ಮಂಡ್ಯ: ಬಹಿರಂಗ ಚರ್ಚೆಯಲ್ಲಿ ಜಂಗಿ ಕುಸ್ತಿ ಮಾಡ್ತಾರಾ ಪುಟ್ಟರಾಜು-ಚಲುವರಾಯಸ್ವಾಮಿ?
ಮಂಡ್ಯ, ಅಕ್ಟೋಬರ್ 11: ಮಂಡ್ಯ ಕ್ಷೇತ್ರದ ಇಬ್ಬರು ಪ್ರಮುಖ ನಾಯಕರ ರಾಜಕೀಯ ಸಂಘರ್ಷ ಸದ್ಯಕ್ಕೆ ಬಗೆಹರಿಸುವ ಲಕ್ಷಣಗಳು ಕಾಣಿಸುತ್ತಿಲ್ಲ.
ತಮ್ಮಿಂದಾಗಿ ಚಲುವರಾಯಸ್ವಾಮಿ ರಾಜಕೀಯದಲ್ಲಿ ಮುಂದೆಬರಲು ಸಾಧ್ಯವಾಯಿತು ಎಂದಿರುವ ಪುಟ್ಟರಾಜು, ಈ ಬಗ್ಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲು ಹಾಕಿದ್ದಾರೆ.
ಇಬ್ಬರ ಮಧ್ಯೆ ಒಂದು ವಾರದಿಂದ ಸತತವಾಗಿ ವಾಗ್ದಾಳಿಗಳು ನಡೆಯುತ್ತಿವೆ. ಉಪಚುನಾವಣೆ ಮತ್ತು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವುದು ಬೇಡ ಎಂದು ಕಾಂಗ್ರೆಸ್ ಮುಖಂಡ ಎನ್. ಚಲುವರಾಯಸ್ವಾಮಿ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.
ಸಚಿವ ಸಿ.ಎಸ್. ಪುಟ್ಟರಾಜು ಮತ್ತು ಚಲುವರಾಯಸ್ವಾಮಿ ಅವರ ನಡುವಣ ರಾಜಕೀಯ ವೈಷಮ್ಯ ಪರಸ್ಪರ ಕೆಂಡಕಾರುವಂತಹ ಹೇಳಿಕೆಗಳ ಮೂಲಕ ವ್ಯಕ್ತವಾಗುತ್ತಿದೆ.

ಕಾಲು ಹಿಡಿದು ಅಧಿಕಾರ ಕೊಡಿಸಿದ್ದೆ
ಚಲುವರಾಯಸ್ವಾಮಿ ಮತ್ತು ನಾನು ಸ್ನೇಹಿತರು. ಆದರೆ, ರಾಜಕೀಯದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ. ಅವರ ರಾಜಕೀಯದ ಬದುಕಿನಲ್ಲಿ ಮುಂದೆ ಬರಲು ನನ್ನ ಪಾತ್ರವನ್ನು ಅವರು ಮರೆಯುವಂತಿಲ್ಲ. ಅವರಿಗೆ ರಾಜಕೀಯದ ಶಕ್ತಿ ತುಂಬಿದವರಾರು ಎಂದು ಹೇಳಲಿ. ಜನಪ್ರತಿನಿಧಿಗಳ ಕಾಲು ಹಿಡಿದು ಅವರನ್ನು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರನ್ನಾಗಿ ಮಾಡಿದ್ದೆ. ಇದಕ್ಕೆ ಮಾಜಿ ಶಾಸಕ ಎಚ್.ಬಿ. ರಾಮು ಅವರೇ ಸಾಕ್ಷಿ. ಬೇಕಿದ್ದರೆ ಅವರ ನೇತೃತ್ವದಲ್ಲಿಯೇ ಚರ್ಚೆ ನಡೆಯಲಿ ಎಂದು ಪುಟ್ಟರಾಜು ಹೇಳಿದ್ದಾರೆ.

ಬಹಿರಂಗ ಚರ್ಚೆಗೆ ಸಿದ್ಧ
ರಾಜಕೀಯದಲ್ಲಿ ಚಲುವರಾಯಸ್ವಾಮಿ ನನಗೆ ಏನೇನು ತೊಂದರೆ ಕೊಟ್ಟರು, ಅವರ ಬಗ್ಗೆ ನಾನು ಏನೇನು ಮಾತನಾಡಿದ್ದೇನೆ ಎಂಬುದರ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ. ಅಲ್ಲಿಯೇ ಅವರ ಹೇಳಿಕೆಗಳಿಗೆ ಉತ್ತರ ನೀಡುತ್ತೇನೆ. ಯಾರೋ ಇನ್ನೊಬ್ಬರ ಮೂಲಕ ಅವರಿಗೆ ಉತ್ತರ ಕೊಡುವ ಅಗತ್ಯವಿದೆ ಎಂದು ಪುಟ್ಟರಾಜು ಹೇಳಿದರು.

ತಲೆ ಸರಿಯಾಗಿದ್ದರಿಂದಲೇ ಗೆಲ್ಲಿಸಿದರು
ನನ್ನ ತಲೆ ಚೆನ್ನಾಗಿದೆ. ನನ್ನ ತಲೆಯಲ್ಲಿ ಮೆದುಳು ಇರೋದಕ್ಕೇ ಜನರು ನನ್ನನ್ನು ಗೆಲ್ಲಿಸಿದರು. ಚಲುವರಾಯಸ್ವಾಮಿ ತಮ್ಮ ತಲೆಯನ್ನು ಸರಿಮಾಡಿಸಿಕೊಳ್ಳಬೇಕಿದೆ. ಇಲ್ಲವೇ ನಾವೇ ಸರಿಮಾಡುತ್ತೇವೆ ಎಂದು ಪುಟ್ಟರಾಜು ಟಾಂಗ್ ನೀಡಿದರು.
ಪುಟ್ಟರಾಜು ಅವರು ತಲೆಯಲ್ಲಿ ಮೆದುಳು ಇಟ್ಟುಕೊಂಡು ಮಾತಾಡಲಿ ಎಂದು ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದರು.

ಸೋಲಿಸಿ ಸುಮ್ಮನಿರಪ್ಪ ಎಂದಿದ್ದಾರೆ
ಸತ್ತ ಕುದುರೆ ಮಾತನಾಡುತ್ತಿವೆ ಎಂಬ ಹೇಳಿಕೆಗೆ ಸ್ಪಷ್ಟನೆ ನೀಡಿದ ಪುಟ್ಟರಾಜು, ಸೋತವರು ಸತ್ತ ರೀತಿಯಲ್ಲಿ ರಾಜಕಾರಣ ಮಾಡಬೇಕಿದೆ ಎಂದರು.
ನಾಗಮಂಗಲ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ 52 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಜನರು ಚಲುವರಾಯಸ್ವಾಮಿ ಅವರನ್ನು ಸೋಲಿಸಿ ಸುಮ್ಮನಿರಪ್ಪ ಎಂದಿದ್ದರು. ಅವರಿಗೆ ಅಗೌರವ ತೋರಿಸುವ ಸಲುವಾಗಿ ನಾನು ಅವರನ್ನು ಟೀಕಿಸಿಲ್ಲ ಎಂದು ಸ್ಪಷ್ಟಡಿಸಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications