ಕಾವೇರಿ ಕೂಗು-2ನೇ ದಿನಕ್ಕೆ ಕಾಲಿಟ್ಟ ಧರಣಿ: ಅಯ್ಯಯ್ಯೋ ಅನ್ಯಾಯ ಎಂದು ಬಾಯಿ ಬಡಿದುಕೊಂಡ ರೈತರು

ಮಂಡ್ಯ, ಸೆಪ್ಟೆಂಬರ್‌ 01: ತಮಿಳುನಾಡಿಗೆ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಕಾವೇರಿ ನೀರು ನದಿ ಪ್ರಾಧಿಕಾರ ಆದೇಶ ಮಾಡಿರುವುದನ್ನು ವಿರೋಧಿಸಿ ಜಿಲ್ಲಾ ರೈತ ರಕ್ಷಣಾ ಸಮಿತಿ ನಡೆಸುತ್ತಿರುವ ಪ್ರತಿಭಟನಾ ಧರಣಿ ಎರಡನೇ ದಿನವೂ ಮುಂದುವರೆದಿದ್ದು ಬಾಯಿ ಬಡಿದು ಕೊಂಡು ಕಾವೇರಿ ನದಿ ನೀರಿನ ವಿಚಾರದಲ್ಲಿ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿದರು.

ನಗರದ ಸರ್ ಎಂ.ವಿ. ಪ್ರತಿಮೆ ಎದುರು ರೈತರು, ಕನ್ನಡ ಹೋರಾಟಗಾರರು ಸೇರಿ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಅಯ್ಯಯ್ಯೋ ಅನ್ಯಾಯ ಎಂದು ಬಾಯಿ ಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

cauvery-water-release-to-tamil-nadu

ನೀರು ಬಿಡುಗಡೆ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸಂಕಷ್ಟ ಕಾಲದಲ್ಲಿ ಮಧ್ಯ ಪ್ರವೇಶ ಮಾಡದ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಪ್ರತಿಭಟನಾಕಾರರು, ಸಂಸದೆ ಸುಮಲತಾ ಅಂಬರೀಶ್ ಮತ್ತು ಜಿಲ್ಲೆಯ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಮಿಳುನಾಡು ಒತ್ತಡ ತಂತ್ರದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರ ಪ್ರತಿನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಬೇಕೆಂದು ಆದೇಶ ಮಾಡಿರುವುದು ಅವ್ಯೆಜ್ಞಾನಿಕ, ಕಾವೇರಿ ಕೊಳ್ಳದ ಜಲಾಶಯಗಳಿಂದ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ತಮಿಳುನಾಡಿಗೆ 13 ಟಿಎಂಸಿ ನೀರು ಹರಿದುಹೋಗಿದೆ. ಇದೀಗ 7 ಟಿಎಂಸಿ ನೀರನ್ನು ಹರಿಸಲಾಗುತ್ತಿದೆ. ಜಲಾಶಯದಲ್ಲಿ ನೀರಿನ ಪ್ರಮಾಣ ದಿನೇ ದಿನೇ ಕುಸಿತ ಕಾಣುತ್ತಿದ್ದು ಇದೇ ಪರಿಸ್ಥಿತಿ ಮುಂದುವರೆದರೆ ಬೆಳೆದು ನಿಂತಿರುವ ಬೆಳೆ ರಕ್ಷಣೆಗೆ ನೀರು ಬಿಡುವುದಿರಲಿ. ಕುಡಿಯುವ ನೀರು ಇಲ್ಲದಂತಾಗುತ್ತದೆ, ರಾಜ್ಯ ಕಾಂಗ್ರೆಸ್ ಸರ್ಕಾರದ ಕನ್ನಡಿಗರ ಬಗ್ಗೆಗಿನ ಆಲಸ್ಯ ಮತ್ತು ತಮಿಳುನಾಡು ಒಲೈಕೆಯ ಧೋರಣೆಯಿಂದ ಕರ್ನಾಟಕ ರಾಜ್ಯದ ರೈತರ ಬಲಿಪಶು ಆಗುತ್ತಿದ್ದಾರೆ ಎಂದು ಆರೋಪಿಸಿದರು.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಕೆ.ಟಿ. ಶ್ರೀಕಂಠೇಗೌಡ, ಸುನಂದಾ ಜಯರಾಂ, ಬೇಕ್ರಿ ರಮೇಶ್, ಕೆ ಬೋರಯ್ಯ, ಕೀಲಾರ ಕೃಷ್ಣ, ಕನ್ನಡ ಸೇನೆ ಮಂಜುನಾಥ್, ಜಯ ಕರ್ನಾಟಕ ಯೋಗಣ್ಣ, ರೈತ ಸಂಘದ ಇಂಡುವಾಳು ಚಂದ್ರಶೇಖರ್.ಎಂ.ಎಲ್. ತುಳಸೀದರ್, ಇಂಡುವಾಳು ಬಸವರಾಜ್, ಕರವೇ ಅಧ್ಯಕ್ಷ ಕೆ.ಟಿ. ಶಂಕರೇಗೌಡ ನೇತೃತ್ವ ವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+