ಕೆರಗೋಡು ಧ್ವಜಸ್ಥಂಭ ವಿವಾದ: ಮತ್ತೊಂದು ಎಡವಟ್ಟು ಮಾಡಿದ ಜಿಲ್ಲಾಡಳಿತ; ಜನರಲ್ಲಿ ಗೊಂದಲ
ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ರಂಗಮಂದಿರ ಮುಂಭಾಗದಲ್ಲಿರುವ ಧ್ವಜಸ್ತಂಭ ವಿವಾದಕ್ಕೆ ಸಂಬಂಧಿಸಿದಂತೆ ತಪ್ಪನ್ನು ಮುಚ್ಚಿಡಲು ಜಿಲ್ಲಾಡಳಿತ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದು ಸಾರ್ವಜನಿಕರಲ್ಲಿ ತೀವ್ರ ಗೊಂದಲ ಸೃಷ್ಟಿಸಿದೆ.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಧ್ವಜಸ್ತಂಭ ತೆರವುಗೊಳಿಸುವಂತೆ ಯಾವುದೇ ಆದೇಶ ಹೊರಡಿಸಿಲ್ಲವೆಂದು ಹೇಳಿದರೆ, ತಾಪಂ ಆಡಳಿತಾಧಿಕಾರಿ ಹಾಗೂ ಜಿಪಂ ಉಪ ಕಾರ್ಯದರ್ಶಿ ಎಂ.ಬಾಬು ಅವರು ಧ್ವಜಸ್ತಂಭ ತೆರವುಗೊಳಿಸುವ ಆದೇಶವನ್ನು ಮೊದಲು ಹೊರಡಿಸಿ ನಂತರ ತಿದ್ದುಪಡಿ ಮಾಡಿ ಆದೇಶ ಹೊರಡಿಸಿದ್ದಾರೆ. ಇಬ್ಬರು ಅಧಿಕಾರಿಗಳ ವಿಭಿನ್ನ ಹೇಳಿಕೆಗಳು ಸಾರ್ವಜನಿಕವಾಗಿ ಗೊಂದಲ ಮೂಡಿಸಿವೆ.

ಜ.25ರಂದು ವಿವಾದಿತ ಸ್ಥಳದಲ್ಲಿ ಧ್ವಜಸ್ತಂಭ ತೆರವುಗೊಳಿಸುವಂತೆ ಆದೇಶ ಹೊರಡಿಸಿರುವ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಷಯ ಬಹಿರಂಗಗೊಂಡ ನಂತರದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಶೇಖ್ ತನ್ವೀರ್ ಆಸಿಫ್ ಅವರು ಧ್ವಜಸ್ತಂಭ ತೆರವುಗೊಳಿಸುವ ಸಂಬಂಧ ಯಾವುದೇ ಆದೇಶ ನೀಡಿಲ್ಲವೆಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದರು.
ಧ್ವಜ ಸ್ತಂಭ ಗ್ರಾಪಂ ಸುಪರ್ದಿಗೆ
ಇದಾದ ಕೆಲ ಗಂಟೆಗಳಲ್ಲೇ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ ಎಂ.ಬಾಬು ಅವರು, ಜ.25ರ ಆದೇಶದಲ್ಲಿ ಸ್ಥಳದಲ್ಲಿರುವ ಧ್ವಜಸ್ತಂಭವನ್ನು ತೆರವುಗೊಳಿಸಿ ಗ್ರಾಮ ಪಂಚಾಯಿತಿ ಆಸ್ತಿಯನ್ನು ಸುಪರ್ದಿಗೆ ಪಡೆದು ಯಥಾಸ್ಥಿತಿ ಕಾಪಾಡಲು ಕ್ರಮ ವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿತ್ತು. ಆನಂತರದಲ್ಲಿ ತಿದ್ದುಪಡಿ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಆಸ್ತಿಯಾದ ರಂಗಮಂದಿರದ ಮುಂಭಾಗದಲ್ಲಿರುವ ಧ್ವಜ ಸ್ತಂಭವನ್ನು ಗ್ರಾಪಂ ಸುಪರ್ದಿಗೆ ಪಡೆದುಕೊಳ್ಳಲು ಕ್ರಮ ವಹಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.
ಜಿಪಂ ಸಿಇಒ ಅವರು ಧ್ವಜಸ್ತಂಭ ತೆರವುಗೊಳಿಸುವ ಯಾವುದೇ ಆದೇಶವಿರಲಿಲ್ಲವೆಂದಾದ ಮೇಲೆ ತಿದ್ದುಪಡಿ ಆದೇಶಕ್ಕೆ ಅವಕಾಶ ಸಿಕ್ಕಿದ್ದು ಹೇಗೆ? ಸಿಇಒ ಹಾಗೂ ತಾಪಂ ಆಡಳಿತಾಧಿಕಾರಿ ಬಿಡುಗಡೆ ಮಾಡಿರುವ ಗೊಂದಲದ ಆದೇಶಪತ್ರಗಳು ಹೊಸ ಚರ್ಚೆಗೆ ಕಾರಣವಾಗುತ್ತಿವೆ.
ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆದೇಶಪತ್ರ ಹೇಗೆ ಸೋರಿಕೆಯಾಯಿತು ಎಂಬ ಬಗ್ಗೆ ತಲೆಕೆಡಿಸಿಕೊಂಡಿರುವ ಜಿಲ್ಲಾಡಳಿತ ಅದನ್ನು ಮುಚ್ಚಿಹಾಕುವ ಪ್ರಯತ್ನವಾಗಿ ಕಸರತ್ತು ನಡೆಸುತ್ತಾ ಎಡವಟ್ಟುಗಳನ್ನು ಮಾಡಿಕೊಳ್ಳುತ್ತಲೇ ಇದೆ ಎನ್ನಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications