Ground Water: ಮಂಡ್ಯದಲ್ಲಿ ಏಳು ಅಡಿ ಕುಸಿದ ಅಂತರ್ಜಲ; ಆತಂಕದಲ್ಲಿ ರೈತರು
ಮಂಡ್ಯ: ರಣಬಿಸಿಲಿಗೆ ಭೂಮಿ ಕಾದು ಕೆಂಡವಾಗಿದೆ. ಕೆರೆ-ಕಟ್ಟೆಗಳೆಲ್ಲಾ ಬತ್ತಿಹೋಗಿವೆ. ಅಂತರ್ಜಲ ಪಾತಾಳ ಸೇರಿಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅಂತರ್ಜಲ ಮಟ್ಟದಲ್ಲಿ ಸುಮಾರು ಏಳು ಅಡಿಗಳಷ್ಟು ಕುಸಿತ ಕಂಡಿದೆ. ಕೃಷಿಗೆ ಆಸರೆಯಾಗಿದ್ದ ಕೊಳವೆ ಬಾವಿಗಳು ಬತ್ತಿಹೋಗುತ್ತಿರುವುದು ರೈತ ಸಮುದಾಯದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಕಳೆದ ವರ್ಷ ಮಳೆ ಕೊರತೆಯಿಂದ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ. ಕೆರೆ-ಕಟ್ಟೆಗಳಿಗೆ ಸಮರ್ಪಕವಾಗಿ ನೀರು ತುಂಬಿಸಲು ಸಾಧ್ಯವಾಗಲಿಲ್ಲ. ಬಿಸಿಲ ತಾಪ ತೀವ್ರಗತಿಯಲ್ಲಿ ಏರಿಕೆಯಾಗಿರುವುದರಿಂದ ಕೆರೆ-ಕಟ್ಟೆಗಳಲ್ಲಿದ್ದ ನೀರೆಲ್ಲವೂ ಬತ್ತಿಹೋಗಿವೆ. ಪರಿಣಾಮ ಅಂತರ್ಜಲದ ಮಟ್ಟವೂ ಗಣನೀಯ ಪ್ರಮಾಣದಲ್ಲಿ ಕುಸಿತಗೊಂಡಿದೆ. ನೀರಿಗೆ ಎಲ್ಲೆಡೆ ಹಾಹಾಕಾರ ಸೃಷ್ಟಿಯಾಗಿದ್ದು ಮಳೆಗಾಗಿ ಜನರು ನಿತ್ಯ ಎದುರುನೋಡುತ್ತಿದ್ದಾರೆ.

ಕೆ.ಆರ್.ಪೇಟೆಯಲ್ಲಿ ಹೆಚ್ಚು ಕುಸಿತ
ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ಅಂತರ್ಜಲದ ಮಟ್ಟ ಅತಿ ಹೆಚ್ಚು ಕುಸಿತ ಕಂಡಿದೆ. ಕಳೆದ ವರ್ಷ 7.02 ಮೀ.ವರೆಗಿದ್ದ ಅಂತರ್ಜಲದ ಮಟ್ಟ ಈ ವರ್ಷ 17.07 ಮೀಟರ್ಗೆ ಇಳಿದಿದೆ. ಶ್ರೀರಂಗಪಟ್ಟಣ ತಾಲೂಕಿನಲ್ಲಿ ಕಡಿಮೆ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಇಳಿಮುಖವಾಗಿದೆ. ಕಳೆದ ವರ್ಷ 2.73 ಮೀ. ಇದ್ದ ಅಂತರ್ಜಲ ಮಟ್ಟ ಈ ಬಾರಿ 3.30 ಮೀ.ಗೆ ಇಳಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಲ್ಲೆಯಲ್ಲಿ ಸರಾಸರಿ 5.76 ಮೀ.ನಿಂಧ 8.15 ಮೀ.ವರೆಗೆ ಅಂತರ್ಜಲ ಕುಸಿತಗೊಂಡಿದೆ. ಸುಮಾರು 2.93 ಮೀ.ನಷ್ಟು ಆಳಕ್ಕೆ ಅಂತರ್ಜಲ ಇಳಿಮುಖವಾಗಿದೆ. ಅಂದರೆ ಸುಮಾರು 7 ಅಡಿಗಳಷ್ಟು ಕುಸಿದಿರುವುದು ಆತಂಕ ಹೆಚ್ಚುವಂತೆ ಮಾಡಿದೆ.
ಕೊಳವೆ ಬಾವಿ ಕೊರೆಸಲು ಮುಂದಾದ ರೈತರು
ಅಂತರ್ಜಲ ಪಾತಾಳ ಸೇರಿದ್ದರೂ ರೈತರು ಮಾತ್ರ ಸುಮ್ಮನೆ ಕೂರುತ್ತಿಲ್ಲ. ಕೊಳವೆ ಬಾವಿಗಳು ಬತ್ತುತ್ತಿರುವ ಬೆನ್ನಲ್ಲೇ ಮತ್ತೊಂದು ಕಡೆ ಕೊಳವೆ ಬಾವಿ ಕೊರೆಸಲು ಮುಗಿಬೀಳುತ್ತಿದ್ದಾರೆ. ಸಾಲ ಮಾಡಿಯಾದರೂ ತೋಟ, ಜಮೀನುಗಳಲ್ಲಿರುವ ಬೆಳೆಗಳನ್ನು ಉಳಿಸಿಕೊಳ್ಳುವುದಕ್ಕೆ ಹೆಣಗಾಡುತ್ತಿದ್ದಾರೆ. ಬರದಲ್ಲೂ ನೀರು ಸಿಗಬಹುದೆಂಬ ಆಶಾಭಾವನೆಯೊಂದಿಗೆ ಬೋರ್ವೆಲ್ಗಳನ್ನು ಕೊರೆಸುತ್ತಿದ್ದಾರೆ.
ಅಂತರ್ಜಲ ಇಲಾಖೆಗೆ ಇದುವರೆಗೆ ಕೊಳವೆ ಬಾವಿ ನಿರ್ಮಾಣಕ್ಕೆ 300 ರಿಂದ 400 ಅರ್ಜಿಗಳು ಸಲ್ಲಿಕೆಯಾಗಿದ್ದರೆ, ಅನಧಿಕೃತವಾಗಿ ನೂರಾರು ಮಂದಿ ರೈತರು ಕೊಳವೆ ಬಾವಿಗಳನ್ನು ಕೊರೆಸುತ್ತಿದ್ದಾರೆ. ಅಡಿಕೆ, ತೆಂಗು, ಬಾಳೆ, ಟೊಮೋಟೋ, ತರಕಾರಿ, ಹೂ ಸೇರಿದಂತೆ ನಾನಾ ರೀತಿಯ ಬೆಳೆಗಳನ್ನು ರಕ್ಷಣೆ ಮಾಡಿಕೊಳ್ಳುವುದಕ್ಕೆ ಕೇವಲ ಮಳೆಯನ್ನೇ ನಂಬಿ ಕೂರದ ರೈತರು ಕೊಳವೆ ಬಾವಿಗಳಿಗೆ ಮೊರೆಹೋಗಿದ್ದಾರೆ. ನೀರು ಸಮೃದ್ಧವಾಗಿ ದೊರೆತಲ್ಲಿ ಹನಿ ನೀರಾವರಿ ಮಾಡಿಕೊಂಡು ಬೆಳೆಗಳನ್ನು ಕಾಪಾಡಿಕೊಳ್ಳುವುದಕ್ಕೆ ಮುತುವರ್ಜಿ ವಹಿಸಿದ್ದಾರೆ.
ಲಕ್ಷ ಲಕ್ಷ ಖರ್ಚು
ಬೋರ್ವೆಲ್ ಏಜೆನ್ಸಿಯವರಿಗಂತೂ ಈಗ ಸುಗ್ಗಿ ಕಾಲ. ಹಗಲು-ರಾತ್ರಿ ಎನ್ನದೆ ನಿರಂತರವಾಗಿ ಕೊಳವೆಬಾವಿ ಕೊರೆಯುವಲ್ಲಿ ನಿರತರಾಗಿದ್ದಾರೆ. ಪ್ರತಿ ಅಡಿಗೆ 110 ರಿಂದ 115 ರವರೆಗೆ ದರ ನಿಗದಿಪಡಿಸಲಾಗಿದೆ. ಒಂದೊಂದು ಹಳ್ಳಿಗೆ ಹೋದರೆ ಮೂರ್ನಾಲ್ಕು ಮಂದಿ ಬೋರ್ವೆಲ್ ಕೊರೆಸಲು ದುಂಬಾಲು ಬೀಳುತ್ತಿದ್ದಾರೆ. ಎಷ್ಟೋ ಮಂದಿ ನಿಗದಿತ ಸಮಯಕ್ಕೆ ಬೋರ್ವೆಲ್ ಲಾರಿಗಳು ಸಿಗದೆ ಪರಿತಪಿಸುತ್ತಿದ್ದಾರೆ.
ಬೋರ್ವೆಲ್ ಏಜೆನ್ಸಿಯವರು ತಾವಿರುವ ಸ್ಥಳದಿಂದ 15-20 ಕಿ.ಮೀ. ವ್ಯಾಪ್ತಿಯಲ್ಲಿ ಬೋರ್ವೆಲ್ಗಳನ್ನು ಕೊರೆದು ಲಕ್ಷಾಂತರ ರೂಪಾಯಿ ಗಳಿಸುತ್ತಿದ್ದಾರೆ. ಮತ್ತೆ ಕೆಲವರು ಸಾವಿರಾರು ಅಡಿ ಆಳಕ್ಕೆ ಕೊರೆಸುವ ಉತ್ತರ ಕರ್ನಾಟಕದ ಭಾಗಕ್ಕೆ ತೆರಳಿ ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಇದರಿಂದ ಮಂಡ್ಯ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಬೋರ್ವೆಲ್ ಲಾರಿಗಳ ಕೊರತೆ ತೀವ್ರವಾಗಿ ಕಾಡುತ್ತಿದ್ದು, ಬೋರ್ವೆಲ್ ನಿರ್ಮಾಣಕ್ಕೆ ಬೇಡಿಕೆ ಹೆಚ್ಚಿದ್ದರೂ, ಸ್ಥಳದಲ್ಲೇ ದುಡ್ಡು ಕೊಡುವುದಕ್ಕೆ ಸಿದ್ಧರಿದ್ದರೂ ಬೋರ್ವೆಲ್ ಏಜೆನ್ಸಿಗಳು ಮಾತ್ರ ರೈತರ ಬೇಡಿಕೆಗೆ ತಕ್ಕಂತೆ ಕೊಳವೆ ಬಾವಿಗಳನ್ನು ನಿರ್ಮಿಸಲಾಗುತ್ತಿಲ್ಲ.
ಕಳೆದ ವರ್ಷ ಸಮರ್ಪಕವಾಗಿ ಮಳೆಯಾಗದಿರುವುದು, ಕೆರೆ-ಕಟ್ಟೆಗಳೆಲ್ಲಾ ಒಣಗಿಹೋಗಿರುವುದು ಅಂತರ್ಜಲ ಮಟ್ಟ ಕುಸಿಯುವುದಕ್ಕೆ ಪ್ರಮುಖ ಕಾರಣವಾಗಿದೆ. ಮಳೆಯಾಗದಿದ್ದರೆ ಅಂತರ್ಜಲ ಇನ್ನಷ್ಟು ತೀವ್ರಗತಿಯಲ್ಲಿ ಕುಸಿಯಲಿದೆ. ಬರ ಪರಿಸ್ಥಿತಿಯಲ್ಲಿ ಕೊಳವೆ ಬಾವಿಗಳ ನಿರ್ಮಿಸಿ ಅಂತರ್ಜಲ ಬಳಕೆಗೆ ರೈತರು ಪೈಪೋಟಿಗಿಳಿದಿದ್ದಾರೆ ಎನ್ನುತ್ತಾರೆ ಜಿಲ್ಲಾ ಅಂತರ್ಜಲ ಇಲಾಖೆ ಹಿರಿಯ ವಿಜ್ಞಾನಿ ರಾಜಶ್ರೀ.
ಒಂದೆರಡು ಹದ ಚನ್ನಾಗಿ ಮಳೆಯಾದರೆ ರೈತರು ಕೊಳವೆಬಾವಿ ಕೊರೆಸುವ ಯೋಜನೆಯನ್ನು ಕೈಬಿಡುತ್ತಾರೆ. ಭರಣಿ ಮಳೆಯಾದರೂ ಜಿಲ್ಲೆಯಲ್ಲಿ ಉತ್ತಮವಾಗಿ ಆದರೆ ಸಾಕು ಎಂದು ರೈತರು ಮುಗಿಲ ಕಡೆ ಮುಖ ಮಾಡಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications