೇ ರಾಜ್ಯ ಬಿಜೆಪಿಯವರೂ ಹೇಳುತ್ತಿದ್ದಾರೆ. ಇವರ ಜೊತೆಗೆ ಜೆಡಿಎಸ್‌ನ ಎಚ್.ಡಿ.ಕುಮಾರಸ್ವಾಮಿ ಸಹ ಸೇರಿಕೊಂಡಿದ್ದಾರೆ. ರಾಜ್ಯಕ್ಕೆ ಆಗುತ್ತಿರುವ ತೆರಿಗೆ ಅನ್ಯಾಯ ಸರಿಪಡಿಸಬೇಕು ಎಂದರೆ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಪಕ್ಷಗಳನ್ನು ಸೋಲಿಸಿ ಕಾಂಗ್ರೆಸ್ ಪಕ್ಷವನ್ನು ಆಶೀರ್ವದಿಸುವಂತೆ ಕೋರಿದರು.

ನಮ್ಮ ಗ್ಯಾರಂಟಿಗಳನ್ನ ಜಾರಿಗೆ ತಂದರೆ ರಾಜ್ಯ ದಿವಾಳಿ ಆಗುತ್ತೆ ಎಂದು ಟೀಕಿಸಿದರು. ಮೊನ್ನೆಯಷ್ಟೇ ಬಜೆಟ್ ಮಂಡಿಸಿದ್ದೇನೆ. ಆ ಬಜೆಟ್‌ನಲ್ಲಿ ₹52 ಸಾವಿರ ಕೋಟಿ ಅನುದಾನ ಮೀಸಲಿಟ್ಟಿದ್ದೀನಿ. ಅಶೋಕ್, ಬಸವರಾಜ ಬೊಮ್ಮಾಯಿ ಅವರೇ ಬಜೆಟ್ ಪುಸ್ತಕ ಓದಿಕೊಳ್ರಪ್ಪ. ಸುಖಾ ಸುಮ್ಮನೇ ಬಜೆಟ್‌ನ್ನು ಟೀಕೆ ಮಾಡಬೇಡಿ. ಚುನಾವಣೆ ಪೂರ್ವ ಘೋಷಿಸಿದ ಐದು ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿ ಮಾಡಿದ ಸರ್ಕಾರ ಯಾವುದಾದರೂ ಇದ್ದರೆ ಅದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+