ಮಂಡ್ಯ ಜೆಡಿಎಸ್ ಅಭ್ಯರ್ಥಿ: ಶಿವರಾಮೇಗೌಡರ ಪತ್ನಿಯ ಆಸ್ತಿಯೇ ಹೆಚ್ಚು
Recommended Video

ಮಂಡ್ಯ, ಅಕ್ಟೋಬರ್ 16: ಮಂಡ್ಯ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಲ್.ಆರ್. ಶಿವರಾಮೇಗೌಡ ಸೋಮವಾರ ನಾಮಪತ್ರ ಹಾಗೂ ಆಸ್ತಿ ವಿವರ ಸಲ್ಲಿಸಿದರು.
ಮಾಜಿ ಶಾಸಕರೂ ಆಗಿರುವ ಶಿವರಾಮೇಗೌಡ 60 ಕೋಟಿ ಆಸ್ತಿ ಹೊಂದಿರುವುದಾಗಿ ಪ್ರಮಾಣಪತ್ರದಲ್ಲಿ ತಿಳಿಸಿದ್ದು, ಅದರಲ್ಲಿ 40 ಕೋಟಿ ರೂಪಾಯಿ ಆಸ್ತಿ ಅವರ ಪತ್ನಿಯ ಹೆಸರಿನಲ್ಲಿಯೇ ಇದೆ.
ಮಂಡ್ಯ ಲೋಕಸಭೆ ಕ್ಷೇತ್ರವು ಜೆಡಿಎಸ್ ನಾಯಕ ಸಿ.ಎಸ್. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿತ್ತು. ಸಂಸತ್ ಸದಸ್ಯರಾಗಿದ್ದ ಪುಟ್ಟರಾಜು ವಿಧಾನಸಭೆ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಗೆದ್ದು, ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ.
ವಿಧಾನಸಭೆಗೆ ಆಯ್ಕೆಯಾದ ಬಳಿಕ ಅವರ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಯನ್ನು ಇಳಿಸುವ ಬಗ್ಗೆ ಗೊಂದಲಗಳಿದ್ದವು. ಅಲ್ಲದೆ, ಜೆಡಿಎಸ್ನಲ್ಲಿಯೂ ಲಕ್ಷ್ಮಿ ಅಶ್ವಿನ್ ಗೌಡ ಮತ್ತು ಶಿವರಾಮೇಗೌಡ ಅವರ ನಡುವೆ ಪೈಪೋಟಿ ಇತ್ತು. ಅಂತಿಮವಾಗಿ ಶಿವರಾಮೇಗೌಡ ಅವರನ್ನು ಆಯ್ಕೆ ಮಾಡಿದ್ದು, ಅವರು ಸೋಮವಾರ ನಾಮಪತ್ರ ಸಲ್ಲಿಸಿದರು.

ಇಬ್ಬರ ಬಳಿ ಆರು ಕಾರುಗಳು
ಶಿವರಾಮೇಗೌಡ ಮತ್ತು ಅವರ ಪತ್ನಿ ಸುಧಾ ತಲಾ ಮೂರು ಕಾರುಗಳನ್ನು ಹೊಂದಿದ್ದು, ಇವುಗಳ ಮೌಲ್ಯ 50 ಲಕ್ಷ ರೂ. ಮಾರುತಿ ಸ್ವಿಫ್ಟ್, ಇನ್ನೋವಾ ಮತ್ತು ಸ್ಕಾರ್ಪಿಯೋ ಕಾರುಗಳು ಶಿವರಾಮೇಗೌಡ ಅವರ ಬಳಿ ಇವೆ. ಸುಧಾರ ಅವರ ಬಳಿ ಡಸ್ಟರ್, ಇಕೋಸ್ಪೋರ್ಟ್ಸ್, ನಿಸ್ಸಾನ್ ಕಾರುಗಳಿವೆ.
ಶಿವರಾಮೇಗೌಡ ಅವರ ಬಳಿ 3.5 ಲಕ್ಷ ರೂ ಮೌಲ್ಯದ 112 ಗ್ರಾಂ. ಚಿನ್ನವಿದ್ದರೆ, ಅವರ ಪತ್ನಿ ಹೆಸರಿನಲ್ಲಿ 35 ಲಕ್ಷ ರೂ. ಮೌಲ್ಯದ 1.12 ಕೆ.ಜಿ. ಚಿನ್ನವಿದೆ ಎಂದು ತೋರಿಸಿದ್ದಾರೆ.

ಏಳು ಲಕ್ಷ ರೂ. ಆದಾಯ
ಶಿವರಾಮೇಗೌಡ ಏಳು ಲಕ್ಷ ರೂ. ಆದಾಯ ಹೊಂದಿರುವುದಾಗಿ ಹೇಳಿಕೊಂಡಿದ್ದಾರೆ. ಅವರ ಪತ್ನಿಗೆ 21 ಲಕ್ಷ ರೂ ಆದಾಯವಿದೆ. ಇಬ್ಬರ ಕೈಯಲ್ಲಿಯೂ ಇರುವ ನಗದು ಹಣ 1.50 ಲಕ್ಷ ರೂ. ಮಾತ್ರ. ವಿವಿಧೆಡೆ 30 ಕೋಟಿ ರೂ. ಹೂಡಿಕೆ ಮಾಡಿದ್ದಾರೆ. 9 ಕೋಟಿ ರೂ. ಮೌಲ್ಯದ ಎರಡು ಮನೆಗಳಿವೆ. ಪತ್ನಿ ಸುಧಾ ಅವರ ಹೆಸರಿನಲ್ಲಿ 7.5 ಕೋಟಿ ಮೌಲ್ಯದ ಮನೆ ಇದೆ.

30 ಲಕ್ಷ ರೂ ಸಾಲ
15 ಕೋಟಿ ರೂ ಬೆಲೆಬಾಳುವ ಕೃಷಿ ಜಮೀನನ್ನು ಶಿವರಾಮೇಗೌಡ ಹೊಂದಿದ್ದಾರೆ. 30 ಲಕ್ಷ ರೂ ಸಾಲ ಇರುವುದಾಗಿ ಅವರು ಹೇಳಿಕೊಂಡಿದ್ದಾರೆ. ಸುಧಾ ಅವರ ಹೆಸರಿನಲ್ಲಿ 24 ಲಕ್ಷ ರೂ. ಸಾಲವಿದೆ. 2018-19ನೇ ಸಾಲಿನಲ್ಲಿ ಶಿವರಾಮೇಗೌಡ 7 ಲಕ್ಷ ರೂ. ತೆರಿಗೆ ಪಾವತಿಸಿದ್ದರೆ, ಸುಧಾ 20 ಲಕ್ಷ ರೂ. ತೆರಿಗೆ ಪಾವತಿ ಮಾಡಿದ್ದಾರೆ.
ಶಿವರಾಮೇಗೌಡ ವಿರುದ್ಧ ಐದು ಕ್ರಿಮಿನಲ್ ಮೊಕದ್ದಮೆಗಳು ವಿಚಾರಣೆ ಹಂತದಲ್ಲಿವೆ.

ಲಕ್ಷ್ಮಿಗೆ ಟಿಕೆಟ್ ಕೈತಪ್ಪಿಸಿದ್ದೇಕೆ?
ಮಂಡ್ಯ ಲೋಕಸಭೆ ಉಪಚುನಾವಣೆಗೆ ಜೆಡಿಎಸ್ನಿಂದ ಲಕ್ಷ್ಮಿ ಅಶ್ವಿನ್ ಗೌಡ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. ಇದೇ ಸಮಯಕ್ಕೆ ಮಾಜಿ ಶಾಸಕ ಎಲ್. ಆರ್. ಶಿವರಾಮೇಗೌಡ ಅವರೂ ಕಣಕ್ಕಿಳಿಯುವ ಆಸಕ್ತಿ ತೋರಿಸಿದ್ದರು. ಆದರೆ, ದೇವೇಗೌಡರ ನೇತೃತ್ವದಲ್ಲಿ ಸತತ ಸಮಾಲೋಚನೆ ನಡೆಸಿದ ನಾಯಕರು ಲಕ್ಷ್ಮಿ ಅವರ ಬದಲು ಶಿವರಾಮೇಗೌಡ ಅವರಿಗೆ ಟಿಕೆಟ್ ನೀಡಲು ನಿರ್ಧರಿಸಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಿಂದ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಲಕ್ಷ್ಮಿ ಅವರಿಗೆ ಈ ಬಾರಿ ಟಿಕೆಟ್ ನೀಡಿದರೆ, ಮುಂದಿನ ಚುನಾವಣೆಯಲ್ಲಿ ನಿಖಿಲ್ ಅವರಿಗೆ ಸ್ಥಾನ ಬಿಟ್ಟುಕೊಡುವಂತೆ ಅವರ ಮನವೊಲಿಸುವುದು ಕಷ್ಟ. ಶಿವರಾಮೇಗೌಡ ಅವರ ಮನವೊಲಿಸುವುದು ಸುಲಭ. ಹೀಗಾಗಿ ಈ ಚುನಾವಣೆಯಲ್ಲಿ ಲಕ್ಷ್ಮಿ ಅವರ ಬದಲು ಶಿವರಾಮೇಗೌಡ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಯಿತು ಎನ್ನಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications