ಲೋಕ ಅದಾಲತ್ನಲ್ಲಿ ನ್ಯಾಯಾಧೀಶರ ಕಿವಿಮಾತಿಗೆ ಒಪ್ಪಿ ಒಂದಾದ ಮದ್ದೂರು ಜೋಡಿ
ಮಂಡ್ಯ, ನವೆಂಬರ್ 15 : ದಾಂಪತ್ಯ ಕಲಹದಿಂದ ವಿಚ್ಛೇಧನದ ದಾವೆ ಹೂಡಿದ್ದ ಯುವ ದಂಪತಿಗೆ ಮದ್ದೂರು ಪಟ್ಟಣದ ಜೆಎಂಎಸಿ ನ್ಯಾಯಾಲಯ ಹೊಸ ಬದುಕು ಕಟ್ಟಿಕೊಳ್ಳಲು ದಾರಿ ತೋರಿಸಿದೆ. ಇತ್ತೀಚಿಗೆ ನಡೆದ ಲೋಕ ಅದಾಲತ್ನಲ್ಲಿ ನ್ಯಾಯಾಧೀಶರು ನೀಡಿದ ಹಿತವಚನಗಳಿಗೆ ತಲೆಬಾಗಿ ಮತ್ತೆ ಬಾಳ ಸಂಗಾತಿಗಳಾದ ಪ್ರಸಂಗ ನಡೆದಿದೆ.
ಮದ್ದೂರು ತಾಲೂಕು ಆತಗೂರು ಹೋಬಳಿಯ ನಿಲುಬಾಗಿಲು ಗ್ರಾಮದ ವೆಂಕಟೇಶ್ ದಂಪತಿ ಪ್ರೇಮ ವಿವಾಹವಾಗಿದ್ದರು. ನಂತರ ಕಳೆದ ಮೂರು ವರ್ಷದಳಿಂದ ದಾಂಪತ್ಯ ಕಲಹದಿಂದ ಬೇರೆ ಬೇರೆಯಾಗಿದ್ದರು. ಈ ಹಿನ್ನೆಲೆಯಲ್ಲಿ ದಂಪತಿ ವಿಚ್ಚೇದನ ಕೋರಿ ಸಿವಿಲ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ನಡೆಸುತ್ತಿದ್ದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಸರ್ಪರಾಜ್ ಹುಸೇನ್ ಕಿತ್ತೂರು ಅವರು ಅರ್ಜಿ ವಿಚಾರಣೆಗೆ ಅಂಗೀಕರಿಸಿದರು.
ನಂತರ ಲೋಕಅದಾಲತ್ನಲ್ಲಿ ಜೀವನದ ಮಹತ್ವ ಕುರಿತು ಹಿತವಚನ ನೀಡಿ ಒಂದಾಗಿ ಬಾಳ್ವೆ ನಡೆಸುವಂತೆ ನ್ಯಾಯಾಧೀಶ ಸರ್ಪರಾಜ್ ಹುಸೇನ್ ಕಿತ್ತೂರು ಅವರು ದೂರಾಗಬೇಕೆಂದಿದ್ದ ಜೋಡಿಗಳಿಗೆ ಕಿವಿಮಾತು ಹೇಳಿದ್ದರು. ನ್ಯಾಯಾಧೀಶರ ಮಾತಿಗೆ ತಲೆಬಾಗಿದ ವೆಂಕಟೇಶ್ ದಂಪತಿ ವಿಚ್ಚೇದನಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ಹಿಂದಕ್ಕೆ ಪಡೆದು ಒಂದಾಗಿ ಬಾಳುವುದಾಗಿ ನ್ಯಾಯಾಧೀಶರಿಗೆ ಭರವಸೆ ನೀಡಿದ್ದಾರೆ.

ನಂತರ ನ್ಯಾಯಾಧೀಶರಾದ ಸರ್ಪರಾಜ್ ಹುಸೇನ್ ಹಾಗೂ ನೆರೆದಿದ್ದ ವಕೀಲರ ಸಮ್ಮುಖದಲ್ಲಿ ಪರಸ್ಪರ ಪುಷ್ಪಮಾಲೆ ಬದಲಾಯಿಸಿಕೊಂಡು ಸಿಹಿ ತಿನ್ನಿಸಿ ನ್ಯಾಯಾಲಯದ ಆವರಣದಿಂದ ಕೈ ಕೈ ಹಿಡಿದು ನ್ಯಾಯಾಲಯದ ಆವರಣದಿಂದ ಹೊರನಡೆದರು. ಅರ್ಜಿದಾರರ ಪರ ಗೆಜ್ಜಲಗೆರೆ ಶಿವಪ್ರಸಾದ್ ಹಾಗೂ ಆತಗೂರು ರಮೇಶ್ ವಾದಿಸಿದ್ದರು.
ಇನ್ನು ರಾಜ್ಯಾದ್ಯಂತ ನವೆಂಬರ್12ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ 14,77,285 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈವರೆಗೆ ಲೋಕ ಅದಾಲತ್ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳಲ್ಲಿ ಈ ಬಾರಿಯ ಸಂಖ್ಯೆ ಹೊಸ ದಾಖಲೆ ಸೃಷ್ಟಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications