ಮೇಲುಕೋಟೆ ಬ್ರಹ್ಮೋತ್ಸವ: ವಜ್ರಖಚಿತ ವೈರಮುಡಿ, ರಾಜಮುಡಿ ಮಂಡ್ಯದಿಂದ ರವಾನೆ
ಮೇಲುಕೋಟೆ ಚೆಲುವನಾರಾಯಣಸ್ವಾಮಿಯ ಐತಿಹಾಸಿಕ ಶ್ರೀ ವೈರಮುಡಿ ಬ್ರಹ್ಮೋತ್ಸವದ ಹಿನ್ನೆಲೆಯಲ್ಲಿ ವಜ್ರಖಚಿತ ವೈರಮುಡಿ, ರಾಜಮುಡಿ ಮತ್ತು ಇತರ ವಜ್ರಾಭರಣಗಳನ್ನು ಜಿಲ್ಲಾ ಖಜಾನೆಯಿಂದ ಗುರುವಾರ ಬೆಳಗ್ಗೆ ಮೇಲುಕೋಟೆಗೆ ಕೊಂಡೊಯ್ಯಲಾಯಿತು.
ಜಿಲ್ಲಾ ಖಜಾನೆಯ ಭದ್ರತಾ ಕೊಠಡಿಯಲ್ಲಿಟ್ಟಿದ್ದ ವೈರಮುಡಿ ಸಹಿತ ವಜ್ರಾಭರಣಗಳ ಎರಡು ಗಂಟುಗಳನ್ನು ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್. ನಾಗರಾಜು, ನೇತೃತ್ವದಲ್ಲಿ ಬೆಳಗ್ಗೆ 7.45 ಗಂಟೆಗೆ ಹೊರ ತೆಗೆಯಲಾಯಿತು. ಬಳಿಕ ಖಜಾನೆ ಮುಖ್ಯದ್ವಾರದಲ್ಲಿ ಆಭರಣಗಳ ಗಂಟುಗಳನ್ನಿಟ್ಟು ಅವುಗಳಿಗೆ ಹಾರ ತೊಡಿಸಿ, ಸಾಂಪ್ರದಾಯಿಕವಾಗಿ ಪ್ರಥಮ ಪೂಜೆ ನೆರವೇರಿಸಲಾಯಿತು. ಈ ವೇಳೆ ಅಧಿಕಾರಿಗಳು ವೈರಮುಡಿ ಮತ್ತು ವಜ್ರಾಭರಣಗಳಿದ್ದ ಗಂಟುಗಳಿಗೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದರು.

ಕೇವಲ 15 ನಿಮಿಷದ ಅವಧಿಯಲ್ಲಿ ಪೂಜೆ ಮುಗಿಸಿ, ಆಭರಣಗಳ ಗಂಟುಗಳನ್ನು ಶ್ರೀ ಚಲುವನಾರಾಯಣಸ್ವಾಮಿ ದೇವಾಲಯದ ಮೊದಲ ಸ್ಥಾನೀಕಂ ಕರಗಂ ರಾಮಪ್ರಿಯ ಅವರಿಗೆ ಹಸ್ತಾಂತರಿಸಲಾಯಿತು. ಬೆಳಗ್ಗೆ 8 ಗಂಟೆಗೆ ಖಜಾನೆ ಆವರಣದಿಂದ ವಾಹನ ನಿರ್ಗಮಿಸಿತು.
ವಾಹನವೇರಿದ ವೈರಮುಡಿ
ವೈರಮುಡಿ ಉತ್ಸವದ ಅಂಗವಾಗಿ ವರ್ಷಕ್ಕೊಮ್ಮೆ ಮಾತ್ರ ವೈರಮುಡಿ ಕಿರೀಟವನ್ನು ಖಜಾನೆಯಿಂದ ಹೊರ ತೆಗೆಯಲಾಗುತ್ತದೆ. ಮೈಸೂರಿನ ಶ್ರೀ ಬ್ರಹ್ಮತಂತ್ರ ಸ್ವತಂತ್ರ ಪರಕಾಲ ಸ್ವಾಮಿ ಮಠದ ವಾಹನದಲ್ಲಿ ವೈರಮುಡಿ, ರಾಜಮುಡಿ ಮತ್ತು ವಜ್ರಾಭರಣಗಳನ್ನು ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ಮೇಲುಕೋಟೆಗೆ ಕೊಂಡೊಯ್ಯುವುದು ಸಂಪ್ರದಾಯ. ಅದರಂತೆ ಈ ವರ್ಷವೂ ಅದೇ ವಾಹನದಲ್ಲಿ ತೆಗೆದುಕೊಂಡು ಹೋಗಲಾಯಿತು.
ಖಜಾನೆಯಿಂದ ಹೊರಟ ವಾಹನವು ನಂತರ ನಗರದ ಶ್ರೀ ಲಕ್ಷ್ಮಿಜನಾರ್ದನಸ್ವಾಮಿ ದೇವಾಲಯಕ್ಕೆ ತೆರಳಿತು. ಮಂಗಳವಾದ್ಯಗಳ ಸದ್ದಿನೊಂದಿಗೆ ದೇವಾಲಯ ಅವರಣದಲ್ಲಿ 8.10ಕ್ಕೆ ವೈರಮುಡಿ ಆಭರಣಕ್ಕೆ ಸ್ವಾಗತ ಕೋರಲಾಯಿತು. ಅಲ್ಲಿನ ಮಂಟಪದಲ್ಲಿ ವೈರಮುಡಿಯನ್ನು ಇಟ್ಟು ಶ್ರೀ ಚಲುವನಾರಾಯಣಸ್ವಾಮಿ ದೇವರ ಒಕ್ಕಲಿನವವರು ಸಾಂಪ್ರದಾಯಿಕ ಪೂಜೆ ನೆರವೇರಿಸಿದರು. ಅಲ್ಲಿಂದ 8.20ಕ್ಕೆ ವಾಹನವು ಮೇಲುಕೋಟೆಯತ್ತ ಸಾಗಿತು.
ದಾರಿಯುದ್ದಕ್ಕೂ ಸ್ವಾಗತ
ಮೇಲುಕೋಟೆಗೆ ತೆರಳುವ ಮಾರ್ಗಮಧ್ಯೆ ಸಿಗುವ ಇಂಡುವಾಳು, ಸುಂಡಹಳ್ಳಿ, ತೂಬಿನಕೆರೆ, ಕಾಳೇನಹಳ್ಳಿ, ರಾಗಿಮುದ್ದನಹಳ್ಳಿ, ಕೋಡಿಶೆಟ್ಟಿಪುರ, ಗಣಂಗೂರು, ಬಾಬುರಾಯನಕೊಪ್ಪಲು, ಕಿರಂಗೂರು, ದರಸಗುಪ್ಪೆ, ಪಾಂಡವಪುರ, ಕೆ.ಬೆಟ್ಟಹಳ್ಳಿ, ಮಾಣಿಕ್ಯನಹಳ್ಳಿ, ಜಕ್ಕನಹಳ್ಳಿ ಸೇರಿದಂತೆ 86 ಹಳ್ಳಿಗಳ ಮಾರ್ಗವಾಗಿ ವೈರಮುಡಿ ಹೊತ್ತ ವಾಹನ ಮೇಲುಕೋಟೆಗೆ ಸಂಜೆ ವೇಳೆಗೆ ತಲುಪಿತು. ಮಾರ್ಗದುದ್ದಕ್ಕೂ ಹಳ್ಳಿಗಳ ರಸ್ತೆಗಳಲ್ಲಿ ರಂಗೋಲಿ ಇಟ್ಟು, ತಳಿರು, ತೋರಣ, ಚಪ್ಪರ ಹಾಕಿಕೊಂಡು ಕಾಯುತ್ತಿದ್ದ ಭಕ್ತರು ವೈರಮುಡಿಗೆ ಭಕ್ತಿಪೂರ್ವಕ ಸ್ವಾಗತ ಕೋರಿದರು. ಅಲ್ಲಲ್ಲಿ ಪಾನಕ, ನೀರು ಮಜ್ಜಿಗೆ ಮತ್ತು ಪ್ರಸಾದ ವಿನಿಯೋಗವೂ ನಡೆಯಿತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications