KRS Dam: ನಾಲೆಗಳಿಗೆ ನೀರು ಹರಿಸಲು ಒತ್ತಾಯಿಸಿ ರೈತರ ಪ್ರತಿಭಟನೆ
ಕೆಆರ್ಎಸ್ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲಾ ನಾಲೆಗಳಿಗೂ ತಕ್ಷಣವೇ ನೀರು ಹರಿಸುವಂತೆ ಒತ್ತಾಯಿಸಿ ಭೂಮಿತಾಯಿ ಹೊರಾಟ ಸಮಿತಿ ಸದಸ್ಯರು ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಮಂಡ್ಯ ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯ ಕುವೆಂಪು ವೃತ್ತದಲ್ಲಿ ರೈತ ಮುಖಂಡ ಕೆ.ಎಸ್ ನಂಜುಡೇಗೌಡ ನೇತೃತ್ವದಲ್ಲಿ ಭೂಮಿತಾಯಿ ಹೋರಾಟ ಸಮಿತಿ ಸದಸ್ಯರು ಹಾಗೂ ರೈತರು ಜಮಾಯಿಸಿ, ಸರ್ಕಾರ ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಕೆಎಸ್ ನಂಜುಂಡೇಗೌಡ ಮಾತನಾಡಿ, ಜಲಾಶಯದಲ್ಲಿ ಇರುವ ನೀರನ್ನು ತಮಿಳುನಾಡು ಹಿತ ಕಾಯಲು ನದಿ ಮೂಲಕ ನೀರು ಹರಿಸಿದ ಸರ್ಕಾರ, ಮಂಡ್ಯ ಜಿಲ್ಲೆಯ ರೈತರಿಗೆ ಬೇಸಿಗೆ ಹಂಗಾಮು ಬೆಳೆಗೂ ನೀರು ಕೊಡದೆ, ಇದೀಗ ಮುಂಗಾರು ಬೆಳೆಗೆ ಬಿತ್ತನೆ ಬೀಜ ಹಾಕಿ ಬೆಳೆ ಬೆಳೆಯಲು ರೈತರನ್ನು ದಿಕ್ಕೆಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ನೀರಾವರಿ ಸಚಿವರು ಸೇರಿದಂತೆ ಸರ್ಕಾರದ ಮಂತ್ರಿಗಳು ಮಂಡ್ಯ ಜಿಲ್ಲೆಯ ರೈತರಿಗೆ ನೀರು ಹರಿಸದೆ ಬರಡು ಭೂಮಿ ಮಾಡಿ ಸೇಡಿನ ರಾಜಕಾರಣ ಮಾಡಿ, ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವಂತೆ ಮಾಡುತ್ತಿದ್ದಾರೆ. ಸರ್ಕಾರ ಮೂರು ದಿನಗಳಲ್ಲಿ ನಾಲೆಗಳಿಗೆ ನೀರು ಹರಿಸಬೇಕು, ಇಲ್ಲದಿದ್ದರೆ ರೈತ ಕುಟುಂಬಗಳ ಜೊತೆ ಜನ-ಜಾನುವಾರುಗಳನ್ನು ರಸ್ತೆಗಿಳಿಸಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರಸ್ತುತ ಕೆಆರ್ಎಸ್ ಅಣೆಕಟ್ಟೆಯಲ್ಲಿ 87 ಅಡಿ ನೀರಿದ್ದು ನಾಲೆಗಳಿಗೆ ನೀರು ಹರಿಸಿ, ಮುಂಗಾರು ಬೆಳೆಗೆ ಬಿತ್ತನೆ ಬೀಜ ಹಾಕಲು ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಭೂಮಿತಾಯಿ ಹೋರಾಟ ಸಮಿತಿ ಅದ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ಸರ್ಕಾರವನ್ನು ಒತ್ತಾಯಿಸಿದರು.
ಕೆಆರ್ ಎಸ್ ಒಳಹರಿವು ಎಷ್ಟಿದೆ?
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕುಗೊಳ್ಳುತ್ತಿದ್ದು ಒಳಹರಿವು ನಿಧಾನವಾಗಿ ಹೆಚ್ಚಾಗುತ್ತಿದೆ. ಹಾರಂಗಿ ಜಲಾಶಯದ ಒಳಹರಿವು 378 ಕ್ಯೂಸೆಕ್ಸ್ ಇದ್ದು 200 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. 8.50 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 3.30 ಟಿಎಂಸಿ ಅಡಿ ನೀರು ಸಂಗ್ರಹವಿದೆ.
ಹೇಮಾವತಿ ಜಲಾಶಯಕ್ಕೆ 1233 ಕ್ಯೂಸೆಕ್ಸ್ ನೀರು ಹರಿದುಬರುತ್ತಿದ್ದು, 250 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. 37.10 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 10.98 ಟಿಎಂಸಿ ನೀರು ಸಂಗ್ರಹವಾಗಿದೆ.
ಕೆಆರ್ ಎಸ್ ಜಲಾಶಯದ ಒಳಹರಿವು 1279 ಕ್ಯೂಸೆಕ್ಸ್ ಇದ್ದು 984 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ. ಕೆಆರ್ ಎಸ್ ಒಟ್ಟು ಸಂಗ್ರಹ ಸಾಮರ್ಥ್ಯ 49.45 ಟಿಎಂಸಿ ಆಗಿದ್ದು, 14.59 ಟಿಎಂಸಿ ನೀರು ಸಂಗ್ರಹವಾಗಿದೆ.
ಕಬಿನಿ ಜಲಾಶಯದ ಒಳಹರಿವು 2008 ಕ್ಯೂಸೆಕ್ಸ್ ಇದ್ದು, 1000 ಕ್ಯೂಸೆಕ್ಸ್ ನೀರು ಹೊರಬಿಡಲಾಗುತ್ತಿದೆ. 9.10 ಟಿಎಂಸಿ ನೀರು ಸಂಗ್ರಹದಲ್ಲಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications