Mandya Lok Sabha Constituency: ಮಂಡ್ಯ ಚುನಾವಣಾ ಕಣದಲ್ಲಿನ ಫೈನಲ್ ಅಭ್ಯರ್ಥಿಗಳು ಇವರೇ ನೋಡಿ
ಬೆಂಗಳೂರು, ಏಪ್ರಿಲ್. 10: ಲೋಕಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಅಭ್ಯರ್ಥಿಗಳು ಚುನಾವಣಾ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಇದೇ ವೇಳೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯ ಕಣದಲ್ಲಿ ಉಳಿದವರೆಷ್ಟು ಎಂಬುದನ್ನು ತಿಳಿಯೋಣ.
ರಾಜ್ಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು. ಈ 27 ಮಂದಿ ಅಭ್ಯರ್ಥಿಗಳಲ್ಲಿ 08 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿದೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾದ ಏಪ್ರಿಲ್ 08 ರಂದು 05 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿದ್ದಾರೆ.

ಲೋಕಸಭಾ ಚುನಾಣ ಕಣದಲ್ಲಿ ಇರುವವರೇಷ್ಟು...? ಅಭ್ಯರ್ಥಿಗಳು ಯಾರು ಎಂಬ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಚಿಕ್ಕನಂಜಾಚಾರಿ, ಕೆ. ಶಿವಾನಂದ, ಲೋಲ, ಯೋಗೇಶ್ ಮತ್ತು ಶಿವನಂಜಪ್ಪ ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ಸು ಪಡೆದಿದ್ದಾರೆ. ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳಿದ್ದಾರೆ.

ಅಂತಿಮ ಕಣದಲ್ಲಿರುವ 14 ಅಭ್ಯರ್ಥಿಗಳ ವಿವರ ಹೀಗಿದೆ
| ಕ್ರಮ ಸಂಖ್ಯೆ | ಅಭ್ಯರ್ಥಿಯ ಹೆಸರು | ಪಕ್ಷ |
| 1 | ಎಚ್.ಡಿ.ಕುಮಾರಸ್ವಾಮಿ | ಜನತಾದಳ (ಜಾತ್ಯಾತೀತ) |
| 2 | ವೆಂಕಟರಮಣೇಗೌಡ | ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ |
| 3 | ಶಿವಶಂಕರ್.ಎಸ್ | ಬಹುಜನ ಸಮಾಜ ಪಕ್ಷ |
| 4 | ಚಂದ್ರಶೇಖರ ಕೆ.ಆರ್ | ಕರ್ನಾಟಕ ರಾಷ್ಟ್ರ ಸಮಿತಿ |
| 5 | ಬೂದಯ್ಯ | ಕರುನಾಡ ಪಾರ್ಟಿ |
| 6 | ಹೆಚ್.ಡಿ.ರೇವಣ್ಣ | ಪೂರ್ವಾಂಚಲ್ ಮಹಾ ಪಂಚಾಯತ್ ಪಾರ್ಟಿ |
| 7 | ಲೋಕೇಶ್ ಎಸ್ | ಉತ್ತಮ ಪ್ರಜಾಕೀಯ ಪಕ್ಷ |
| 8 | ಎಸ್ ಅರವಿಂದ್ | ಪಕ್ಷೇತರ |
| 9 | ಚನ್ನಮಾಯಿಗೌಡ | ಪಕ್ಷೇತರ |
| 10 | ಚಂದನ್ ಗೌಡ ಕೆ | ಪಕ್ಷೇತರ |
| 11 | ಎನ್.ಬಸವರಾಜು | ಪಕ್ಷೇತರ |
| 12 | ಬೀರೇಶ್ ಸಿ ಟಿ | ಪಕ್ಷೇತರ |
| 13 | ರಾಮಯ್ಯ.ಡಿ | ಪಕ್ಷೇತರ |
| 14 | ರಂಜಿತ ಎನ್ | ಪಕ್ಷೇತರ |
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊದಲನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications