ಸ್ಪೇನ್ ಹುಡುಗನ ಕೈ ಹಿಡಿದ ಮಂಡ್ಯ ಯುವತಿ
ಪ್ರೀತಿಗೆ ಯಾವುದೇ ಜಾತಿ, ಗಡಿ, ಭಾಷೆಯ ಹಂಗಿಲ್ಲ, ಎಲ್ಲಿಯ ಮಂಡ್ಯ, ಎಲ್ಲಿಯ ಸ್ಪೇನ್. ಮಂಡ್ಯದ ಯುವತಿಯನ್ನು ಸ್ಪೇನ್ನ ಯುವಕನೊಬ್ಬ ಮದುವೆಯಾಗಿದ್ದಾನೆ. ಕೆ.ಆರ್.ಪೇಟೆ ಪಟ್ಟಣದ ನಂಜಮ್ಮ ಮುದ್ದೇಗೌಡ ಸಮುದಾಯ ಭವನದಲ್ಲಿ ಜಾನ್ವೈಡಲ್ ಮತ್ತು ಬಿ.ಆರ್.ದೀಕ್ಷಿತಾ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಕೆ.ಆರ್.ಪೇಟೆ ಪಟ್ಟಣದ ಶಮಂತ್ ಟೆಕ್ಸ್ಟೈಲ್ಸ್ ಮಾಲೀಕರಾದ ರವೀಂದ್ರನಾಥ್ ಅವರ ಪುತ್ರಿ ದೀಕ್ಷಿತಾ ಕೊಯಮತ್ತೂರಿನ ಈಶಾ ಫೌಂಡೇಶನ್ನಲ್ಲಿ ಯೋಗ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಾಗ ಸ್ಪೇನ್ ದೇಶದ ಬಾರ್ಸಿಲೋನ ನಗರದ ಯುವಕ ಜಾನ್ವೈಡಲ್ ಪರಿಚಯವಾಗಿ, ಪರಿಚಯ ಪ್ರೇಮಕ್ಕೆ ತಿರುಗಿತ್ತು.

ಇಶಾ ಫೌಂಡೇಶನ್ ಮುಖ್ಯಸ್ಥರಾದ ಸದ್ಗುರು ಜಗ್ಗಿವಾಸುದೇವ್ ಅವರ ಮೂಲಕ ಎರಡೂ ಕುಟುಂಬಗಳ ಮನವೊಲಿಸಿದ ಪರಿಣಾಮವಾಗಿ ಸೋಮವಾರ ಕೆ.ಆರ್.ಪೇಟೆ ಪಟ್ಟಣದಲ್ಲಿ ಸಂಪ್ರದಾಯ ಬದ್ದವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಕುಟುಂಬ ಸದಸ್ಯರ ಸಮ್ಮುಖದಲ್ಲಿ ಮದುವೆ
ವರ ಜಾನ್ವೈಡಲ್ ತಂದೆತಾಯಿಗಳು, ಸಹೋದರ, ಸಹೋದರಿ ಸೇರಿದಂತೆ ವಧುವಿನ ತಂದೆ-ತಾಯಿಗಳು, ಬಂಧುಗಳು, ಹಾಗೂ ಸ್ನೇಹಿತರ ಸಮಕ್ಷಮದಲ್ಲಿ ವಿದೇಶಿ ವರನೊಂದಿಗೆ ಕನ್ನಡದ ಹುಡುಗಿ ಕೆ.ಆರ್.ಪೇಟೆಯ ಹುಡುಗಿ ಧೀಕ್ಷಿತಾ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಜಾನ್ವೈಡಲ್ ತುಂಬಾ ಒಳ್ಳೆಯ ಹುಡುಗ ನಾನೇ ಹುಡುಕಿದ್ದರೂ ನನ್ನ ಮಗಳಿಗೆ ಇಂತಹ ಒಳ್ಳೆಯ ಸಂಬಂಧವನ್ನು ಹುಡುಕಲು ಸಾಧ್ಯವಾಗುತ್ತಿರಲಿಲ್ಲ. ಎಲ್ಲಾ ದೈವೇಚ್ಚೆ ಮಗಳ ಆಸೆಗೆ ಪ್ರೋತ್ಸಾಹ ನೀಡಿ ಮದುವೆ ಮಾಡಿಕೊಟ್ಟಿದ್ದೇವೆ ಎನ್ನುತ್ತಾರೆ ದೀಕ್ಷಿತಾ ತಂದೆ ರವೀಂದ್ರ ನಾಥ್.
ಮಗ ಅಳಿಯ ಇಬ್ಬರೂ ಈಶಾ ಫೌಂಡೇಶನ್ನಲ್ಲಿ ಯೋಗ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾರೆ. ಸದ್ಗುರುಗಳ ಆಶೀರ್ವಾದವಿದೆ. ಒಬ್ಬರನ್ನೊಬ್ಬರು ಚೆನ್ನಾಗಿ ಅರ್ಥಮಾಡಿಕೊಂಡು ಸಂತೋಷದಿಂದ ಜೀವನ ನಡೆಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಯೋಗದ ಜೊತೆ ಪ್ರೇಮಯೋಗ
ಈಶಾ ಫೌಂಡೇಶನ್ಗೆ ಯೋಗ ಕಲಿಯಲು ಬಂದ ಜಾನ್ವೈಡಲ್ ಮೇಲೆ ಪ್ರೀತಿಯಾಯಿತು ನಮ್ಮ ಪ್ರೀತಿಗೆ ಎರಡೂ ಕುಟುಂಬಗಳು ಒಪ್ಪಿಗೆ ನೀಡಿದ್ದು ನಮಗೆ ಸಂತೋಷವಾಗಿದೆ. ಜಾನ್ ಕೂಡಾ ಕನ್ನಡ ಕಲಿಯುತ್ತಿದ್ದಾರೆ. ನಮ್ಮ ಭಾಷೆ ಅವರಿಗೆ ಚೆನ್ನಾಗಿ ಅರ್ಥವಾಗತ್ತೆ. ನಾನು ಸ್ಪೇನೀಶ್ ಭಾಷೆ ಕಲಿತಿದ್ದೇನೆ. ನಮ್ಮಿಬ್ಬರಲ್ಲಿ ಸಾಮರಸ್ಯವಿದೆ, ಪ್ರೀತಿಯಿದೆ ಇಬ್ಬರೂ ಚೆನ್ನಾಗಿ ಜೀವನ ನಡೆಸಿ ಸಾಧಿಸಿ ತೋರಿಸುತ್ತೇವೆ ಎಂದು ದೀಕ್ಷಿತಾ ಹೇಳಿದರು.
ವಿದೇಶಿ ಹುಡುಗನೊಂದಿಗೆ ನಡೆದ ಕನ್ನಡದ ಹುಡುಗಿಯ ಮದುವೆಯ ಸಂಭ್ರಮದಲ್ಲಿ ಸಾವಿರಾರು ಜನರು, ಬಂಧುಗಳು, ಸ್ನೇಹಿತರು, ವಿಶ್ವಾಸಿಗಳು ಭಾಗವಹಿಸಿ ಶುಭ ಹಾರೈಸಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications