ಬ್ಯಾಂಕ್ ಬರೋಡಾ ವಿರುದ್ಧ ಮಂಡ್ಯ ರೈತರ ಪ್ರತಿಭಟನೆ
ಮಂಡ್ಯ, ಡಿಸೆಂಬರ್ 6: ಸರ್ಕಾರದ ವಿವಿಧ ಯೋಜನೆಯ ಫಲಾನುಭವಿಗಳ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಬಾಕಿ ಸಾಲಕ್ಕೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಆಫ್ ಬರೋಡದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ನಗರದ ನೂರಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿ ಬ್ಯಾಂಕಿನ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬ್ಯಾಂಕ್ ಆಫ್ ಬರೋಡಾ ಶಾಖೆಗಳಲ್ಲಿ ರೈತರು ಪಡೆದಿರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿರುವ ಕಿಸಾನ್ ಸಮ್ಮನ್, ಹಾಲಿನ ಪ್ರೋತ್ಸಾಹಧನ, ವಿಧವಾ ವೇತನ, ವೃದ್ದಾಪ್ಯವೇತನ, ಅಂಗವಿಕಲರ ವೇತನ, ನರೇಗಾ ಕೂಲಿ, ಅನ್ನಭಾಗ್ಯ, ಸಾಮಾಜಿಕ ಭದ್ರತಾ ಯೋಜನೆ ಮೊಬಲಗನ್ನು ಬ್ಯಾಂಕ್ ಅಧಿಕಾರಿಗಳು ಬಾಕಿ ಇರುವ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಈ ಹಣವನ್ನು ಫಲಾನುಭವಿಗಳ ಖಾತೆಗೆ ಮರು ಜಮಾಪಡಿಸಬೇಕು. ಫಲಾನುಭವಿಗಳ ಒಪ್ಪಿಗೆ ಇಲ್ಲದೆ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಸಿದರು.
ಅಡಮಾನ ಇರಿಸಿರುವ ಚಿನ್ನಾಭರಣ ಬಿಡಿಸಿಕೊಳ್ಳಲು ಸಾಲಗಾರರು ಹೋದಾಗ ಹಣ ಪಾವತಿಸಿದ ನಂತರ ಸಾಲ ಬಾಕಿ ಇರುವುದರಿಂದ ಸಾಲ ಮರುಪಾವತಿಸಿದ ಮೇಲೆ ಆಭರಣ ಕೊಡುವುದಾಗಿ ಅಧಿಕಾರಿಗಳ ಧೋರಣೆ ಖಂಡನೀಯ, ಒಂದು ಸಾಲಕ್ಕೂ, ಮತ್ತೊಂದು ಸಾಲಕ್ಕೂ ಜೋಡಣೆ ಮಾಡದೆ ಸಾಲ ಮರುಪಾವತಿಸಿದವರಿಗೆ ಆಭರಣಗಳನ್ನು ನೀಡುವಂತೆ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯ ಎಲ್ಲಾ ತಾಲೂಕು ಬರಪೀಡಿತ ಪ್ರದೇಶ ಎಂದು ಸರ್ಕಾರಘೋಷಣೆ ಮಾಡಿರುವ ಹಿನ್ನಲೆಯಲ್ಲಿ ರೈತರು ಪಡೆದಿರುವ ಯಾವುದೇ ತರಹದ ಸಾಲಗಳಿಗೆ ಬಡ್ಡಿ ಹಾಕುವುದನ್ನು ನಿಲ್ಲಿಸಬೇಕು. ಮುಂದಿನ ಎರಡು ವರ್ಷಗಳವರೆಗೆ ಸಾಲ ವಸೂಲಿ ಅಡಮಾನ ಚಿನ್ನ ಬಿಡಿಸಿಕೊಳ್ಳುವಂತೆ, ಹಾಗೂ ಹರಾಜು ಮಾಡುತ್ತೇವೆ ಎಂದು ನೋಟೀಸ್ ನೀಡಬಾರದು. ಬಲವಂತದ ಸಾಲ ವಸೂಲಿ, ಹರಾಜು ಪ್ರಕ್ರಿಯೆ ಬ್ಯಾಂಕ್ ಶಾಖೆಗಳಲ್ಲಿ ಕಂಡುಬಂದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ತಗ್ಗಹಳ್ಳಿ ಪ್ರಸನ್ನ, ಲಿಂಗಪ್ಪಾಜಿ, ಟಿ.ಡಿ. ರಮೇಶ್, ಚಂದ್ರಶೇಖರ್, ಲತಾ ಶಂಕರ್, ವಿಜಯಕುಮಾರ್, ರವಿಕುಮಾರ್, ಬೊಮ್ಮೇಗೌಡ, ರಾಜೇಗೌಡ ವಂಸತ, ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications