Mandya Lok Sabha Constituency: ಮಂಡ್ಯ ಚುನಾವಣಾ ಕಣದಲ್ಲಿನ ಫೈನಲ್ ಅಭ್ಯರ್ಥಿಗಳು ಇವರೇ ನೋಡಿ
ಬೆಂಗಳೂರು, ಏಪ್ರಿಲ್. 10: ಲೋಕಸಭಾ ಚುನಾವಣೆ ಇನ್ನೇನು ಹತ್ತಿರ ಬರುತ್ತಿದೆ. ರಾಜಕೀಯ ಪಕ್ಷಗಳು ಪ್ರಚಾರದಲ್ಲಿ ತೊಡಗಿಕೊಂಡಿವೆ. ಅಭ್ಯರ್ಥಿಗಳು ಚುನಾವಣಾ ಹೋರಾಟಕ್ಕೆ ಸಿದ್ಧರಾಗಿದ್ದಾರೆ. ಇದೇ ವೇಳೆ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಗಳು ನಾಮಪತ್ರ ಹಿಂಪಡೆದಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯ ಕಣದಲ್ಲಿ ಉಳಿದವರೆಷ್ಟು ಎಂಬುದನ್ನು ತಿಳಿಯೋಣ.
ರಾಜ್ಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಒಟ್ಟು 27 ಅಭ್ಯರ್ಥಿಗಳು ನಾಮಪತ್ರವನ್ನು ಸಲ್ಲಿಸಿದ್ದರು. ಈ 27 ಮಂದಿ ಅಭ್ಯರ್ಥಿಗಳಲ್ಲಿ 08 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತವಾಗಿದೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನಾಂಕವಾದ ಏಪ್ರಿಲ್ 08 ರಂದು 05 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂಪಡೆದಿದ್ದಾರೆ.

ಲೋಕಸಭಾ ಚುನಾಣ ಕಣದಲ್ಲಿ ಇರುವವರೇಷ್ಟು...? ಅಭ್ಯರ್ಥಿಗಳು ಯಾರು ಎಂಬ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದ್ದಾರೆ. ಈ ಹಿಂದೆ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದ ಚಿಕ್ಕನಂಜಾಚಾರಿ, ಕೆ. ಶಿವಾನಂದ, ಲೋಲ, ಯೋಗೇಶ್ ಮತ್ತು ಶಿವನಂಜಪ್ಪ ಅಭ್ಯರ್ಥಿಗಳು ನಾಮಪತ್ರಗಳನ್ನು ವಾಪಸ್ಸು ಪಡೆದಿದ್ದಾರೆ. ಅಂತಿಮ ಕಣದಲ್ಲಿ 14 ಅಭ್ಯರ್ಥಿಗಳಿದ್ದಾರೆ.

ಅಂತಿಮ ಕಣದಲ್ಲಿರುವ 14 ಅಭ್ಯರ್ಥಿಗಳ ವಿವರ ಹೀಗಿದೆ
| ಕ್ರಮ ಸಂಖ್ಯೆ | ಅಭ್ಯರ್ಥಿಯ ಹೆಸರು | ಪಕ್ಷ |
| 1 | ಎಚ್.ಡಿ.ಕುಮಾರಸ್ವಾಮಿ | ಜನತಾದಳ (ಜಾತ್ಯಾತೀತ) |
| 2 | ವೆಂಕಟರಮಣೇಗೌಡ | ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ |
| 3 | ಶಿವಶಂಕರ್.ಎಸ್ | ಬಹುಜನ ಸಮಾಜ ಪಕ್ಷ |
| 4 | ಚಂದ್ರಶೇಖರ ಕೆ.ಆರ್ | ಕರ್ನಾಟಕ ರಾಷ್ಟ್ರ ಸಮಿತಿ |
| 5 | ಬೂದಯ್ಯ | ಕರುನಾಡ ಪಾರ್ಟಿ |
| 6 | ಹೆಚ್.ಡಿ.ರೇವಣ್ಣ | ಪೂರ್ವಾಂಚಲ್ ಮಹಾ ಪಂಚಾಯತ್ ಪಾರ್ಟಿ |
| 7 | ಲೋಕೇಶ್ ಎಸ್ | ಉತ್ತಮ ಪ್ರಜಾಕೀಯ ಪಕ್ಷ |
| 8 | ಎಸ್ ಅರವಿಂದ್ | ಪಕ್ಷೇತರ |
| 9 | ಚನ್ನಮಾಯಿಗೌಡ | ಪಕ್ಷೇತರ |
| 10 | ಚಂದನ್ ಗೌಡ ಕೆ | ಪಕ್ಷೇತರ |
| 11 | ಎನ್.ಬಸವರಾಜು | ಪಕ್ಷೇತರ |
| 12 | ಬೀರೇಶ್ ಸಿ ಟಿ | ಪಕ್ಷೇತರ |
| 13 | ರಾಮಯ್ಯ.ಡಿ | ಪಕ್ಷೇತರ |
| 14 | ರಂಜಿತ ಎನ್ | ಪಕ್ಷೇತರ |
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊದಲನೇ ಹಂತದಲ್ಲಿ ಮತದಾನ ನಡೆಯಲಿದ್ದು, ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications